Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಣಿ ಅಪರಾಧಿ' ಎಂದ ಬಿಎಂಸಿ ವಿರುದ್ಧ ಸೋನು ಸೂದ್ ಹೋರಾಟ
ನಟ ಸೋನು ಸೂದ್ ಕೊರೊನಾ ಲಾಕ್ಡೌನ್ ಸಮಯದಲ್ಲಿ ನಿಜ ಹೀರೋ ಆಗಿ ಹೊರಹೊಮ್ಮಿದ್ದಾರೆ. ಆದರೆ ಅವರ ಮೇಲೆ ಮುಂಬೈ ಮಹಾನಗರ ಪಾಲಿಕೆಯು 'ಸರಣಿ ಅಪರಾಧಿ' ಎಂಬ ಆರೋಪ ಹೊರಿಸಿದೆ.
ಸೋನು ಸೂದ್, ಮುಂಬೈನ ತಮ್ಮ ಹೋಟೆಲ್ ಅನ್ನು ನಿಯಮಬಾಹಿರವಾಗಿ ನಿರ್ಮಿಸಿದ್ದಾರೆ. ಅಷ್ಟೆ ಅಲ್ಲದೆ, ಈ ರೀತಿ ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿ 'ಸರಣಿ ಅಪರಾಧಿ' ಎನಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸೋನು ಸೂದ್, 'ನಾನು ಕಾನೂನಾತ್ಮಕ ಹೋರಾಟ ಮಾಡುತ್ತೇನೆ, ನ್ಯಾಯಾಲಯ ಏನು ಹೇಳುತ್ತದೆ ನಾನು ಅದನ್ನು ಪಾಲಿಸುತ್ತೇನೆ' ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಸೋನು ಸೂದ್, ವಸತಿ ನಿಲಯವನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಿಸಿದ್ದಾರೆ. ಹೋಟೆಲ್ ಮಾದರಿಯಲ್ಲಿ ಅನುಮತಿ ಇಲ್ಲದೆ ಬದಲಾವಣೆ ಮಾಡಿದ್ದಾರೆ ಎಂದು ಬಿಎಂಸಿ ಆರೋಪಿಸಿದೆ.
ಬಿಎಂಸಿಯ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸೋನು ಸೂದ್, 'ನನಗೆ ಬಿಎಂಸಿ ಬಗ್ಗೆ ಬಹಳ ಗೌರವವಿದೆ, ನಾನು ನಿಯಮಕ್ಕೆ ಅನುಸಾರವಾಗಿಯೇ ನಡೆದುಕೊಂಡಿದ್ದೇನೆ. ಒಂದು ವೇಳೆ ತಪ್ಪಾಗಿದ್ದರೆ ತಿದ್ದಿಕೊಳ್ಳಲು ಸಹ ತಯಾರಿದ್ದೇನೆ. ಬಿಎಂಸಿಯ ನೊಟೀಸ್ ಗೆ ಎದುರಾಗಿ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದ ಆದೇಶವನ್ನು ನಾನು ಪಾಲಿಸುತ್ತೇನೆ' ಎಂದಿದ್ದಾರೆ ಸೋನು ಸೂದ್.
ಕೆಲವು ದಿನಗಳ ಹಿಂದೆ, ಬಿಎಂಸಿಯು ಕಂಗನಾ ರಣೌತ್ ಗೂ ಸಹ ಅಕ್ರಮ ನಿರ್ಮಾಣದ ನೊಟೀಸ್ ನೀಡಿ, ಅವರ ಕಚೇರಿಯನ್ನು ಧ್ವಂಸ ಗೊಳಿಸಿತ್ತು. ಶಾರುಖ್ ಖಾನ್, ಅಮಿತಾಬ್ ಬಚ್ಚನ್, ಜಾನ್ ಅಬ್ರಹಾಂ, ಕಪಿಲ್ ಶರ್ಮಾ ಅವರುಗಳ ನಿವಾಸದ ಕೆಲವು ಭಾಗಗಳನ್ನು ಸಹ ಅಕ್ರಮ ನಿರ್ಮಾಣ ಎಂದು ಆರೋಪಿಸಿ ಬಿಎಂಸಿ ಧ್ವಂಸಗೊಳಿಸಿತ್ತು.