Don't Miss!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಡ್ತಾ ಪಂಜಾಬ್' ಚಿತ್ರದ ವಿವಾದ ಎಲ್ಲಿಯವರೆಗೆ ಬಂತು?
ಬಾಲಿವುಡ್ ನಟ ಶಾಹೀದ್ ಕಪೂರ್, ನಟಿ ಆಲಿಯಾ ಭಟ್, ನಟಿ ಕರೀನಾ ಕಪೂರ್ ಕಾಣಿಸಿಕೊಂಡಿರುವ ಬಹುನಿರೀಕ್ಷಿತ 'ಉಡ್ತಾ ಪಂಜಾಬ್' ಚಿತ್ರದ ಕುರಿತು ವಿವಾದ ಎದ್ದಿರುವ ಕುರಿತ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಮುಂದೂಡಿದೆ.
ಮುಂದಿನ ವಾರ ಜೂನ್ 13 ರಂದು ಚಿತ್ರದ ವಿವಾದದ ಕುರಿತಾಗಿ ಆದೇಶ ನೀಡುವುದಾಗಿ ನ್ಯಾಯಾಲಯ ಘೋಷಣೆ ಮಾಡಿದೆ.
ಉಡ್ತಾ ಪಂಜಾಬ್ ಸೆನ್ಸಾರ್ ಕಟ್ ಬಗ್ಗೆ ಉಂಟಾಗಿರುವ ವಿವಾದದ ಕುರಿತು ಫ್ಯಾಂಟಮ್ ಫಿಲ್ಮ್ಸ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್ 10 ರಂದು ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಸೆನ್ಸಾರ್ ಮಂಡಳಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.[ಉಡ್ತಾ ಪಂಜಾಬ್ ಚಿತ್ರಕ್ಕೆ 89 ಕಟ್, ಸೆನ್ಸಾರಿಗೆ ಟ್ವೀಟ್ ಪೆಟ್ಟು]
'ಸಾಮಾನ್ಯವಾಗಿ ಚಿತ್ರಮಂದಿರಗಳಿಗೆ ಬರುವ ಬಹುತೇಕ ಜನರು ಪ್ರೌಢಾವಸ್ಥೆಗೆ ಬಂದಿರುತ್ತಾರೆ. ತಾವು ಏನನ್ನು ನೋಡಬೇಕು ಹಾಗೂ ನೋಡಬಾರದು ಎಂಬ ಆಯ್ಕೆಯನ್ನು ಸೆನ್ಸಾರ್ ಮಂಡಳಿ ಜನರಿಗೆ ನೀಡಬೇಕು' ಎಂದು ನ್ಯಾಯಾಲಯ ಹೇಳಿದೆ.
ಸಿನಿಮಾದಲ್ಲಿ ಕೆಲವು ನಿಂದನೆ ಮತ್ತು ಆಕ್ಷೇಪಣಾರ್ಹ ಪದಗಳಿವೆ. ಜೊತೆಗೆ ಇನ್ನು ಕೆಲವು ದೃಶ್ಯಗಳು ಅಸಭ್ಯತೆಯಿಂದ ಕೂಡಿದೆ, ಅದಕ್ಕೆ ಕತ್ತರಿ ಹಾಕಬೇಕು. ಹಾಗೂ ಪಾತ್ರಧಾರಿಗಳು ತಮ್ಮ ಕೈಗೆ ಡ್ರಗ್ಸ್ ಚುಚ್ಚಿಕೊಳ್ಳುತ್ತಿರುವ ಕೆಲವು ದೃಶ್ಯಗಳು ಕ್ಲೋಸ್ ಅಪ್ ನಲ್ಲಿದ್ದು, ಅವುಗಳನ್ನು ತೆಗೆದು ಹಾಕಲು ನ್ಯಾಯಾಲಯ ತಿಳಿಸಿದೆ.
ಇನ್ನು ಸಿನಿಮಾವನ್ನು ಟಿವಿಯಲ್ಲಿ ಅಥವಾ ಚಿತ್ರಮಂದಿರದಲ್ಲಿ ನೋಡಬೇಕೆಂಬುದು ಜನರ ಆಯ್ಕೆಗೆ ಬಿಟ್ಟ ವಿಚಾರ. ಪ್ರತಿಯೊಬ್ಬರಿಗೆ ಅವರದೇ ಆದ ಆಯ್ಕೆ ಅಂತ ಇರುತ್ತದೆ, ಎಂದು ಕೋರ್ಟ್ ವಿಚಾರಣೆಯನ್ನು ಜೂನ್ 13ಕ್ಕೆ ಮುಂದೂಡಿದೆ.