Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿಂಗ್ ರಜಪೂತ್ 'ದೇವರ ಮಗ' ಎಂದು ನೆನೆದ ಮಾಜಿ ಪ್ರೇಯಸಿ
ಹಸನ್ಮುಖಿ, ಸ್ಫುರದ್ರೂಪಿ ಹಾಗೂ ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ಕಣ್ಮರೆಯಾಗಿ ಇಂದಿಗೆ (ಜುಲೈ 14) ಒಂದು ತಿಂಗಳು. ಅವರ ಸಾವು ಮೂಡಿಸಿರುವ ಆಘಾತದಿಂದ ಹೊರಬರಲು ಇನ್ನೂ ಅನೇಕರಿಗೆ ಸಾಧ್ಯವಾಗಿಲ್ಲ. ಅವರ ಆತ್ಮಹತ್ಯೆ ಪ್ರಕರಣ ಸುತ್ತ ಎದ್ದಿರುವ ಅನುಮಾನಗಳು, ಬಾಲಿವುಡ್ನ ಸ್ವಜನಪಕ್ಷಪಾತದ ವಿರುದ್ಧ ನಡೆಯುತ್ತಿರುವ ಚರ್ಚೆಗಳು ಮತ್ತೊಂದು ಹಂತದಲ್ಲಿದೆ.
Recommended Video
ಈ ನಡುವೆ ಸುಶಾಂತ್ ಅವರ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ ಮತ್ತು ಗೆಳತಿ ರಿಯಾ ಚಕ್ರಬೊರ್ತಿ ಯಾವುದೇ ಹೇಳಿಕೆ ನೀಡದೆ ಇರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಸುಶಾಂತ್ ನಿಧನರಾಗಿ ಒಂದು ತಿಂಗಳ ಬಳಿಕ ಅಂಕಿತಾ ಕೊನೆಗೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಸಲ್ಮಾನ್ ಖಾನ್ ಪರೋಕ್ಷ ಕಾರಣ?: ಪ್ರಕರಣಕ್ಕೆ ಟ್ವಿಸ್ಟ್
ಮನೆಯ ದೇವರಕೋಣೆಯಲ್ಲಿ ಹೂವುಗಳಿಂದ ಅಲಂಕರಿಸಿದ ಸಣ್ಣದೊಂದು ಹಣತೆ ಹಚ್ಚಿಟ್ಟು ಸುಶಾಂತ್ಗೆ ಗೌರವ ಸಲ್ಲಿಸಿರುವ ಅಂಕಿತಾ 'ದೇವರ ಮಗ' ಎಂದು ಕ್ಯಾಪ್ಷನ್ ನೀಡಿದ್ದಾರೆ.
ಸುಶಾಂತ್ ಸಿಂಗ್ನದ್ದು ಕೊಲೆಯಾ? ಚಿತ್ರಗಳು ಕೊಡುತ್ತಿವೆ ಸುಳಿವು?
ಜುಲೈ 13ರಂದು ಅಂಕಿತಾ ಸಾಮಾಜಿಕ ಜಾಲತಾಣದಲ್ಲಿ ಕೊನೆಯ ಬಾರಿಗೆ ವಿಡಿಯೋವೊಂದನ್ನು ಪ್ರಕಟಿಸಿದ್ದರು. ನಂತರ ಸುಶಾಂತ್ ಸಾವಿನ ಕುರಿತು ಅವರು ಒಂದೂ ಹೇಳಿಕೆ ನೀಡದೆ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದರು.
ಬಿಹಾರದ ರಸ್ತೆಗೆ ಸುಶಾಂತ್ ಸಿಂಗ್ ರಜಪೂತ್ ಹೆಸರು ನಾಮಕರಣ
ಸುಶಾಂತ್ ಸಿಂಗ್ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಅಂಕಿತಾ ಬಗ್ಗೆ ಅನೇಕರು ಅನುಕಂಪ ವ್ಯಕ್ತಪಡಿಸಿದ್ದರು. ಮುಂಬೈನಲ್ಲಿ ಸುಶಾಂತ್ ಮನೆಗೆ ತೆರಳಿ ಅವರ ಕುಟುಂಬದವರನ್ನು ಭೇಟಿ ಮಾಡಿದ್ದ ಅಂಕಿತಾ, ಅವರಿಗೆ ಧೈರ್ಯ ತುಂಬಿದ್ದರು. ಆದರೆ ಸ್ವತಃ ಅಂಕಿತಾ ಬಿಕ್ಕಿ ಬಿಕ್ಕಿ ಅತ್ತಿದ್ದರು. ಆ ನೋವಿನಿಂದ ಹೊರಬರಲು ಅವರಿಗೆ ಅನೇಕ ದಿನಗಳು ಬೇಕಾಗಿತ್ತು ಎಂದು ಅವರ ಹತ್ತಿರದವರು ಹೇಳಿದ್ದಾರೆ.