Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಣಿ ಅಪರಾಧಿ' ಎಂದ ಬಿಎಂಸಿ ವಿರುದ್ಧ ಸೋನು ಸೂದ್ ಹೋರಾಟ
ನಟ ಸೋನು ಸೂದ್ ಕೊರೊನಾ ಲಾಕ್ಡೌನ್ ಸಮಯದಲ್ಲಿ ನಿಜ ಹೀರೋ ಆಗಿ ಹೊರಹೊಮ್ಮಿದ್ದಾರೆ. ಆದರೆ ಅವರ ಮೇಲೆ ಮುಂಬೈ ಮಹಾನಗರ ಪಾಲಿಕೆಯು 'ಸರಣಿ ಅಪರಾಧಿ' ಎಂಬ ಆರೋಪ ಹೊರಿಸಿದೆ.
ಸೋನು ಸೂದ್, ಮುಂಬೈನ ತಮ್ಮ ಹೋಟೆಲ್ ಅನ್ನು ನಿಯಮಬಾಹಿರವಾಗಿ ನಿರ್ಮಿಸಿದ್ದಾರೆ. ಅಷ್ಟೆ ಅಲ್ಲದೆ, ಈ ರೀತಿ ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿ 'ಸರಣಿ ಅಪರಾಧಿ' ಎನಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸೋನು ಸೂದ್, 'ನಾನು ಕಾನೂನಾತ್ಮಕ ಹೋರಾಟ ಮಾಡುತ್ತೇನೆ, ನ್ಯಾಯಾಲಯ ಏನು ಹೇಳುತ್ತದೆ ನಾನು ಅದನ್ನು ಪಾಲಿಸುತ್ತೇನೆ' ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಸೋನು ಸೂದ್, ವಸತಿ ನಿಲಯವನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಿಸಿದ್ದಾರೆ. ಹೋಟೆಲ್ ಮಾದರಿಯಲ್ಲಿ ಅನುಮತಿ ಇಲ್ಲದೆ ಬದಲಾವಣೆ ಮಾಡಿದ್ದಾರೆ ಎಂದು ಬಿಎಂಸಿ ಆರೋಪಿಸಿದೆ.
ಬಿಎಂಸಿಯ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸೋನು ಸೂದ್, 'ನನಗೆ ಬಿಎಂಸಿ ಬಗ್ಗೆ ಬಹಳ ಗೌರವವಿದೆ, ನಾನು ನಿಯಮಕ್ಕೆ ಅನುಸಾರವಾಗಿಯೇ ನಡೆದುಕೊಂಡಿದ್ದೇನೆ. ಒಂದು ವೇಳೆ ತಪ್ಪಾಗಿದ್ದರೆ ತಿದ್ದಿಕೊಳ್ಳಲು ಸಹ ತಯಾರಿದ್ದೇನೆ. ಬಿಎಂಸಿಯ ನೊಟೀಸ್ ಗೆ ಎದುರಾಗಿ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದ ಆದೇಶವನ್ನು ನಾನು ಪಾಲಿಸುತ್ತೇನೆ' ಎಂದಿದ್ದಾರೆ ಸೋನು ಸೂದ್.
ಕೆಲವು ದಿನಗಳ ಹಿಂದೆ, ಬಿಎಂಸಿಯು ಕಂಗನಾ ರಣೌತ್ ಗೂ ಸಹ ಅಕ್ರಮ ನಿರ್ಮಾಣದ ನೊಟೀಸ್ ನೀಡಿ, ಅವರ ಕಚೇರಿಯನ್ನು ಧ್ವಂಸ ಗೊಳಿಸಿತ್ತು. ಶಾರುಖ್ ಖಾನ್, ಅಮಿತಾಬ್ ಬಚ್ಚನ್, ಜಾನ್ ಅಬ್ರಹಾಂ, ಕಪಿಲ್ ಶರ್ಮಾ ಅವರುಗಳ ನಿವಾಸದ ಕೆಲವು ಭಾಗಗಳನ್ನು ಸಹ ಅಕ್ರಮ ನಿರ್ಮಾಣ ಎಂದು ಆರೋಪಿಸಿ ಬಿಎಂಸಿ ಧ್ವಂಸಗೊಳಿಸಿತ್ತು.