Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲೈಕಾ ಆರೋರಾಗೆ ಮೊದಲ ಪತಿಯಿಂದ ಸಿಕ್ತು ವಿಶೇಷ ಉಡುಗೊರೆ; ಏನದು?
ಬಾಲಿವುಡ್ ನ ಹಾಟ್ ನಟಿ ಮತ್ತು ಡಾನ್ಸರ್ ಮಲೈಕಾ ಅರೋರಾ ಯಾರಿಗೆ ತಾನೆ ಗೊತ್ತಿಲ್ಲ. ಮೊದಲ ಪತಿ ಅರ್ಬಾಜ್ ಖಾನ್ ರಿಂದ ವಿಚ್ಛೇದನ ಪಡೆದು ನಟ ಅರ್ಜುನ್ ಕಪೂರ್ ಜೊತೆ ಪ್ರೀತಿಯಲ್ಲಿರುವ ಮಲೈಕಾ ಸದಾ ಸುದ್ದಿಯಲ್ಲಿರುತ್ತಾರೆ. ಅರ್ಜುನ್ ಕಪೂರ್ ಜೊತೆ ಆಗಾಗ ಕಾಣಿಸಿಕೊಳ್ಳುವ ಮಲೈಕಾಗೆ ಮೊದಲ ಪತಿಯಿಂದ ವಿಶೇಷವಾದ ಉಡುಗೊರೆ ಸಿಕ್ಕಿದೆ.
ಅರ್ಬಾಜ್ ಖಾನ್ ರಿಂದ ದೂರ ಆದರೂ ಮಲೈಕಾ ಮೊದಲ ಪತಿ ಜೊತೆಗೆ ಉತ್ತಮ ಸ್ನೇಹ ಉಳಿಸಿಕೊಂಡಿದ್ದಾರೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಅರ್ಬಾಜ್ ಕಳುಹಿಸಿರುವ ಗಿಫ್ಟ್. ಇದೀಗ ಮಾವಿನ ಹಣ್ಣಿನ ಸೀಸನ್ ಪ್ರಾರಂಭವಾಗಿದೆ, ಅರ್ಬಾಜ್ ತನ್ನ ಮೊದಲ ಪತ್ನಿಗೆ ಒಂದು ಬಾಕ್ಸ್ ಮಾವಿನ ಹಣ್ಣನ್ನು ಗಿಫ್ಟ್ ಕಳುಹಿಸಿ ಸರ್ಪ್ರೈಸ್ ನೀಡಿದ್ದಾರೆ.
ಫೋಟೋ ವೈರಲ್: ಹಸಿರು ಬಣ್ಣದ ಉಡುಪು ತೊಟ್ಟು ಹಾಟ್ ಅವತಾರದಲ್ಲಿ ಮಿಂಚಿದ ನಟಿ ಮಲೈಕಾ
ಈ ಬಗ್ಗೆ ಸ್ವತಃ ಮಲೈಕಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಮಾವಿನ ಹಣ್ಣನ್ನು ಉಡುಗೊರೆ ಕೊಟ್ಟ ಅರ್ಬಾಜ್ ಗೆ ಧನ್ಯವಾದ ತಿಳಿಸಿದ್ದಾರೆ. ಇನ್ನು ವಿಶೇಷ ಎಂದರೆ ಮಲೈಕಾ ಸಹೋದರಿ ಅಮೃತಾ ಅರೋರಾ ಅವರಿಗೂ ತಾಜಾ ಮಾವಿನಹಣ್ಣನ್ನು ಉಡುಗೊರೆ ನೀಡಿದ್ದಾರೆ.
ಮಲೈಕಾ ಮತ್ತು ಅರ್ಬಾಜ್ ಖಾನ್ 1998ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟದರು. 18 ವರ್ಷಗಳ ಕಾಲ ಸಂಸಾರ ನಡೆಸಿದ್ದ ಈ ಜೋಡಿ 2016ರಲ್ಲಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರುವ ಮೂಲಕ ಇಡೀ ಬಾಲಿವುಡ್ ಗೆ ಶಾಕ್ ನೀಡಿದ್ದರು. 2017ರಲ್ಲಿ ಇಬ್ಬರು ಬೇರೆ ಬೇರೆ ಆಗಿದ್ದಾರೆ. ಈ ದಂಪತಿಗೆ ಅರ್ಹನ್ ಎನ್ನುವ ಮಗನಿದ್ದಾನೆ.
Recommended Video
ವಿಚ್ಛೇದನ ಬಳಿಕ ಮಲೈಕಾ ಬಾಲಿವುಡ್ ನಟ ಅರ್ಜನ್ ಕಪೂರ್ ಜೊತೆ ಪ್ರೀತಿಯಲ್ಲಿದ್ದಾರೆ. ಇಬ್ಬರು ಪ್ರೀತಿ-ಪ್ರೇಮದ ವಿಚಾರ ಗುಟ್ಟಾಗಿ ಉಳಿದಿಲ್ಲ. ಉತ್ತಮ ಸ್ನೇಹಿತರಷ್ಟೆ ಎಂದು ಹೇಳಿಕೊಂಡು ಓಡಾಡುತ್ತಿರುವ ಈ ಜೋಡಿ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನುವ ಸುದ್ದಿಯು ಇದೆ.