Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನುಷ್ಕಾ-ವಿರಾಟ್ ಗೆ ಹೊಸ ತಲೆಬಿಸಿ: ಲೀಗಲ್ ನೋಟೀಸ್ ನೀಡಿದ ಕಸ ಬಿಸಾಕಿದ ವ್ಯಕ್ತಿ.!
ಅನುಷ್ಕಾ ಶರ್ಮಾ ರ 'ಕಸ'ದ ರಂಪಾಟ ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಐಷಾರಾಮಿ ಕಾರಿನಲ್ಲಿ ಕೂತುಕೊಂಡು ರಸ್ತೆಗೆ ಪ್ಲಾಸ್ಟಿಕ್ ಬಿಸಾಡಿ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪತ್ನಿ ಕೋಪಕ್ಕೆ ಗುರಿಯಾಗಿದ್ದ ಅರ್ಹಾನ್ ಸಿಂಗ್ ಇದೀಗ ಕಾನೂನು ಮೊರೆ ಹೋಗಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಕೋಟ್ಯಾಂತರ ಜನರ ಮುಂದೆ ಮಾನ ಹರಾಜಿಗೆ ಹಾಕಿದ ವಿರಾಟ್-ಅನುಷ್ಕಾಗೆ ಬುದ್ದಿ ಕಲಿಸಲು ಅರ್ಹಾನ್ ಸಿಂಗ್ ಲೀಗಲ್ ನೋಟೀಸ್ ಕಳುಹಿಸಿದ್ದಾರೆ.
''ನನ್ನ ವಕೀಲರು ವಿರಾಟ್ ದಂಪತಿಗೆ ಲೀಗಲ್ ನೋಟೀಸ್ ನೀಡಿದ್ದಾರೆ. ಈಗ ಚೆಂಡು ಅವರ ಬಳಿ ಇದೆ. ಇನ್ನು ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ'' ಎಂದು ಖಾಸಗಿ ವಾಹಿನಿಯೊಂದಕ್ಕೆ ಅರ್ಹಾನ್ ಸಿಂಗ್ ತಿಳಿಸಿದ್ದಾರೆ.
ರಸ್ತೆ ಮೇಲೆ ಪ್ಲಾಸ್ಟಿಕ್ ಬಿಸಾಕಿದವನ ಮುಖಕ್ಕೆ ಮಂಗಳಾರತಿ ಮಾಡಿದ ಅನುಷ್ಕಾ.!
ಘಟನೆಯ ಹಿನ್ನಲೆ:
ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಕಾರ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಅರ್ಹಾನ್ ಸಿಂಗ್ ರಸ್ತೆ ಮೇಲೆ ಪ್ಲಾಸ್ಟಿಕ್ ಬಿಸಾಕಿದ್ದನ್ನ ನೋಡಿದ್ಮೇಲೆ, ''ರಸ್ತೆ ಮೇಲೆ ಕಸವನ್ನ ಯಾಕೆ ಎಸೆಯುತ್ತಿದ್ದೀರಾ.? ಪ್ಲಾಸ್ಟಿಕ್ ನ ರಸ್ತೆಗೆ ಯಾಕೆ ಎಸೆಯುತ್ತಿದ್ದೀರಾ.? ದಯವಿಟ್ಟು ಹುಷಾರಾಗಿರಿ. ರಸ್ತೆ ಮೇಲೆ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯಬೇಡಿ. ಕಸದ ಬುಟ್ಟಿ ಉಪಯೋಗಿಸಿ'' ಎಂದು ನಟಿ ಅನುಷ್ಕಾ ಶರ್ಮಾ ಬುದ್ಧಿ ಹೇಳಿದ ವಿಡಿಯೋನ ವಿರಾಟ್ ಕೊಹ್ಲಿ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಶೇರ್ ಮಾಡಿದ್ದರು.
ಒಳ್ಳೆಯದನ್ನೇ ಹೇಳಿದರೂ ಅನುಷ್ಕಾ ಕೆಟ್ಟವಳು: ಟ್ರೋಲಿಗರಿಗೆ ಶೇಮ್ ಎಂದ ವಿರಾಟ್.!
ಜೊತೆಗೆ, ''ರಸ್ತೆ ಮೇಲೆ ಕಸ ಎಸೆಯುತ್ತಿದ್ದ ವ್ಯಕ್ತಿಗೆ ಬುದ್ಧಿ ಹೇಳಿದ್ದೇವೆ. ಐಷಾರಾಮಿ ಕಾರ್ ನಲ್ಲಿ ಪ್ರಯಾಣ ಮಾಡುತ್ತಿದ್ದರೂ ತಲೆಯಲ್ಲಿ ಬುದ್ಧಿ ಇರುವುದಿಲ್ಲ. ಇಂತಹ ಜನ ನಮ್ಮ ದೇಶವನ್ನ ಹೇಗೆ ಸ್ವಚ್ಛವಾಗಿ ಇಡುತ್ತಾರೆ.? ಇದೇ ತರಹ ನಿಮ್ಮ ಅಕ್ಕ-ಪಕ್ಕದಲ್ಲಿ ಆಗುತ್ತಿದ್ದರೆ, ಹೀಗೇ ಬುದ್ಧಿ ಹೇಳಿ ಜನರಲ್ಲಿ ಅರಿವು ಮೂಡಿಸಿ'' ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದರು.
ಅನುಷ್ಕಾ ಬಾಯಿಂದ ಬಂದ ಮಾತುಗಳು ಕಸಕ್ಕಿಂತ ಕೀಳು ಎಂದ 'ಆ' ಶ್ರೀಮಂತ.!
ವಿರಾಟ್ ಕೊಹ್ಲಿ ಶೇರ್ ಮಾಡಿದ ವಿಡಿಯೋದಲ್ಲಿ ಪ್ಲಾಸ್ಟಿಕ್ ಬಿಸಾಕಿದ ವ್ಯಕ್ತಿಯ ಫೋಟೋ ಬ್ಲರ್ ಆಗಿರಲಿಲ್ಲ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ತಮಗೆ ಅನವಶ್ಯಕವಾಗಿ ಟಾರ್ಗೆಟ್ ಮಾಡಿ ಅವಮಾನ ಮಾಡಲಾಗಿದೆ ಎಂಬುದು ಅರ್ಹಾನ್ ಸಿಂಗ್ ವಾದ.
ತಗಳಪ್ಪಾ... ಅನುಷ್ಕಾ ಕೋಪಕ್ಕೆ ಗುರಿಯಾದವ ಒಂದ್ಕಾಲದಲ್ಲಿ 'ಬಾಲನಟ'.!
ಸದ್ಯ ವಿರಾಟ್ ದಂಪತಿಗೆ ಅರ್ಹಾನ್ ಸಿಂಗ್ ಲೀಗಲ್ ನೋಟೀಸ್ ನೀಡಿದ್ದಾರೆ. ಮುಂದೆ ಇನ್ನೇನು ಆಗುತ್ತೋ, ನೋಡಬೇಕು.