Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆದಿಪುರುಷ್ ಸಿನಿಮಾವನ್ನು ಕೂಡಲೇ ಬ್ಯಾನ್ ಮಾಡಿ': ಅಯೋಧ್ಯೆ ಪ್ರಧಾನ ಅರ್ಚಕರ ಆಗ್ರಹ!
ಪ್ರಭಾಸ್ ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ 'ಆದಿಪುರುಷ್' ಟೀಸರ್ ರಿಲೀಸ್ ಆದಲ್ಲಿಂದ ಸುದ್ದಿಯಲ್ಲಿದೆ. ಸಿನಿಮಾ ಟೀಸರ್ ನೋಡಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ. ಕಳೆಪೆ ವಿಎಫ್ಎಕ್ಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
'ಆದಿಪುರುಷ್' ಸಿನಿಮಾದ ಟೀಸರ್ ಕಂಡು ಜನರು ಕಿಡಿಕಾರುತ್ತಿದ್ದಾರೆ. ಐತಿಹಾಸಿಕ ಪಾತ್ರಗಳನ್ನು ತಿರುಚಿರುವ ಆರೋಪವನ್ನು 'ಆದಿಪುರುಷ್' ಎದುರಿಸುತ್ತಿದೆ. ಟೀಸರ್ ರಿಲೀಸ್ ಆದಲ್ಲಿಂದ ಸಿನಿಮಾಗೆ ಹಿನ್ನೆಡೆಯಾಗುತ್ತಿದೆ.
'ಆದಿಪುರುಷ್' ಗ್ರಾಫಿಕ್ಸ್ ಬಗ್ಗೆ ರೊಚ್ಚಿಗೆದ್ದ ಫ್ಯಾನ್ಸ್: ಬಹಿರಂಗ ಪತ್ರ ಬರೆದ ಗ್ರಾಫಿಕ್ಸ್ ಕಂಪನಿ!
ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದು ಒಂದೆಡೆಯಾದರೆ, ಇನ್ನೊಂದು ಕಡೆ ಸಿನಿಮಾ ಬ್ಯಾನ್ ಮಾಡುವಂತೆ ಒತ್ತಡಗಳು ಕೇಳಿ ಬರುತ್ತಿವೆ. ಆಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕರು 'ಆದಿಪುರುಷ್' ಸಿನಿಮಾವನ್ನು ಬ್ಯಾನ್ ಮಾಡುವಂತೆ ಆಗ್ರಹ ಮಾಡಿದ್ದಾರೆ.
'ಆದಿಪುರುಷ್' ಸಿನಿಮಾ ಬ್ಯಾನ್ ಮಾಡಲು ಒತ್ತಾಯ!
'ಆದಿಪುರುಷ್' ವಿರುದ್ಧ ಆಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಕಿಡಿಕಾರಿದ್ದಾರೆ. "ಈ ಸಿನಿಮಾದಲ್ಲಿ ರಾಮಾಯಣವನ್ನೇ ತಿರುಚಲಾಗಿದೆ. ಶ್ರೀರಾಮ, ಹನುಮಾನ್ ಹಾಗೂ ರಾವಣ ಪಾತ್ರಗಳನ್ನು ತಪ್ಪಾಗಿ ತೋರಿಸಲಾಗಿದೆ. ಸಿನಿಮಾದಲ್ಲಿ ತೋರಿಸಲಾಗಿರುವ ಈ ಮೂರು ಪಾತ್ರಗಳನ್ನು ಹೀಗೇ ಇವೆ ಅನ್ನೋದು ಮಹಾಗ್ರಂಥ ಕನ್ಫರ್ಮ್ ಮಾಡಿಲ್ಲ. ಈ ಕಾರಣಕ್ಕೆ 'ಆದಿಪುರುಷ್' ಸಿನಿಮಾವನ್ನು ಕೂಡಲೇ ಬ್ಯಾನ್ ಮಾಡಬೇಕು. ಸಿನಿಮಾ ನಿರ್ಮಾಣ ಮಾಡೋದು ಕ್ರೈಂ ಅಲ್ಲ. ಆದರೆ, ಲೈಮ್ಲೈಟ್ಗೆ ಬರೋಕೆ ವಿವಾದ ಮಾಡಿಕೊಳ್ಳಬಾರದು" ಎಂದು ಹೇಳಿದ್ದಾರೆ.
ವಿಹೆಚ್ಪಿ ಇಂದಲೂ ಆಕ್ರೋಶ
ಅಯೋಧ್ಯೆಯ ಪ್ರಧಾನ ಅರ್ಚಕರಷ್ಟೇ ಅಲ್ಲ. ವಿಶ್ವ ಹಿಂದೂ ಪರಿಷತ್ ಕೂಡ ವಿರೋಧ ವ್ಯಕ್ತಪಡಿಸಿದೆ. 'ಆದಿಪುರುಷ್' ಟೀಸರ್ನಲ್ಲಿ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಪಾತ್ರಗಳನ್ನು ಬಿಂಬಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. " ಹಿಂದೂ ಸಮಾಜವನ್ನು ಲೇವಡಿ ಮಾಡಲಾಗಿದೆ" ಎಂದು ಆರೋಪಿಸಲಾಗಿದೆ. ಇಷ್ಟೇ ಅಲ್ಲದೆ ಸಿನಿಮಾವನ್ನು ರಿಲೀಸ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೂಡ ನೀಡಿದೆ.
'ಆದಿಪುರುಷ್' ಟೀಸರ್ನಿಂದ ವಿರೋಧ
'ಆದಿಪುರುಷ್' ಟೀಸರ್ಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ 'ಆದಿಪುರುಷ್' ಟೀಸರ್ ವಿರುದ್ಧ ಕಿಡಿಕಾರಿದ್ದಾರೆ. 'ಆದಿಪುರುಷ್' ತಂಡ ಹಿಂದೂ ದೇವತೆಗಳಿಗೆ ಅಗೌರವ ತಂದಿದೆ ಎಂದಿದ್ದಾರೆ. ಇತ್ತ ಮಾಳವಿಕಾ ಅವಿನಾಶ್ ಕೂಡ ಸಿನಿಮಾ ಬಗ್ಗೆ ಟೀಕಿಸಿದ್ದಾರೆ. ಸಿನಿಮಾದ ನಿರ್ದೇಶಕರು ರಾವಣನ ಪಾತ್ರದ ಬಗ್ಗೆ ಯಾವುದೇ ರೀತಿಯ ಸಂಶೋಧನೆ ಮಾಡಿಲ್ಲ ಎಂದು ಆರೋಪಿಸಿದ್ದರು.
'ಆದಿಪುರುಷ್' ವಿರುದ್ಧ ಕಿಡಿ
'ಆದಿಪುರುಷ್' ಸಿನಿಮಾ ಪ್ರಭಾಸ್ ವೃತ್ತಿ ಬದುಕಿನ ವಿಶಿಷ್ಟ ಸಿನಿಮಾ. ಶ್ರೀರಾಮನಾಗಿ ಪ್ರಭಾಸ್ ಕಾಣಿಸಿಕೊಳ್ಳುತ್ತಾರೆ ಅನ್ನುವಾಗಲೇ ಸಿನಿಪ್ರಿಯರು ಅಲರ್ಟ್ ಆಗಿದ್ದರು. ಈ ಸಿನಿಮಾ ನೋಡುವುದಕ್ಕೆ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಆದರೆ, ಟೀಸರ್ ರಿಲೀಸ್ ಆದ ಬಳಿಕ 'ಆದಿಪುರುಷ್' ಬಗ್ಗೆ ನೆಟ್ಟಿಗರು ಹೇವಿ ಟ್ರೋಲ್ ಮಾಡಿದ್ದರು. ಇದರಿಂದ ಚಿತ್ರತಂಡಕ್ಕೆ ಸಿಕ್ಕಾಪಟ್ಟೆ ಹಿನ್ನೆಡೆಯಾಗಿದೆ.