Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
5 ದಿನದಲ್ಲಿ ಅನುಷ್ಕಾ-ಕೊಹ್ಲಿ ದಂಪತಿ ಸಂಗ್ರಹಿಸಿದ ದೇಣಿಗೆ ಎಷ್ಟು?
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಉದ್ದೇಶದಿಂದ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ದಂಪತಿ ನಿಧಿ ಸಂಗ್ರಹ ಅಭಿಯಾನ ಆರಂಭಿಸಿದ್ದರು.
ಐದು ದಿನದಲ್ಲಿ 5 ಕೋಟಿ ಹಣ ಸಂಗ್ರಹವಾಗಿದೆ ಎಂಬ ವಿಷಯ ಬಹಿರಂಗವಾಗಿದೆ. ಈ ಕುರಿತು ಖುದ್ದು ಅನುಷ್ಕಾ ಶರ್ಮಾ ತಮ್ಮ ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಹಂಚಿಕೊಂಡಿದ್ದು, '5 ದಿನಕ್ಕೆ 5.22 ಕೋಟಿ ಸಂಗ್ರಹವಾಗಿದೆ, ನೆರವು ನೀಡಿದ ಎಲ್ಲರಿಗೂ ಧನ್ಯವಾದಗಳು' ಎಂದು ತಿಳಿಸಿದ್ದಾರೆ.
ಒಂದೇ ದಿನಕ್ಕೆ ಕೋಟ್ಯಂತರ ಹಣ ಸಂಗ್ರಹಿಸಿದ ವಿರುಷ್ಕಾ: ಟೀಕೆಯೂ ಕಡಿಮೆಯಿಲ್ಲ
ಶುಕ್ರವಾರದಂದು (ಮೇ 7) ಅನುಷ್ಕಾ-ಕೊಹ್ಲಿ ದಂಪತಿ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ನಿಧಿ ಸಂಗ್ರಹಿಸುವ ಅಭಿಯಾನ ಆರಂಭಿಸಿದ್ದರು. ಮೊದಲ 24 ಗಂಟೆಯಲ್ಲಿ ಸುಮಾರು 3 ಕೋಟಿ ಹಣ ಸಂಗ್ರಹವಾಗಿತ್ತು. ಈಗ ಐದನೇ ದಿನಕ್ಕೆ ಐದು ಕೋಟಿ ಆಗಿದೆ. ಅಭಿಯಾನ ಆರಂಭಿಸಿದ ವಿರುಷ್ಕಾ ದಂಪತಿ ತಮ್ಮ ಕಡೆಯಿಂದ 2 ಕೋಟಿ ಹಣವನ್ನು ಕೋವಿಡ್ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿದ್ದರು.
ಅನುಷ್ಕಾ ಮತ್ತು ಕೊಹ್ಲಿ ಆರಂಭಿಸಿರುವ ಈ ಅಭಿಯಾನದಲ್ಲಿ ಸಂಗ್ರಹವಾದ ಹಣದಿಂದ ದೇಶಾದ್ಯಂತದ ಆಸ್ಪತ್ರೆಗಳಿಗೆ ಆಮ್ಲಜನಕ ಸಾಂದ್ರಕಗಳು ಮತ್ತು ಸಸ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದಾರೆ.
ಆಸ್ಪತ್ರೆಗಳು ಮತ್ತು ಕೋವಿಡ್-19 ಕೇಂದ್ರಗಳಲ್ಲಿ ಪ್ರಮುಖ ವೈದ್ಯಕೀಯ ಉಪಕರಣಗಳು ಮತ್ತು ವ್ಯಾಕ್ಸಿನೇಷನ್ ಸೌಲಭ್ಯಗಳನ್ನು ಪೂರೈಸುವ ಉದ್ದೇಶದಿಂದ ನಿಧಿಸಂಗ್ರಹಣೆ ಮಾಡಲಾಗುತ್ತಿದೆ ಎಂದು ಅನುಷ್ಕಾ ದಂಪತಿ ಈ ಮೊದಲೇ ತಿಳಿಸಿದ್ದರು.
Recommended Video
ಮತ್ತೊಂದೆಡೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಬ್ಬರು ಒಟ್ಟು ಆಸ್ತಿ ಮೌಲ್ಯ 900 ಕೋಟಿವರೆಗೂ ಇದೆ. ಆದರೆ, ಇಬ್ಬರು ಸೇರಿ 2 ಕೋಟಿ ದೇಣಿಗೆ ನೀಡಿದ್ದಾರೆ. ಜೊತೆಗೆ ಜನರನ್ನು ದೇಣಿಗೆ ನೀಡಿ ಎಂದು ಕೇಳುತ್ತಿದ್ದಾರೆ ಎಂದು ಟೀಕೆಯೂ ವ್ಯಕ್ತವಾಗಿದೆ.