Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: ಶಾರುಖ್ ಪುತ್ರನಿಗೆ ಜಾಮೀನು ನಿರಾಕರಣೆ, ಆಘಾತಕಾರಿ ಅಂಶ ಬೆಳಕಿಗೆ
ಡ್ರಗ್ಸ್ ಪ್ರಕರಣದಲ್ಲಿ ಎನ್ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಜಾಮೀನು ನಿರಾಕರಿಸಲಾಗಿದೆ.
ಆರ್ಯನ್ ಖಾನ್ ವಿಚಾರಣೆ ನಡೆಸಿದ ಎನ್ಸಿಬಿಯು 'ಆರ್ಯನ್ ಖಾನ್ ಇಂದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ'. ಹಾಗಾಗಿ ಹೆಚ್ಚಿನ ತನಿಖೆಯ ಅಗತ್ಯವಿದ್ದು, ಆರ್ಯನ್ ಖಾನ್ಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದೆ.
''ಆರೋಪಿಯ ಗೆಳೆಯ ಸಹ ಆರೋಪಿ. ನಿಷೇಧಿತ ವಸ್ತುಗಳನ್ನು ಹೊಂದಿದ್ದ. ಹಾಗಾಗಿ ಈತ (ಆರ್ಯನ್ ಖಾನ್) ಮೇಲೆ ಗುಮಾನಿ ಸಹಜ. ತನಿಖೆ ಮುಗಿದರಷ್ಟೆ ಆರೋಪಗಳಿಂದ ಮುಕ್ತಿ ಸಾಧ್ಯ. ತನಿಖೆ ಬಹಳ ಪ್ರಮುಖ ಅಂಗ ಸಹ. ಹಾಗಾಗಿ ಆರೋಪಿ (ಆರ್ಯನ್ ಖಾನ್) ತನಿಖೆ ಮುಗಿಸಿಕೊಂಡು ಹೊರಗೆ ಹೋಗಲಿ'' ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.
ಆರ್ಯನ್ ಖಾನ್ ಅನ್ನು ಅಕ್ಟೋಬರ್ 7 ರ ವರೆಗೆ ಎನ್ಸಿಬಿ ವಶಕ್ಕೆ ನೀಡಿ ನ್ಯಾಯಾಲಯವು ಆದೇಶ ನೀಡಿದೆ. ''ಎನ್ಡಿಪಿಎಸ್ ಕಾಯ್ದೆಯ ಎಲ್ಲ ಪ್ರಕರಣಗಳು ಜಾಮೀನು ರಹಿತವಾದುವು. ಜಾಮೀನುಸಹಿತ, ಜಾಮೀನು ರಹಿತ ಎಂಬ ಪ್ರಶ್ನೆಯೇ ಇಲ್ಲಿ ಉದ್ಭವಿಸುವುದಿಲ್ಲ. ಆದರೆ ಪ್ರಶ್ನೆ ಉದ್ಭವಿಸುವುದು ಎನ್ಸಿಬಿ ವಶಕ್ಕೆ ನೀಡಬೇಕೆ ಬೇಡವೇ ಎಂಬುದು ಮಾತ್ರ'' ಎಂದು ನ್ಯಾಯಾಧೀಶರು ಆದೇಶದಲ್ಲಿ ಹೇಳಿದ್ದಾರೆ.
''ಪ್ರಾಸಿಕ್ಯೂಷನ್, ಬಂಧಿತ ಆರೋಪಿಯಿಂದ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ, ಹಾಗೂ ಅಪರಾಧದಲ್ಲಿ ಬಳಕೆಯಾದ ವಸ್ತುವೊಂದು ಪತ್ತೆಯಾಗಿದೆ'' ಎಂದು ಹೇಳಿರುವುದು ಗಮನಿಸಿಬೇಕಾಗಿದೆ ಎಂದು ನ್ಯಾಯಾಲಯ ತನ್ನ ಇಂದಿನ ಆದೇಶದಲ್ಲಿ ಹೇಳಿದೆ.
ಹೊಸ ವಿಷಯಗಳು ಬೆಳಕಿಗೆ ಬಂದಿರುವ ಕಾರಣ ಎನ್ಸಿಬಿಯು ಇನ್ನು ಕೆಲವೆಡೆ ದಾಳಿ ನಡೆಸಲಿದೆ. ಇನ್ನಷ್ಟು ಮಂದಿಯನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ಸತ್ಯಗಳನ್ನು ಪರಾಮರ್ಶಿಸಬೇಕಿದೆ ಎಂದು ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ.