Don't Miss!
- News ಸಹೋದರರ ಸವಾಲ್: ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ?
- Lifestyle ಬದಲಾಯ್ತು ಡಿಡಿ ಲೋಗೋ: ಕೇಸರಿ ಬಣ್ಣಕ್ಕೆ ತಿರುಗಿರುವುದಕ್ಕೆ ಕೆಲವರ ಮೆಚ್ಚುಗೆ, ಕೆಲವರ ಟೀಕೆ
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಣಿ ಅಪರಾಧಿ' ಎಂದ ಬಿಎಂಸಿ ವಿರುದ್ಧ ಸೋನು ಸೂದ್ ಹೋರಾಟ
ನಟ ಸೋನು ಸೂದ್ ಕೊರೊನಾ ಲಾಕ್ಡೌನ್ ಸಮಯದಲ್ಲಿ ನಿಜ ಹೀರೋ ಆಗಿ ಹೊರಹೊಮ್ಮಿದ್ದಾರೆ. ಆದರೆ ಅವರ ಮೇಲೆ ಮುಂಬೈ ಮಹಾನಗರ ಪಾಲಿಕೆಯು 'ಸರಣಿ ಅಪರಾಧಿ' ಎಂಬ ಆರೋಪ ಹೊರಿಸಿದೆ.
ಸೋನು ಸೂದ್, ಮುಂಬೈನ ತಮ್ಮ ಹೋಟೆಲ್ ಅನ್ನು ನಿಯಮಬಾಹಿರವಾಗಿ ನಿರ್ಮಿಸಿದ್ದಾರೆ. ಅಷ್ಟೆ ಅಲ್ಲದೆ, ಈ ರೀತಿ ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿ 'ಸರಣಿ ಅಪರಾಧಿ' ಎನಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸೋನು ಸೂದ್, 'ನಾನು ಕಾನೂನಾತ್ಮಕ ಹೋರಾಟ ಮಾಡುತ್ತೇನೆ, ನ್ಯಾಯಾಲಯ ಏನು ಹೇಳುತ್ತದೆ ನಾನು ಅದನ್ನು ಪಾಲಿಸುತ್ತೇನೆ' ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಸೋನು ಸೂದ್, ವಸತಿ ನಿಲಯವನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಿಸಿದ್ದಾರೆ. ಹೋಟೆಲ್ ಮಾದರಿಯಲ್ಲಿ ಅನುಮತಿ ಇಲ್ಲದೆ ಬದಲಾವಣೆ ಮಾಡಿದ್ದಾರೆ ಎಂದು ಬಿಎಂಸಿ ಆರೋಪಿಸಿದೆ.
ಬಿಎಂಸಿಯ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸೋನು ಸೂದ್, 'ನನಗೆ ಬಿಎಂಸಿ ಬಗ್ಗೆ ಬಹಳ ಗೌರವವಿದೆ, ನಾನು ನಿಯಮಕ್ಕೆ ಅನುಸಾರವಾಗಿಯೇ ನಡೆದುಕೊಂಡಿದ್ದೇನೆ. ಒಂದು ವೇಳೆ ತಪ್ಪಾಗಿದ್ದರೆ ತಿದ್ದಿಕೊಳ್ಳಲು ಸಹ ತಯಾರಿದ್ದೇನೆ. ಬಿಎಂಸಿಯ ನೊಟೀಸ್ ಗೆ ಎದುರಾಗಿ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದ ಆದೇಶವನ್ನು ನಾನು ಪಾಲಿಸುತ್ತೇನೆ' ಎಂದಿದ್ದಾರೆ ಸೋನು ಸೂದ್.
ಕೆಲವು ದಿನಗಳ ಹಿಂದೆ, ಬಿಎಂಸಿಯು ಕಂಗನಾ ರಣೌತ್ ಗೂ ಸಹ ಅಕ್ರಮ ನಿರ್ಮಾಣದ ನೊಟೀಸ್ ನೀಡಿ, ಅವರ ಕಚೇರಿಯನ್ನು ಧ್ವಂಸ ಗೊಳಿಸಿತ್ತು. ಶಾರುಖ್ ಖಾನ್, ಅಮಿತಾಬ್ ಬಚ್ಚನ್, ಜಾನ್ ಅಬ್ರಹಾಂ, ಕಪಿಲ್ ಶರ್ಮಾ ಅವರುಗಳ ನಿವಾಸದ ಕೆಲವು ಭಾಗಗಳನ್ನು ಸಹ ಅಕ್ರಮ ನಿರ್ಮಾಣ ಎಂದು ಆರೋಪಿಸಿ ಬಿಎಂಸಿ ಧ್ವಂಸಗೊಳಿಸಿತ್ತು.