Don't Miss!
- News ನೇಹಾ ಕೊಲೆ: ಫಯಾಜ್ ಜೈಲಲ್ಲಿದ್ದರೂ ಆತನ ಮೊಬೈಲ್ನಲ್ಲಿದ್ದ ಫೋಟೋ ಲೀಕ್ ಆಗಿದ್ದೇಗೆ?: ಪ್ರಹ್ಲಾದ್ ಜೋಶಿ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಜಯ್ ದತ್ ಗೆ 4ನೇ ಹಂತದ ಕ್ಯಾನ್ಸರ್ ಎಂದು ಖಚಿತ ಪಡಿಸಿದ ಆಸ್ಪತ್ರೆ ಮೂಲಗಳು
ಬಾಲಿವುಡ್ ನಟ ಸಂಜಯ್ ದತ್ ಶ್ವಾಶಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಸಂಜಯ್ ದತ್ ಗೆ 3ನೇ ಹಂತದ ಕ್ಯಾನ್ಸರ್ ಇದೆ ಎಂದು ಹೇಳಲಾಗಿತ್ತು. ಆದರೀಗ ಸಂಜಯ್ ದತ್ ಗೆ 4ನೇ ಹಂತದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
Recommended Video
ಇತ್ತೀಚಿಗೆ ಉಸಿರಾಟ ಸಮಸ್ಯೆಯಿಂದ ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕ್ಯಾನ್ಸರ್ ಇರುವ ಸುದ್ದಿ ಹೊರಬಿದ್ದಿತ್ತು. ಸಂಜಯ್ ದತ್ ಗೆ ಕ್ಯಾನ್ಸರ್ ಎನ್ನುವ ಸುದ್ದಿ ಕೇಳಿ ಶಾಕ್ ಆದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೇಗ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ.
ಸಂಜಯ್ ದತ್ಗೆ ಭಾವನಾತ್ಮಕ ಸಂದೇಶ ರವಾನಿಸಿದ ಚಿರಂಜೀವಿ
ಆಸ್ಪತ್ರೆಗೆ ದಾಖಲಾದ ತಕ್ಷಣ ಕೊರೊನಾ ಪರೀಕ್ಷೆ ಮಾಡಲಾಗಿದೆ. ಕೊರೊನಾ ವರದಿ ನೆಗೆಟಿವ್ ಬಂದ ಬಳಿಕ ಮತ್ತೆ ಕ್ಯಾನ್ಸರ್ ಪರೀಕ್ಷೆ ಮಾಡಲಾಗಿದೆ. ನಂತರ 4ನೇ ಹಂತದ ಕ್ಯಾನ್ಸ ರ್ ಇರುವುದು ದೃಢಪಟ್ಟಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆದರೆ ಸಂಜಯ್ ದತ್ ಗೆ ಚಿಕಿತ್ಸೆ ನೀಡಿದ ವೈದ್ಯರಾದ ಡಾ. ಜಲೀಲ್ ಪಾರ್ಕರ್ ಸಂಜಯ್ ದತ್ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಸಂಜಯ್ ದತ್ ಹೆಚ್ಚಿನ ಚಿಕಿತ್ಸಗೆ ಅಮೆರಿಕಾಗೆ ತೆರಳಿದ್ದಾರೆ. ಸಂಜುಬಾಬಾ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ಧೈರ್ಯ ತುಂಬಿ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ
''ಸಂಜಯ್ ದತ್ ಭಾಯ್, ನೀವು ಅನಾರೋಗ್ಯ ಪರಿಸ್ಥಿತಿಯಲ್ಲಿದ್ದೀರಿ ಎಂದು ತಿಳಿದು ಬಹಳ ನೋವಾಗಿದೆ. ಆದರೆ, ನೀವೊಬ್ಬ ಹೋರಾಟಗಾರರಾಗಿದ್ದೀರಾ. ವರ್ಷಗಳ ಕಾಲದಿಂದಲೂ ನೀವು ಅನೇಕ ಸಂಕಷ್ಟಗಳನ್ನು ಎದುರಿಸಿದ್ದೀರಿ. ನೀವು ಇದರಿಂದ ಹೊರಬರುವಿರಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ಆದಷ್ಟೂ ಬೇಗ ಗುಣಮುಖರಾಗಿ ಎಂದು'' ಎಂದು ಚಿರು ಟ್ವೀಟ್ ಮಾಡಿದ್ದಾರೆ.