Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನಿಕಾ ಕಪೂರ್ ಸಂಪರ್ಕಕ್ಕೆ ಬಂದಿದ್ದ 266 ಮಂದಿಯ ಪತ್ತೆ, 66 ಜನರಲ್ಲಿ ಸೋಂಕು ನೆಗೆಟಿವ್
ಕೊರೊನಾ ವೈರಸ್ ಹೊತ್ತುತಂದು ಆತಂಕ ಮೂಡಿಸಿರುವ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಸಂಪರ್ಕಕ್ಕೆ ಬಂದದ್ದರು ಎನ್ನಲಾದ ಜನರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿಸಲಾಗಿದೆ. ಲಂಡನ್ನಿಂದ ಲಕ್ನೋಗೆ ಹಿಂದಿರುಗಿದ್ದ ಕನಿಕಾ ಕಪೂರ್ ಅವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಆದರೆ ಅದಕ್ಕೂ ಮುನ್ನ ಅವರು ವಿವಿಧ ಪಾರ್ಟಿ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
Recommended Video
ಕನಿಕಾ ಅವರ ಪಾರ್ಟಿಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಅವರ ಮಗ, ಸಂಸದ ದುಷ್ಯಂತ್ ಕೂಡ ಭಾಗವಹಿಸಿದ್ದರು. ಬಳಿಕ ದುಷ್ಯಂತ್ ರಾಷ್ಟ್ರಪತಿ ಅವರನ್ನೂ ಭೇಟಿ ಮಾಡಿದ್ದರು. ಹೀಗೆ ಈ ಸರಪಳಿ ತೀವ್ರ ಆತಂಕ ಮೂಡಿಸಿತ್ತು. ಅದೃಷ್ಟವಶಾತ್ ಇವರಲ್ಲಿ ಯಾರಲ್ಲಿಯೂ ಸೋಂಕು ಪತ್ತೆಯಾಗಿಲ್ಲ.
ನೀವಿಲ್ಲಿ ಪೇಷೆಂಟ್ ಅಷ್ಟೇ, ಸ್ಟಾರ್ ಥರ ವರ್ತಿಸಬೇಡಿ: ಗಾಯಕಿಗೆ ವೈದ್ಯರಿಂದ ಕ್ಲಾಸ್
266 ಮಂದಿ ಪತ್ತೆ
ಈಗ ಕನಿಕಾ ಸಂಪರ್ಕಕ್ಕೆ ಬಂದಿರಬಹುದಾದ ಜನರನ್ನು ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೂ ಕನಿಷ್ಠ 266 ಮಂದಿಯನ್ನು ಪತ್ತೆಹಚ್ಚಲಾಗಿದ್ದು, ಅವರಲ್ಲಿ 60ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ವೈರಸ್ ನೆಗೆಟಿವ್ ಬಂದಿದೆ ಎಂದು ಉತ್ತರ ಪ್ರದೇಶ ಆರೋಗ್ಯ ಇಲಾಖೆ ತಿಳಿಸಿದೆ.
ಮತ್ತಷ್ಟು ಮಾದರಿ ಸಂಗ್ರಹ
ಕನಿಕಾ ಅವರು ಭಾಗವಹಿಸಿದ್ದ ಪಾರ್ಟಿಗಳಲ್ಲಿ ಹಾಜರಿದ್ದವರು ಹಾಗೂ ಅವರು ಓಡಾಡಿದ ಸ್ಥಳಗಳಲ್ಲಿ ಸಂಪರ್ಕಕ್ಕೆ ಬಂದವರಲ್ಲಿ ಯಾವುದೇ ರೀತಿಯ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಕಂಡುಬಂದರೆ ಇನ್ನಷ್ಟು ಮಾದರಿಗಳನ್ನು ಸಂಗ್ರಹಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ಸೋಂಕು ಹೊತ್ತು ತಂದ ಬಾಲಿವುಡ್ ಗಾಯಕಿ ವಿರುದ್ಧ ಎಫ್ಐಆರ್ ದಾಖಲು
ರಾಜಕಾರಣಿಗಳ ತಪಾಸಣೆ
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಅವರ ಮಗ-ಸಂಸದ ದುಷ್ಯಂತ್ ಸಿಂಗ್, ಉತ್ತರ ಪ್ರದೇಶದ ವೈದ್ಯಕೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೈ ಪ್ರತಾಪ್ ಸಿಂಗ್, ಮಾಜಿ ಕೇಂದ್ರ ಸಚಿವ ಜತಿನ್ ಪ್ರಸಾದ್ ಹಾಗೂ ಅವರ ಪತ್ನಿ ನೇಹಾ ಅವರನ್ನು ಕೂಡ ತಪಾಸಣೆಗೆ ಒಳಪಡಿಸಲಾಗಿದೆ.
ಒಂದೇ ದಿನದಲ್ಲಿ 106 ಮಂದಿ ಪತ್ತೆ
ಕಳೆದ 24 ಗಂಟೆಯಲ್ಲಿ ಭಾರತದಾದ್ಯಂತ 106 ಮಂದಿ ಸೇರಿದಂತೆ 266 ಮಂದಿಯನ್ನು ಪತ್ತೆಹಚ್ಚಿ ಅವರನ್ನು ಸಂಪರ್ಕಿಸಲಾಗಿದೆ. ಇವರಲ್ಲಿ ಕನಿಕಾ ಕಪೂರ್ ಸಂಪರ್ಕಕ್ಕೆ ಬಂದಿದ್ದ ಕೆಲವು ಪ್ರಮುಖ ರಾಜಕಾರಣಿಗಳು ಸೇರಿದ್ದಾರೆ. ಈ ಜನರನ್ನು ಪತ್ತೆಹಚ್ಚುವುದು ಸವಾಲಿನ ಕೆಲಸವಾಗಿತ್ತು. ಅದೃಷ್ಟವಶಾತ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜನರೆಲ್ಲರೂ ಸಹಕರಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.