Don't Miss!
- News ಕೇಂದ್ರದ ಬಿಜೆಪಿ ಸರ್ಕಾರದಿಂದ ಅನ್ನದಾತರಿಗೆ ಮೋಸ ; ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಸಂಯುಕ್ತಾ ಪಾಟೀಲ್
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಕೊರೊನಾ ಸಬೂಬು ಹೇಳಿ ನ್ಯಾಯಾಲಯಕ್ಕೆ ಸಲ್ಮಾನ್ ಗೈರು
ಕೃಷ್ಣಮೃಗ ಬೇಟೆ ಪ್ರಕರಣದ ವಿಚಾರಣೆಗೆ ಸಲ್ಮಾನ್ ಖಾನ್ ಮತ್ತೆ ನ್ಯಾಯಾಲಯಕ್ಕೆ ಗೈರಾಗಿದ್ದಾರೆ. ಸೆಪ್ಟೆಂಬರ್ 16 ರ ಶನಿವಾರದಂದು ಸಲ್ಮಾನ್ ಖಾನ್ ಜೋದ್ಪುರ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಸಲ್ಮಾನ್ ಗೈರಾಗಿದ್ದಾರೆ.
ಕೊರೊನಾ ಕಾರಣ ನೀಡಿರುವ ಸಲ್ಮಾನ್ ಖಾನ್, ಕೊರೊನಾ ಇರುವ ಕಾರಣ ನ್ಯಾಯಾಲಯಕ್ಕೆ ಬರಲಾಗುವುದಿಲ್ಲ ಎಂದು ಹೇಳಿದ್ದಾರೆ. ಸಲ್ಮಾನ್ ಖಾನ್ ಕೊಟ್ಟ ಕಾರಣವನ್ನು ಒಪ್ಪಿಕೊಂಡಿರುವ ನ್ಯಾಯಾಲಯವು ಪ್ರಕರಣವನ್ನು ಫೆಬ್ರವರಿ 06 ಕ್ಕೆ ಮುಂದೂಡಿದೆ.
1998 ರಲ್ಲಿ ಜೋಧಪುರದಲ್ಲಿ 'ಹಮ್ ಸಾಥ್ ಸಾಥ್ ಹೇ' ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಸಲ್ಮಾನ್ ಖಾನ್, ಎರಡು ಕೃಷ್ಣಮೃಗಗಳನ್ನು ಬೇಟೆಯಾಗಿ ಕೊಂದಿದ್ದರು. ಈ ಪ್ರಕರಣದಲ್ಲಿ ಜೋಧಪುರ ಟ್ರಯಲ್ ನ್ಯಾಯಾಲಯವು ಸಲ್ಮಾನ್ ಖಾನ್ ಅಪರಾಧಿ ಎಂದು ತೀರ್ಪು ನೀಡಿ, ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಟ್ರಯಲ್ ಕೋರ್ಟ್ ತೀರ್ಪನ್ನು ಸೆಷನ್ಸ್ ಕೋರ್ಟ್ನಲ್ಲಿ ಪ್ರಶ್ನಿಸಿದ್ದು, ಇದರ ವಿಚಾರಣೆ ಪ್ರಸ್ತುತ ಜೋಧ್ಪುರ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ಕೆಲವು ತಿಂಗಳ ಹಿಂದೆ ಸಹ ಸಲ್ಮಾನ್ ಖಾನ್, ಕೊರೊನಾ ಕಾರಣ ನೀಡಿಯೇ ಪ್ರಕರಣದ ವಿಚಾರಣೆಗೆ ಗೈರಾಗಿದ್ದರು. ಈಗ ಎರಡನೇ ಬಾರಿ ಸಲ್ಮಾನ್ ಖಾನ್ ಕೊರೊನಾ ಕಾರಣ ನೀಡಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ.
Recommended Video
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ನೀಲಂ, ಟಬು ಅವರುಗಳು ಸಹ ಆರೋಪಿ ಆಗಿದ್ದರು. ಆದರೆ ಅವರನ್ನು ನ್ಯಾಯಾಲಯವು ಆರೋಪ ಮುಕ್ತಗೊಳಿಸಿತು. ಇದೇ ಪ್ರಕರಣದಲ್ಲಿ ಸಲ್ಮಾನ್ ಖಾನ್ ಒಂದು ವಾರ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಪ್ರಸ್ತುತ ಜಾಮೀನಿನ ಮೇಲೆ ಸಲ್ಮಾನ್ ಖಾನ್ ಹೊರಗಿದ್ದಾರೆ.