Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವು-ಬದುಕಿಗಾಗಿ ಹೋರಾಡುತ್ತಿರುವ ಬಾಲಿವುಡ್ ನಟ
ಬಾಲಿವುಡ್ ಹಿರಿಯ ನಟ ಫರಾಜ್ ಖಾನ್ ಅನಾರೋಗ್ಯಕ್ಕೆ ತುತ್ತಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಐಸಿಯುನಲ್ಲಿ ಬದುಕಿಗಾಗಿ ಸೆಣಸಾಡುತ್ತಿದ್ದಾರೆ.
ಮೆದುಳಿಗೆ ಸಂಬಂಧಿಸಿದಂತೆ ಕಾಯಿಲೆಯಿಂದ ಬಳಲುತ್ತಿರುವ ಫರಾಜ್ ಖಾನ್ ಆರೋಗ್ಯ ಸ್ಥಿತಿ ಈಗ ಬಹಳ ಗಂಭೀರವಾಗಿದೆ. ಕಳೆದ ಐದು ದಿನಗಳಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದಯುತ್ತಿದ್ದು, ವೆಂಟಿಲೇಟರ್ ಸಹಾಯದಿಂದ ಇದ್ದಾರೆ ಎಂದು ಹೇಳಲಾಗಿದೆ. ಮುಂದೆ ಓದಿ...
ಸಹೋದರ ಹೇಳಿದ್ದೇನು?
ಫರಾಜ್ ಖಾನ್ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಸಹೋದರ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದು ''ಫರಾಜ್ ಸುಮಾರು ಒಂದು ವರ್ಷದಿಂದ ಕೆಮ್ಮು ಮತ್ತು ಅವನ ಎದೆಯಲ್ಲಿ ಸೋಂಕಿನಿಂದ ಬಳಲುತ್ತಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನಲ್ಲಿ ಹರ್ಪಿಸ್ ಸೋಂಕು ಪತ್ತೆಯಾದ ಬಳಿಕ ಮೂರು ಬಾರಿ ರೋಗಗ್ರಸ್ತವಾಗುವಿಕೆ ಆಯಿತು. ಅದಾದ ಬಳಿಕ ಅವನ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತು' ಎಂದು ತಿಳಿಸಿದ್ದಾರೆ.
ಚಿತ್ರೀಕರಣ ವೇಳೆ ಗಾಯಗೊಂಡ ನಟ ಟೋವಿನೋ ಥಾಮಸ್ ಆರೋಗ್ಯದಲ್ಲಿ ಸ್ಥಿರ: ICUನಲ್ಲಿ ಚಿಕಿತ್ಸೆ
ಶೇಕಡಾ 50ರಷ್ಟು ಬದುಕುಳಿಯುವ ಸಾಧ್ಯತೆ
"ಕಳೆದ ಐದು ದಿನಗಳಿಂದ ವೆಂಟಿಲೇಟರ್ನಲ್ಲಿದ್ದಾರೆ ಮತ್ತು ವೈದ್ಯರ ಪ್ರಕಾರ, ಅವರ ಬದುಕುಳಿಯುವ ಸಾಧ್ಯತೆಗಳು ಶೇಕಡಾ 50% ರಷ್ಟು ಮಾತ್ರ ಸಾಧ್ಯತೆ ಇದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದರೂ ಪ್ರಜ್ಞಾಹೀನರಾಗಿದ್ದಾರೆ" ಎಂದು ಸಹೋದರ ಫಹ್ಮಾನ್ ಮಾಹಿತಿ ನೀಡಿದ್ದಾರೆ.
ಹಣಕಾಸಿನ ನೆರವು ಬೇಕಾಗಿದೆ
"ಹೆಚ್ಚಿನ ಚಿಕಿತ್ಸೆಗಾಗಿ ನಮಗೆ 25 ಲಕ್ಷ ರೂ ಹಣ ಬೇಕು. ನಮ್ಮ ಬಳಿಯಿದ್ದ ಹಣವನ್ನು ಈಗಾಗಲೇ ಚಿಕಿತ್ಸೆಗೆ ಖರ್ಚು ಮಾಡಲಾಗಿದೆ. ಮುಂದೆ ಏನಾಗಲಿದೆ ಅಥವಾ ಚಿಕಿತ್ಸೆಗಾಗಿ ನಾವು ಹೇಗೆ ಹಣಕಾಸು ವ್ಯವಸ್ಥೆ ಮಾಡಲಿದ್ದೇವೆ ಎಂದು ನನಗೆ ತಿಳಿದಿಲ್ಲ. ಕೊರೊನಾದಿಂದ ಪ್ರತಿಯೊಬ್ಬರೂ ಹಣಕಾಸಿನ ಬಿಕ್ಕಟ್ಟಿನಲ್ಲಿದ್ದಾರೆ. ನಾವು ಭರವಸೆಯನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ನಾವು ನಿಧಿಸಂಗ್ರಹದ ಮೂಲಕ ಸಹಾಯವನ್ನು ಕೇಳಲು ಬಯಸುತ್ತಿದ್ದೇವೆ"ಎಂದು ನಟನ ಸಹೋದರ ಟ್ಯಾಬ್ಲಾಯ್ಡ್ಗೆ ತಿಳಿಸಿದ್ದಾರೆ.
ಬೆಂಗಾಲಿಯ ಖ್ಯಾತ ನಟ ಸೌಮಿತ್ರಾ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ: ICUನಲ್ಲಿ ಚಿಕಿತ್ಸೆ
ಸಹಾಯಕ್ಕಾಗಿ ಬೇಡಿದ ಪೂಜಾ ಭಟ್
ಫರಾಜ್ ಖಾನ್ ಅವರ ಅನಾರೋಗ್ಯ ಸ್ಥಿತಿ ಬಗ್ಗೆ ಬೇಸರ ವ್ಯಕ್ತಪಡಿಸಿರುವ ನಟಿ ಪೂಜಾ ಭಟ್ ತಮ್ಮ ಟ್ವಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಫರಾಜ್ ಅವರ ಜೀವ ಉಳಿಸಲು ಆರ್ಥಿಕ ನೆರವು ನೀಡುವಂತೆ ಅಭಿಮಾನಿಗಳನ್ನು ಕೋರಿದ್ದಾರೆ. ನಿಧಿಸಂಗ್ರಹಣೆ ಲಿಂಕ್ ಹಂಚಿಕೊಂಡಿರುವ ನಟಿ, "ಸಾಧ್ಯವಾದರೆ ನೆರವು ನೀಡಿ. ಇದನ್ನು ಹಂಚಿಕೊಳ್ಳಿ'' ಎಂದು ಮನವಿ ಮಾಡಿದ್ದಾರೆ.
Recommended Video
ಫರೀಬ್ ಚಿತ್ರದ ಮೂಲಕ ಎಂಟ್ರಿ
ನಟ ಯೂಸೂಫ್ ಖಾನ್ ಅವರ ಪುತ್ರ ಫರಾಜ್ ಖಾನ್ 1989ರಲ್ಲಿ 'ಮೈನೇ ಪ್ಯಾರ್ ಕಿಯಾ' ಚಿತ್ರಕ್ಕೆ ನಾಯಕರಾಗಿ ಆಯ್ಕೆಯಾಗಿದ್ದರು. ಚಿತ್ರೀಕರಣ ಸಹ ಆರಂಭವಾಗಿತ್ತು. ನಂತರ ಆ ಜಾಗಕ್ಕೆ ಸಲ್ಮಾನ್ ಖಾನ್ ಬಂದರು. 1996ರಲ್ಲಿ 'ಫರೀಬ್' ಚಿತ್ರದಲ್ಲಿ ನಟಿಸಿದರು. ರಾಣಿ ಮುಖರ್ಜಿ ಜೊತೆ 'ಮೆಹಂದಿ' ಸಿನಿಮಾ ಮಾಡಿದರು.