Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣ ವೇಳೆ ತೀವ್ರವಾಗಿ ಗಾಯಗೊಂಡ ನಟ ಶಾಹಿದ್ ತುಟಿಗೆ 13 ಹೊಲಿಗೆ
ಬಾಲಿವುಡ್ ಹ್ಯಾಂಡ್ ಸಮ್ ನಟ ಶಾಹಿದ್ ಕಪೂರ್ ಚಿತ್ರೀಕರಣ ವೇಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಚಂಡೀಗಡದಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ ಶಾಹಿದ್ ಮುಖಕ್ಕೆ ಟ್ಟಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಟಿಯ ಕೆಳಭಾಗಕ್ಕೆ ತಾವ್ರವಾಗಿ ಪೆಟ್ಟಾಗಿದ್ದು 13 ಹೊಲಿಗೆ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಶಾಹಿದ್ ಚೇತರಿಸಿಕೊಳ್ಳುತ್ತಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಮುಂಬೈನಲ್ಲಿದ್ದ ಪತ್ನಿ ಮೀರಾ ರಜಪೂತ್ ಪತಿಯನ್ನು ನೋಡಲು ಚಂಡೀಗಡಗೆ ಧಾವಿಸಿದ್ದು, ಪತಿಯ ಆರೋಗ್ಯ ವಿಚಾರಿಸಿಕೊಳ್ಳುತ್ತಿದ್ದಾರೆ.
ಹಿಂದಿ ಜೆರ್ಸಿ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ? ಕಾರಣ ಬಹಿರಂಗ ಪಡಿಸಿದ ರಶ್ಮಿಕಾ
ಅಂದ್ಹಾಗೆ ಶಾಹಿದ್ ಸದ್ಯ ತೆಲುಗಿನ ಸೂಪರ್ ಹಿಟ್ ಜರ್ಸಿ ಸಿನಿಮಾದ ರಿಮೇಕ್ ನಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೂ ಯಶಸ್ವಿಯಾಗಿ ಚಿತ್ರೀಕರಣ ಮಾಡಿದ್ದ ಶಾಹಿದ್, ಸಂಜೆ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದೆ. ಕ್ರಿಕೆಟ್ ಭಾಗದ ಚಿತ್ರೀಕರಣ ಮಾಡಲಾಗುತ್ತಿತ್ತು. ಕೆಲವು ದೃಶ್ಯಗಳನ್ನು ಇಂದು ಸೆರೆಹಿಡಿಯಲಾಗಿತ್ತು. ಪಿಚ್ ನಲ್ಲಿ ಅಭ್ಯಾಸ ಮಾಡುತ್ತಿದ್ದ ಶಾಹಿದ್ ಗೆ ಎದುರಿನಿಂದ ವೇಗವಾಗಿ ಬಂದ ಚೆಂಡು ಮುಖಕ್ಕೆ ಬಡಿದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಶಾಹಿದ್ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದಾರೆ.
ನಂತರ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಟಿಗೆ 13 ಹೊಲಿಗೆಗಳನ್ನು ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಶಾಹಿದ್ ಸದ್ಯ ಚೇತರಿಕೊಳ್ಳುತ್ತಿದ್ದು ಇನ್ನಷ್ಟು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಬೇಕೆಂದು ವೈದ್ಯರು ತಿಳಿಸಿದ್ದಾರೆ.
ಜರ್ಸಿ ಹಿಂದಿ ರಿಮೇಕ್ ಚಿತ್ರವನ್ನು ಮುಂದಿನ 50 ದಿನಗಳ ಕಾಲ ನಿರಂತರ ಚಿತ್ರೀಕರಣ ಮಾಡಲು ಪ್ಲಾನ್ ಮಾಡಿಕೊಂಡಿತ್ತು ಚಿತ್ರತಂಡ. ಆದರೀಗ ಶಾಹಿದ್ ಗಾಯಗೊಂಡ ಪರಿಣಾಮ ಚಿತ್ರೀಕರಣ ಮತ್ತಷ್ಟು ತಡವಾಗುವ ಸಾಧ್ಯತೆ ಇದೆ.