Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸೋನು ಸೂದ್ ವಿರುದ್ಧ ದೂರು ದಾಖಲಿಸಿದ ಮುಂಬೈ ಮಹಾನಗರ ಪಾಲಿಕೆ; ಕಾರಣವೇನು?
ನಟ ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಮುನ್ಸಿಪಲ್ ಕಾರ್ಪೋರೇಷನ್ ಪೊಲೀಸ್ ದೂರು ದಾಖಲಿಸಿದೆ. ಸೋನು ಸೂದ್ ಒಡೆತನದ ಮುಂಬೈನ ಜುಹುದಲ್ಲಿರುವ 6 ಅಂತಸ್ತಿನ ಶಕ್ತಿ ಸಾಗರ್ ವಸತಿ ಕಟ್ಟಡವನ್ನು ಅನುಮತಿ ಇಲ್ಲದೆ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ ಎನ್ನುವ ಆರೋಪ ಸೋನು ಸೂದ್ ವಿರುದ್ಧ ಕೇಳಿಬರುತ್ತಿದೆ.
ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ ಸೋನು ಸೂದ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸೋನು ಸೂದ್ ಅಗತ್ಯ ಅನುಮತಿಯನ್ನು ಹೊಂದಿದ್ದಾರೆ. ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದ ಅನುಮತಿಗೆ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ.
ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಸೋನು ಸೂದ್: ಈ ಬಗ್ಗೆ ನಟ ಹೇಳಿದ್ದೇನು?
ಬಿಎಂಸಿ ತನ್ನ ದೂರಿನಲ್ಲಿ ಸೋನು ಸೂದ್ ಅವರು ಸ್ಥಾಪಿಸಿದ ವಸತಿಗೃಹವನ್ನು ಅನುಮತಿ ಇಲ್ಲದೆ ವಸತಿ ಹೋಟೆಲ್ ಆಗಿ ಅನಧಿಕೃತವಾಗಿ ಬದಲಾಯಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಈ ಬಗ್ಗೆ ನೋಟಿಸ್ ನೀಡಿದರು ಸೋನು ಸೂದ್ ಪಾಲಿಸುತ್ತಿಲ್ಲ ಎಂದಿದೆ. 'ಸೋನು ಸೂದ್ ಅವರಿಗೆ ನೋಟಿಸ್ ನೀಡಿದರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ' ಎಂದು ಬಿಎಂಸಿ ಆರೋಪಿಸಿದೆ.
ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಸೋನು ಸೂದ್, 'ನಾನು ಬದಲಾಯಿಸಲು ಬಿಎಂಸಿಯಿಂದ ಅನುಮೋದನೆ ಪಡೆದಿದ್ದೇನೆ. ಇದು ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರದ ಅನುಮೋದನೆಗೆ ಒಳಪಟ್ಟಿದೆ. ಕೊರೊನಾ ಕಾರಣ ಇನ್ನು ಅನುಮತಿ ಸಿಕ್ಕಿಲ್ಲ. ಇದರಲ್ಲಿ ಯಾವುದೇ ಅಕ್ರಮವಿಲ್ಲ. ನಾನು ಸಾಂಕ್ರಾಮಿಕ ಸಮಯದಲ್ಲಿ ಕೊರೊನಾ ವಾರಿಯರ್ಸ್ ಗೆ ಈ ಹೋಟೆಲ್ ನೀಡಿದ್ದೆ. ಒಂದು ವೇಳೆ ಅನುಮತಿ ಬರದಿದ್ದರೆ ಅದನ್ನು ಮತ್ತೆ ಹೋಟಲ್ ನಿಂದ ವಸತಿ ಗೃಹಮಾಡುತ್ತೇನೆ. ಬಿಎಂಸಿಯ ವಿರುದ್ಧ ನಾನು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ' ಎಂದು ಸೋನು ಸೂದ್ ಪ್ರತಿಕ್ರಿಯೆ ನೀಡಿದ್ದಾರೆ.
ಬಹುಭಾಷಾ ನಟ ಸೋನು ಸೂದ್ ಈಗ ರಿಯಲ್ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಕ್ಕೆ ಇಡೀ ದೇಶ ಮೆಚ್ಚಿಕೊಂಡಿದೆ. ಸೋನು ಸೂದ್ ಅವರನ್ನು ದೇವರಂತೆ ಆಧರಿಸುತ್ತಿದ್ದಾರೆ.
ಅನೇಕರ ಪಾಲಿನ ನಿಜವಾದ ದೇವರವಾಗಿರುವ ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಪಾಲಿಗೆ ಮಾಡಿರುವ ಆರೋಪ ಅಭಿಮಾನಿಗಳಿಗೆ ಬೇಸರ ತರಿಸಿದೆ.