Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್ ಕುರಿತು ದೊಡ್ಡ ಸಿಗ್ನಲ್ ಕೊಟ್ಟ 'ಅಧೀರ' ಸಂಜಯ್ ದತ್
ಭಾರತೀಯ ಸಿನಿಮಾ ಜಗತ್ತಿನ ಬಹುನಿರೀಕ್ಷೆಯ 'ಕೆಜಿಎಫ್ ಚಾಪ್ಟರ್-2' ಸಿನಿಮಾ ಚಿತ್ರೀಕರಣ ಆರಂಭವಾಗಿದೆ. ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಶೂಟಿಂಗ್ ಸೆಪ್ಟೆಂಬರ್ ತಿಂಗಳಲ್ಲಿ ಪುನಾರರಂಭವಾಗಿದೆ. ಬೆಂಗಳೂರಿನಲ್ಲಿ ಕೆಲವು ಭಾಗದ ಚಿತ್ರೀಕರಣ ಮುಗಿಸಿದ ಚಿತ್ರತಂಡ ಮಂಗಳೂರಿನಲ್ಲಿ ಬೀಡುಬಿಟ್ಟಿದೆ.
ಈ ನಡುವೆ ಕೆಜಿಎಫ್ ಚಾಪ್ಟರ್ 2 ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಂಜಯ್ ದತ್ ಯಾವಾಗ ಶೂಟಿಂಗ್ನಲ್ಲಿ ಭಾಗವಹಿಸುತ್ತಾರೆ ಎಂಬ ಕುತೂಹಲ ಕಾಡುತ್ತಿತ್ತು. ಈ ಕುತೂಹಲಕ್ಕೆ ಸ್ವತಃ ಸಂಜತ್ ದತ್ ನಿನ್ನೆಯಷ್ಟೇ ಸ್ಪಷ್ಟನೆ ನೀಡಿದ್ದರು. ನವೆಂಬರ್ನಲ್ಲಿ ಕೆಜಿಎಫ್ ಶೂಟಿಂಗ್ಗೆ ಹೋಗುತ್ತೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ಅಭಿಮಾನಿಗಳಿಗೆ ದೊಡ್ಡ ಸಿಗ್ನಲ್ವೊಂದು ಕೊಟ್ಟಿದ್ದಾರೆ. ಮುಂದೆ ಓದಿ....
Big News: ಕೆಜಿಎಫ್ ಚಾಪ್ಟರ್ 2 ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ಸಂಜಯ್ ದತ್
ಅಧೀರ ಈಸ್ ರೆಡಿ ಟು ಶೂಟ್
ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಸಂಜಯ್ ದತ್ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸಂಜು ಬಾಬ ದೈಹಿಕವಾಗಿ ಬಹಳ ಸೊರಗಿದ್ದಾರೆ ಎಂದು ಅಭಿಮಾನಿಗಳು ನಿರಾಸೆಯಾಗಿದ್ದರು. ಆದ್ರೀಗ, ಸಂಜಯ್ ದತ್ ಮೊದಲಿನಂತೆ ಫಿಟ್ ಆಗಿದ್ದು, ಸ್ಟೈಲ್ ಆಗಿ ರೆಡಿಯಾಗಿದ್ದು ''ನಾನು ರೆಡಿ'' ಎಂದು ಫೋಟೋ ಹಂಚಿಕೊಂಡಿದ್ದಾರೆ.
ಕೆಜಿಎಫ್ ಚಿತ್ರಕ್ಕಾಗಿ ತಯಾರಿ
ಅಧೀರನ ಪಾತ್ರಕ್ಕಾಗಿ ಸಂಜಯ್ ದತ್ ಪೂರ್ವ ತಯಾರಿ ನಡೆಸಿದ್ದಾರೆ. ದೈಹಿಕವಾಗಿ ಫಿಟ್ ಆಗಿರುವ ಸಂಜು ಬಾಬು, ಆ ಪಾತ್ರಕ್ಕೆ ಅಗತ್ಯವೆನಿಸುವಂತೆ ಹೇರ್ಸ್ಟೈಲ್ ಹಾಗೂ ಗಡ್ಡ ಸಹ ಟ್ರಿಮ್ ಮಾಡಿದ್ದಾರೆ. ಈ ಫೋಟೋವನ್ನು ಸ್ವತಃ ಸಂಜಯ್ ದತ್ ಪೋಸ್ಟ್ ಮಾಡಿದ್ದು, ಅಭಿಮಾನಿಗಳಿಗೆ ಖುಷಿ ನೀಡಿದೆ.
ಕೆಜಿಎಫ್ 2: ಅನಂತ್ನಾಗ್ ಪಾತ್ರಕ್ಕೆ ಪ್ರಕಾಶ್ ರೈ! ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದೇನು?
ಸಂಜಯ್ ಆರೋಗ್ಯಕ್ಕೆ ಏನಾಗಿತ್ತು?
ಸಂಜಯ್ ದತ್ ಅವರಿಗೆ ಆಗಸ್ಟ್ 2020ರಲ್ಲಿ ಮೂರನೇ ಹಂತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಪ್ರಸ್ತುತ ಮುಂಬೈನಲ್ಲಿ ಚಿಕಿತ್ಸೆ ಸಹ ಪಡೆಯುತ್ತಿದ್ದಾರೆ. ಈ ಚಿಕಿತ್ಸೆಯಿಂದ ದತ್ ಅವರ ದಿನಚರಿಗೆ ಮತ್ತು ಕೆಲಸಕ್ಕೆ ಯಾವುದೇ ತೊಂದರೆಯಾಗಿಲ್ಲ. ಹಾಗಾಗಿ, ತಮ್ಮ ಕೆಲಸಗಳಲ್ಲಿ ದತ್ ತೊಡಗಿಸಿಕೊಳ್ಳಲು ತಯಾರಾಗಿದ್ದಾರೆ.
ಪ್ರಧಾನಿ ಪಾತ್ರದಲ್ಲಿ ರವಿನಾ ಟಂಡನ್
ನಟ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಜೊತೆ ಮತ್ತಷ್ಟು ಕಲಾವಿದರು ಚಾಪ್ಟರ್ 2ರಲ್ಲಿ ಇರಲಿದ್ದಾರೆ. ಈಗಾಗಲೇ ಪ್ರಕಾಶ್ ರೈ ಹಾಗೂ ಆರ್ಜೆ ರೋಹಿತ್ ಕೆಜಿಎಫ್ ಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾದಲ್ಲಿ ಬರುವ ಮಹಿಳಾ ಪ್ರಧಾನಿ ಪಾತ್ರದಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್ ನಟಿಸುತ್ತಿದ್ದಾರೆ.