Don't Miss!
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- News ಚಾಮರಾಜನಗರ ಜಿಲ್ಲೆಯ ಹಲವು ಗ್ರಾಮಗಳ ಜನರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ-ಇವರ ಬೇಡಿಕೆ ಏನು ಗೊತ್ತಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ್ಞಾನವ್ಯಾಪಿ ಮಸೀದಿ ಪ್ರಕರಣದ ಬಗ್ಗೆ ನಟಿ ಕಂಗನಾ ರನೌತ್ ಹೇಳಿದ್ದೇನು?
ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಪವಿತ್ರ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಜ್ಞಾನವ್ಯಾಪಿ ಮಸೀದಿ ಆವರಣದೊಳಗೆ ನಡೆಸಿರುವ ವಿಡಿಯೋಗ್ರಫಿ ಸಮೀಕ್ಷೆಯಲ್ಲಿ ಶಿವಲಿಂಗ ಪತ್ತೆಯಾಗಿದೆ. ಈ ಪ್ರಕರಣ ಉತ್ತರ ಪ್ರದೇಶದಲ್ಲಿ ಭಾರೀ ಸದ್ದು ಮಾಡ್ತಿದೆ. ಸದ್ಯ ಈ ಪ್ರಕರಣದ ಬಗ್ಗೆ ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣದ ಬಗ್ಗೆ ಬಾಲಿವುಡ್ನ ಕಾಂಟ್ರವರ್ಸಿ ಕ್ವೀನ್ ಕಂಗನಾ ರನೌತ್ ಪ್ರತಿಕ್ರಿಯೆ ನೀಡಿದ್ದಾರೆ.
ನಟಿ ಕಂಗನಾ ಅಭಿನಯದ 'ಧಾಕಡ್' ಸಿನಿಮಾ ಇಂದು (ಮೇ 20) ರಿಲೀಸ್ ಆಗಿದೆ. ಇದಕ್ಕೂ ಮೊದಲು ನಿನ್ನೆ (ಮೇ 19) ರಂದು ದೇವರ ಆರ್ಶೀವಾದ ಪಡೆಯಲು ನಟಿ ಕಂಗನಾ ರನೌತ್ ಹಾಗೂ 'ಧಾಕಡ್' ಚಿತ್ರತಂಡ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜ್ಯಾನವ್ಯಾಪಿ ಮಸೀದಿ ಪ್ರಕರಣದ ಬಗ್ಗೆ ಕಂಗನಾ ಮಾತನಾಡಿದ್ದಾರೆ.
ನನ್ನ ಸ್ನೇಹಿತರಾಗಲೂ ಬಾಲಿವುಡ್ನಲ್ಲಿ ಯಾರಿಗೂ ಯೋಗ್ಯತೆ ಇಲ್ಲ: ಕಂಗನಾ ರನೌತ್
'ಮಥುರಾದ ಕಣ ಕಣದಲ್ಲಿ ಶ್ರೀ ಕೃಷ್ಣ ಹೇಗಿದ್ದಾನೋ, ಅಯೋಧ್ಯೆಯ ಕಣ ಕಣದಲ್ಲಿ ಶ್ರೀರಾಮ ಹೇಗಿದ್ದಾನೋ, ಹಾಗೇ ಕಾಶಿಯ ಕಣ ಕಣದಲ್ಲೂ ಶಿವ ಇದ್ದಾನೆ. ಶಿವನಿಗೆ ಯಾವುದೇ ಸ್ಥಳದ ಅವಶ್ಯಕತೆಯಿಲ್ಲ. ಕಣ ಕಣದಲ್ಲೂ ಶಿವ ಇರುತ್ತಾನೆ. ಹರ ಹರ ಮಹಾದೇವ್,' ಎಂದು ನಟಿ ಕಂಗನಾ ರನೌತ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ನಟಿ ಕಂಗನಾ ಅಭಿನಯಿಸಿರುವ 'ಧಾಕಡ್' ಸಿನಿಮಾ ಇಂದು (ಮೇ 20 ) ರಂದು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿದೆ. ಸಿನಿಮಾ ನೋಡಲು ಕಂಗನಾ ಅಭಿಮಾನಿಗಳು ಥಿಯೇಟರ್ಗಳಿಗೆ ಆಗಮಿಸ್ತಿದ್ದಾರೆ. ಚಿತ್ರದಲ್ಲಿಇ ಸ್ಪೈ ಏಜೆಂಟ್ ಅಗ್ನಿ ಪಾತ್ರದಲ್ಲಿ ನಟಿ ಕಂಗನಾ ನಟಿಸಿದ್ದಾರೆ. ಆಕ್ಷನ್ ಥ್ರಿಲ್ಲರ್ ಇರುವ ಈ ಸಿನಿಮಾಗೆ ಜನರು ಎಷ್ಟು ಮಾರ್ಕ್ಸ್ ಕೊಡ್ತಾರೆ. ಬಾಕ್ಸಾಫೀಸ್ನಲ್ಲಿ ಬಾಲಿವುಡ್ನ ಈ ಸಿನಿಮಾವಾದರೂ ಭರ್ಜರಿ ಕಲೆಕ್ಷನ್ ಮಾಡುತ್ತಾ ನೋಡಬೇಕಿದೆ.
ಜ್ಷಾನವ್ಯಾಪಿ ವಿಡಿಯೋಗ್ರಫಿ ಸಮೀಕ್ಷೆಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಓರ್ವ ವಕೀಲರು ಮಸೀದಿಯಲ್ಲಿ ಇರುವ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ತಿಳಿಸಿದ್ದರು. ಮಸೀದಿಯಲ್ಲಿ ನಮಾಜ್ ಮಾಡುವುದಕ್ಕೂ ಮೊದಲು ಬಾವಿಯಲ್ಲಿರುವ ನೀರಿನಲ್ಲಿ ಶುದ್ಧೀಕರಣ ಮಾಡಲಾಗುತ್ತಿತ್ತು. ಅಲ್ಲದೆ ಅಲ್ಲಿರುವ ಮುಸ್ಲಿಂ ನಾಯಕರು ಅದು ಶಿವಲಿಂಗವಲ್ಲ ಕಾರಂಜಿ ಎಂದು ವಾದಿಸಿದ್ದಾರೆ. ಸದ್ಯಕ್ಕೆ ಶಿವಲಿಂಗ ಇರುವ ಸ್ಥಳವನ್ನು ಭದ್ರಪಡಿಸಿ. ಆದರೆ, ನಮಾಜ್ ಮಾಡುವುದಕ್ಕೆ ಯಾವುದೇ ತೊಂದರೆ ಮಾಡಬೇಡಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸದ್ಯ ಈ ಪ್ರಕರಣ ಈಗ ಉತ್ತರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಒಳಗಾಗಿದ್ದು, ಕೇವಲ ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲೂ ಈ ಪ್ರಕರಣದ ಬಗ್ಗೆ ಚರ್ಚೆ ಶುರುವಾಗಿದೆ.