Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸೋನು ಸೂದ್ ವಿರುದ್ಧ ದೂರು ದಾಖಲಿಸಿದ ಮುಂಬೈ ಮಹಾನಗರ ಪಾಲಿಕೆ; ಕಾರಣವೇನು?
ನಟ ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಮುನ್ಸಿಪಲ್ ಕಾರ್ಪೋರೇಷನ್ ಪೊಲೀಸ್ ದೂರು ದಾಖಲಿಸಿದೆ. ಸೋನು ಸೂದ್ ಒಡೆತನದ ಮುಂಬೈನ ಜುಹುದಲ್ಲಿರುವ 6 ಅಂತಸ್ತಿನ ಶಕ್ತಿ ಸಾಗರ್ ವಸತಿ ಕಟ್ಟಡವನ್ನು ಅನುಮತಿ ಇಲ್ಲದೆ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ ಎನ್ನುವ ಆರೋಪ ಸೋನು ಸೂದ್ ವಿರುದ್ಧ ಕೇಳಿಬರುತ್ತಿದೆ.
ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ ಸೋನು ಸೂದ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸೋನು ಸೂದ್ ಅಗತ್ಯ ಅನುಮತಿಯನ್ನು ಹೊಂದಿದ್ದಾರೆ. ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದ ಅನುಮತಿಗೆ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ.
ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಸೋನು ಸೂದ್: ಈ ಬಗ್ಗೆ ನಟ ಹೇಳಿದ್ದೇನು?
ಬಿಎಂಸಿ ತನ್ನ ದೂರಿನಲ್ಲಿ ಸೋನು ಸೂದ್ ಅವರು ಸ್ಥಾಪಿಸಿದ ವಸತಿಗೃಹವನ್ನು ಅನುಮತಿ ಇಲ್ಲದೆ ವಸತಿ ಹೋಟೆಲ್ ಆಗಿ ಅನಧಿಕೃತವಾಗಿ ಬದಲಾಯಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಈ ಬಗ್ಗೆ ನೋಟಿಸ್ ನೀಡಿದರು ಸೋನು ಸೂದ್ ಪಾಲಿಸುತ್ತಿಲ್ಲ ಎಂದಿದೆ. 'ಸೋನು ಸೂದ್ ಅವರಿಗೆ ನೋಟಿಸ್ ನೀಡಿದರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ' ಎಂದು ಬಿಎಂಸಿ ಆರೋಪಿಸಿದೆ.
ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಸೋನು ಸೂದ್, 'ನಾನು ಬದಲಾಯಿಸಲು ಬಿಎಂಸಿಯಿಂದ ಅನುಮೋದನೆ ಪಡೆದಿದ್ದೇನೆ. ಇದು ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರದ ಅನುಮೋದನೆಗೆ ಒಳಪಟ್ಟಿದೆ. ಕೊರೊನಾ ಕಾರಣ ಇನ್ನು ಅನುಮತಿ ಸಿಕ್ಕಿಲ್ಲ. ಇದರಲ್ಲಿ ಯಾವುದೇ ಅಕ್ರಮವಿಲ್ಲ. ನಾನು ಸಾಂಕ್ರಾಮಿಕ ಸಮಯದಲ್ಲಿ ಕೊರೊನಾ ವಾರಿಯರ್ಸ್ ಗೆ ಈ ಹೋಟೆಲ್ ನೀಡಿದ್ದೆ. ಒಂದು ವೇಳೆ ಅನುಮತಿ ಬರದಿದ್ದರೆ ಅದನ್ನು ಮತ್ತೆ ಹೋಟಲ್ ನಿಂದ ವಸತಿ ಗೃಹಮಾಡುತ್ತೇನೆ. ಬಿಎಂಸಿಯ ವಿರುದ್ಧ ನಾನು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ' ಎಂದು ಸೋನು ಸೂದ್ ಪ್ರತಿಕ್ರಿಯೆ ನೀಡಿದ್ದಾರೆ.
ಬಹುಭಾಷಾ ನಟ ಸೋನು ಸೂದ್ ಈಗ ರಿಯಲ್ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಕ್ಕೆ ಇಡೀ ದೇಶ ಮೆಚ್ಚಿಕೊಂಡಿದೆ. ಸೋನು ಸೂದ್ ಅವರನ್ನು ದೇವರಂತೆ ಆಧರಿಸುತ್ತಿದ್ದಾರೆ.
ಅನೇಕರ ಪಾಲಿನ ನಿಜವಾದ ದೇವರವಾಗಿರುವ ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಪಾಲಿಗೆ ಮಾಡಿರುವ ಆರೋಪ ಅಭಿಮಾನಿಗಳಿಗೆ ಬೇಸರ ತರಿಸಿದೆ.