Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ನಟಿ ಅಲಿಯಾ ಭಟ್ಗೆ ಕೊರೊನಾ ಪಾಸಿಟಿವ್
ಬಾಲಿವುಡ್ನ ಖ್ಯಾತ ನಟಿ ಅಲಿಯಾ ಭಟ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚಿಗಷ್ಟೆ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದರ ಬೆನ್ನಲ್ಲೇ ಈಗ ಅಲಿಯಾಗೂ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಈ ಬಗ್ಗೆ ಅಲಿಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ವರದಿ ಬಂದಿದೆ, ಮನೆಯಲ್ಲಿ ಕ್ವಾರಂಟೈನ್ ಆಗಿರುವುದಾಗಿ ಹೇಳಿದ್ದಾರೆ. 'ನನಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೀನಿ. ವೈದ್ಯರ ಸಲಹೆ ಮೇರೆಗೆ ನಾನು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಬೆಂಬಲಕ್ಕೆ ಧನ್ಯವಾದಗಳು' ಎಂದು ಬರೆದುಕೊಂಡಿದ್ದಾರೆ.
'RRR' ಬಳಿಕ ಅಲ್ಲು ಅರ್ಜುನ್ ಜೊತೆ ತೆರೆಹಂಚಿಕೊಂಡ ಬಾಲಿವುಡ್ ಖ್ಯಾತ ನಟಿ ಅಲಿಯಾ ಭಟ್
ಕಳೆದ ಎರಡು ವಾರದ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ನಟ ರಣಬೀರ್ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ರಣಬೀರ್ ಚೇತರಿಸಿಕೊಂಡಿದ್ದಾರೆ. ಅಲಿಯಾ ಸದ್ಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ ಚಿತ್ರೀಕರಣವನ್ನು ಮುಂದೂಡಲಾಗಿತ್ತು.
ಇದೀಗ ನಾಯಕಿ ಅಲಿಯಾಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಚಿತ್ರೀಕರಣ ಮತ್ತೆ ಮುಂದೂಡಲಾಗಿದೆ. ಅಲಿಯಾ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸ್ನೇಹಿತರು ಹಾರೈಸುತ್ತಿದ್ದಾರೆ. ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಬೇಕಿದೆ.
Recommended Video
ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೊರೊನಾ ಎರಡನೇ ಅಲೆಯಲ್ಲಿ ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಿನಿಮಾ ಶೂಟಿಂಗ್, ಪ್ರಮೋಷನ್ ಜೊತೆಗೆ ಆರೋಗ್ಯದ ಕಡೆಯೂ ಎಚ್ಚರಿಕೆ ವಹಿಸಲಿ ಎನ್ನುವುದು ಎಲ್ಲರ ಆಶಯ.