Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿ ಹಾಕಿಸಲು ಎನ್ಸಿಬಿ ಯತ್ನಿಸುತ್ತಿದೆ: ಆರ್ಯನ್ ಖಾನ್
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ತಮ್ಮನ್ನು ಬಂಧಿಸಿದ ತನಿಖಾ ಸಂಸ್ಥೆ ಎನ್ಸಿಬಿ ವಿರುದ್ಧ ಆರೋಪ ಮಾಡಿದ್ದಾರೆ.
ಬಾಂಬೆ ಹೈಕೋರ್ಟ್ಗೆ ಜಾಮೀನು ಅರ್ಜಿ ಹಾಕಿರುವ ಆರ್ಯನ್ ಖಾನ್, ''ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಸಿಕ್ಕಿ ಹಾಕಿಸಲು ಎನ್ಸಿಬಿ ಸಂಚು ಮಾಡಿದೆ'' ಎಂದಿದ್ದಾರೆ.
ನನ್ನ ವಾಟ್ಸ್ಅಪ್ ಸಂದೇಶಗಳನ್ನು ತನ್ನ ಅನುಕೂಲಕ್ಕೆ ತಕ್ಕಂತೆ ತಪ್ಪಾಗಿ ಅರ್ಥೈಸಿಕೊಂಡು ಅದನ್ನೇ ಸತ್ಯವೆಂದು ವಾದಿಸುತ್ತಿದೆ. ಇದು ಅನ್ಯಾಯ ಎಂದು ಆರ್ಯನ್ ಖಾನ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ.
''ಎನ್ಸಿಬಿ ದಾಳಿಯ ವೇಳೆ ನನ್ನ ಬಳಿ ಯಾವುದೇ ನಿಷೇಧಿತ ಪದಾರ್ಥ ಸಿಕ್ಕಿಲ್ಲ ಹಾಗೂ ಎನ್ಸಿಬಿ ಬಂಧಿಸಿರುವ ಇತರ ಆರೋಪಿಗಳ ಪೈಕಿ ಅರ್ಬಾಜ್ ಸೇಠ್ ಹಾಗೂ ಅಚಿತ್ ಕುಮಾರ್ ಹೊರತುಪಡಿಸಿ ಇನ್ಯಾರ ಪರಿಚಯವೂ ಇಲ್ಲ'' ಎಂದಿದ್ದಾರೆ.
ಎನ್ಸಿಬಿ ಉಲ್ಲೇಖಿಸಿರುವ ವಾಟ್ಸ್ಅಪ್ ಸಂದೇಶಗಳು ದಾಳಿ ನಡೆಯುವ ಸಮಯಕ್ಕಿಂತ ಬಹಳ ಹಿಂದಿನವು. ಅವಕ್ಕೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅಲ್ಲದೆ ಆ ಸಂದೇಶಗಳು ದೂರ-ದೂರಕ್ಕೂ ಯಾವುದೇ ಪಿತೂರಿಯ ಉದ್ದೇಶದಿಂದ ಮಾಡಿದ್ದುವಲ್ಲ. ಆ ಚಾಟ್ಗಳ ಮೂಲಕ ಯಾವುದೇ ರಹಸ್ಯ ಸಂದೇಶ ವಿನಿಮಯ ಆಗಿಲ್ಲ'' ಎಂದು ಅರ್ಜಿಯಲ್ಲಿ ಹೇಳಿದ್ದಾರೆ ಆರ್ಯನ್ ಖಾನ್.
ಎನ್ಡಿಪಿಎಸ್ ವಿಶೇಷ ನ್ಯಾಯಾಲಯವು, ಸಾಕ್ಷ್ಯಗಳನ್ನು ತಿರುಚಬಹುದು ಎಂಬ ಆರೋಪದ ಮೇಲೆ ಜಾಮೀನು ನಿರಾಕರಿಸುವುದನ್ನು ಪ್ರಶ್ನೆ ಮಾಡಿರುವ ಆರ್ಯನ್ ಖಾನ್, ''ವ್ಯಕ್ತಿಯೊಬ್ಬ ಪ್ರಭಾವಿ ಆಗಿದ್ದ ಮಾತ್ರಕ್ಕೆ ಆತ ಸಾಕ್ಷ್ಯಗಳನ್ನು ಅಳಿಸಿ ಹಾಕಬಹುದು ಎಂದು ಗುಮಾನಿ ಪಡಲು ಕಾನೂನಿನಲ್ಲಿ ಅವಕಾಶ ಇಲ್ಲ'' ಎಂದು ಹೇಳಿದ್ದಾರೆ.
ಆರ್ಯನ್ ಖಾನ್ ಡ್ರಗ್ಸ್ ಸೇವಿಸುತ್ತಿದ್ದರು, ಡ್ರಗ್ಸ್ ಪೆಡ್ಲರ್ಗಳ ಜೊತೆ ಸಂಬಂಧ ಹೊಂದಿದ್ದರು. ವಿದೇಶದಿಂದ ಡ್ರಗ್ಸ್ ತರಿಸಿಕೊಳ್ಳಲು ಯತ್ನಿಸುತ್ತಿದ್ದರು ಎಂದು ಅವರ ವಾಟ್ಸ್ಆಪ್ ಚಾಟ್ನಿಂದ ತಿಳಿದು ಬಂದಿದೆ ಎಂದು ಎನ್ಸಿಬಿಯು ನ್ಯಾಯಾಲಯದಲ್ಲಿ ಹೇಳಿತ್ತು. ಆರ್ಯನ್ ಖಾನ್ ಹಾಗೂ ನಟಿ ಅನನ್ಯಾ ಪಾಂಡೆ ನಡುವೆ ನಡೆದ ವಾಟ್ಸ್ಆಪ್ ಚಾಟ್ನಲ್ಲಿ ಗಾಂಜಾದ ಉಲ್ಲೇಖ ಆಗಿದೆ ಎಂಬ ಕಾರಣಕ್ಕೆ ನಿನ್ನೆಯಷ್ಟೆ ನಟಿ ಅನನ್ಯಾ ಪಾಂಡೆಯನ್ನು ಎನ್ಸಿಬಿ ವಿಚಾರಣೆ ನಡೆಸಿದೆ.
ಆರ್ಯನ್ ಖಾನ್ ಅನ್ನು ಎನ್ಸಿಬಿಯು ಅಕ್ಟೋಬರ್ 03 ರಂದು ಬಂಧಿಸಿದೆ. ಆರ್ಯನ್ ಖಾನ್ ಜೊತೆಗೆ ಅವರ ಗೆಳೆಯ ಅರ್ಬಾಜ್ ಸೇಠ್ ಮತ್ತು ಮುನ್ಮುನ್ ಧಮೇಚಾ ಸಹ ಬಂಧನಕ್ಕೆ ಒಳಗಾಗಿದ್ದರು. ಆ ನಂತರ ಇನ್ನೂ ಐದು ಮಂದಿಯನ್ನು ಎನ್ಸಿಬಿ ಬಂಧಿಸಿದೆ. ಆರ್ಯನ್ ಖಾನ್ ಪರ ವಕೀಲರು ಈವರೆಗೆ ಮೂರು ಬಾರಿ ಜಾಮೀನಿಗಾಗಿ ಅರ್ಜಿ ಹಾಕಿದ್ದು, ಮೂರು ಬಾರಿಯೂ ಆರ್ಯನ್ಗೆ ಜಾಮೀನು ದೊರೆತಿಲ್ಲ. ಆರ್ಯನ್ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 30 ರ ವರೆಗೆ ವಿಸ್ತರಿಸಲಾಗಿದ್ದು, ಆ ವರೆಗೆ ಆರ್ಯನ್ ಖಾನ್ ಮುಂಬೈನ ಆರ್ಥರ್ ರಸ್ತೆಯ ಜೈಲಿನಲ್ಲಿ ಕಾಲ ಕಳೆಯಬೇಕಿದೆ.