Don't Miss!
- News PSI Re-Exam: ಪಿಎಸ್ಐ ಮರುಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟ: CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕಿತ್ಸೆ ನೀಡಲು ಬಂದಿದ್ದ ವೈದ್ಯರ ಮೇಲೆ ಹಲ್ಲೆ: ಕೆರಳಿ ಕೆಂಡವಾದ ಅನುಷ್ಕಾ
ಇಂಧೋರ್ ನಲ್ಲಿ ಕೆಟ್ಟ ಘಟನೆಯೊಂದು ನಡೆದಿದೆ. ಕೊರೊನಾ ಶಂಕಿತನೋರ್ವನಿಗೆ ಚಿಕಿತ್ಸೆ ನೀಡಲೆಂದು ಪುಣೆಯ ತಾತ್ಪಟ್ಟಿ ಭಕ್ಕಲ್ ಎಂಬಲ್ಲಿಗೆ ತೆರಳಿದ್ದ ವೈದ್ಯರ ತಂಡದ ಮೇಲೆ ಹಲ್ಲೆ ಮಾಡಲಾಗಿದೆ.
ಈ ಘಟನೆ ಆಕ್ರೋಶ ಹುಟ್ಟಿಸಿದ್ದು, ಜನರು ಕಲ್ಲು ಹೊಡೆದು ವೈದ್ಯರುಗಳನ್ನು ಓಡಿಸುತ್ತಿರುವ ವಿಡಿಯೋಗಳು ತುಂಬಿಹೋಗಿವೆ. ವೈದ್ಯರ ಮೇಲೆ ಹಲ್ಲೆ ಮಾಡಿದ ದುರುಳರನ್ನು ಬಂಧಿಸಲು ಒತ್ತಾಯಿಸಿದ್ದಾರೆ.
ಕೊರೊನಾ ಸಂಕಷ್ಟಕ್ಕೆ ಸಾಲು-ಸಾಲು ಸಾಹಯ ಘೋಷಿಸಿದ ಶಾರುಖ್ ಖಾನ್
ರಾಜಕಾ ರಣಿಗಳು, ಸಚಿವರುಗಳು, ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು ಸಹ ಈ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ನಟಿ ಅನುಷ್ಕಾ ಶರ್ಮಾ ಸಹ ಆಕ್ರೋಶ ಹೊರಹಾಕಿದ್ದಾರೆ.
ಕೊರೊನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ ಆರ್ಥಿಕ ಸಹಾಯ ಮಾಡಿರುವ ಅನುಷ್ಕಾ ಶರ್ಮಾ, ಕೊರೊನಾ ಸಂದರ್ಭದಲ್ಲಿ ಇನ್ನೂ ಕೆಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ಧ ಎಚ್ಚರಿಸುವ ಯತ್ನವನ್ನೂ ಮಾಡುತ್ತಿದ್ದಾರೆ.
ಇನ್ಸ್ಟಾಗ್ರಾಂ ನಲ್ಲಿ ಅನುಷ್ಕಾ ಪೋಸ್ಟರ್
ಇಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಇಂಧೋರ್ ನ ಸುದ್ದಿಯ ಚಿತ್ರ ಶೇರ್ ಮಾಡಿಕೊಂಡಿದ್ದು, ''ವೈದ್ಯಕೀಯ ಸಿಬ್ಬಂದಿಯನ್ನು ಅವರ ಕೆಲಸ ಮಾಡಲು ಬಿಡಿ, ಅವರು ದುಡಿಯುತ್ತಿರುವುದು 'ನಿಮಗಾಗಿ' ಎಂದು ಸಿಬ್ಬಂದಿಯ ಮೇಲೆ ಕಲ್ಲೆಸದವರನ್ನೇ ಉಲ್ಲೇಖಿಸಿ ಹೇಳಿದ್ದಾರೆ.
ಪ್ರಾಣ ಪಣಕ್ಕಿಟ್ಟು ಅವರು ಕೆಲಸ ಮಾಡುತ್ತಿದ್ದಾರೆ: ಅನುಷ್ಕಾ
ಮುಂದುವರೆದು, ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರುವುದು 'ನಿಮಗಾಗಿ' ಎಂದಿರುವ ಅನುಷ್ಕಾ ಶರ್ಮಾ, ಇದು ತೀರಾ ಕೆಟ್ಟ ಘಟನೆ ಎಂದಿರುವ ಅನುಷ್ಕಾ ಶರ್ಮಾ, ಈ ರೀತಿಯ ಕಾರ್ಯಗಳನ್ನು ಮಾಡುವುದರಿಂದ ಎದುರಾಗುವ ಅಪಾಯದ ಬಗ್ಗೆ ಅರಿತುಕೊಳ್ಳಿ ಎಂದು ಸಲಹೆಯನ್ನೂ ನೀಡಿದ್ದಾರೆ.
ವೈದ್ಯಕೀಯ ಸಿಬ್ಬಂದಿ ಮೇಲೆ ಕಲ್ಲು ತೂರಾಟ
ಇಂಧೋರ್ ನ ತಾತ್ಪಟ್ಟಿ ಭಕ್ಕಲ್ ಎಂಬಲ್ಲಿ ಕೊರೊನಾ ಶಂಕಿತನೋರ್ವ ಇರುವ ಬಗ್ಗೆ ಮಾಹಿತಿ ಇದ್ದು, ಆತನಿಗೆ ಚಿಕಿತ್ಸೆ ನೀಡಿ, ಅವಶ್ಯಕ ಸಲಹೆ ನೀಡಲೆಂದು ಮಹಿಳೆಯೂ ಇದ್ದ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿದ್ದರು. ಆದರೆ ಇವರ ಮೇಲೆ ಗುಂಪು ಹಲ್ಲೆ ಮಾಡಿದೆ. ಕಲ್ಲು ತೂರಿ ಅಲ್ಲಿಂದ ಓಡಿಸಿದೆ.
ಘಟನೆ ಸಂಭಂಧ ಕೆಲವರನ್ನು ಬಂಧಿಸಲಾಗಿದೆ
ಈ ಪ್ರಕರಣ ದೇಶದ ಗಮನ ಸೆಳೆದಿದ್ದು, ಪೊಲೀಸರು ಅಗತ್ಯ ಕೈಗೊಳ್ಳುತ್ತೇವೆ ಎಂದಿದ್ದು, ಈಗಾಗಲೇ ಕೆಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.