Don't Miss!
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಡ್ತಾ ಪಂಜಾಬ್' ಚಿತ್ರದ ವಿವಾದ ಎಲ್ಲಿಯವರೆಗೆ ಬಂತು?
ಬಾಲಿವುಡ್ ನಟ ಶಾಹೀದ್ ಕಪೂರ್, ನಟಿ ಆಲಿಯಾ ಭಟ್, ನಟಿ ಕರೀನಾ ಕಪೂರ್ ಕಾಣಿಸಿಕೊಂಡಿರುವ ಬಹುನಿರೀಕ್ಷಿತ 'ಉಡ್ತಾ ಪಂಜಾಬ್' ಚಿತ್ರದ ಕುರಿತು ವಿವಾದ ಎದ್ದಿರುವ ಕುರಿತ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಮುಂದೂಡಿದೆ.
ಮುಂದಿನ ವಾರ ಜೂನ್ 13 ರಂದು ಚಿತ್ರದ ವಿವಾದದ ಕುರಿತಾಗಿ ಆದೇಶ ನೀಡುವುದಾಗಿ ನ್ಯಾಯಾಲಯ ಘೋಷಣೆ ಮಾಡಿದೆ.
ಉಡ್ತಾ ಪಂಜಾಬ್ ಸೆನ್ಸಾರ್ ಕಟ್ ಬಗ್ಗೆ ಉಂಟಾಗಿರುವ ವಿವಾದದ ಕುರಿತು ಫ್ಯಾಂಟಮ್ ಫಿಲ್ಮ್ಸ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್ 10 ರಂದು ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಸೆನ್ಸಾರ್ ಮಂಡಳಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.[ಉಡ್ತಾ ಪಂಜಾಬ್ ಚಿತ್ರಕ್ಕೆ 89 ಕಟ್, ಸೆನ್ಸಾರಿಗೆ ಟ್ವೀಟ್ ಪೆಟ್ಟು]
'ಸಾಮಾನ್ಯವಾಗಿ ಚಿತ್ರಮಂದಿರಗಳಿಗೆ ಬರುವ ಬಹುತೇಕ ಜನರು ಪ್ರೌಢಾವಸ್ಥೆಗೆ ಬಂದಿರುತ್ತಾರೆ. ತಾವು ಏನನ್ನು ನೋಡಬೇಕು ಹಾಗೂ ನೋಡಬಾರದು ಎಂಬ ಆಯ್ಕೆಯನ್ನು ಸೆನ್ಸಾರ್ ಮಂಡಳಿ ಜನರಿಗೆ ನೀಡಬೇಕು' ಎಂದು ನ್ಯಾಯಾಲಯ ಹೇಳಿದೆ.
ಸಿನಿಮಾದಲ್ಲಿ ಕೆಲವು ನಿಂದನೆ ಮತ್ತು ಆಕ್ಷೇಪಣಾರ್ಹ ಪದಗಳಿವೆ. ಜೊತೆಗೆ ಇನ್ನು ಕೆಲವು ದೃಶ್ಯಗಳು ಅಸಭ್ಯತೆಯಿಂದ ಕೂಡಿದೆ, ಅದಕ್ಕೆ ಕತ್ತರಿ ಹಾಕಬೇಕು. ಹಾಗೂ ಪಾತ್ರಧಾರಿಗಳು ತಮ್ಮ ಕೈಗೆ ಡ್ರಗ್ಸ್ ಚುಚ್ಚಿಕೊಳ್ಳುತ್ತಿರುವ ಕೆಲವು ದೃಶ್ಯಗಳು ಕ್ಲೋಸ್ ಅಪ್ ನಲ್ಲಿದ್ದು, ಅವುಗಳನ್ನು ತೆಗೆದು ಹಾಕಲು ನ್ಯಾಯಾಲಯ ತಿಳಿಸಿದೆ.
ಇನ್ನು ಸಿನಿಮಾವನ್ನು ಟಿವಿಯಲ್ಲಿ ಅಥವಾ ಚಿತ್ರಮಂದಿರದಲ್ಲಿ ನೋಡಬೇಕೆಂಬುದು ಜನರ ಆಯ್ಕೆಗೆ ಬಿಟ್ಟ ವಿಚಾರ. ಪ್ರತಿಯೊಬ್ಬರಿಗೆ ಅವರದೇ ಆದ ಆಯ್ಕೆ ಅಂತ ಇರುತ್ತದೆ, ಎಂದು ಕೋರ್ಟ್ ವಿಚಾರಣೆಯನ್ನು ಜೂನ್ 13ಕ್ಕೆ ಮುಂದೂಡಿದೆ.