Don't Miss!
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಶ್ಮೀರದ ಬಾಲಕಿಯ ಅತ್ಯಾಚಾರ ವಿರುದ್ಧ ಧ್ವನಿ ಎತ್ತಿದ ಬಾಲಿವುಡ್ ನಟಿಯರು
ಕೆಲ ದಿನಗಳ ಹಿಂದೆ ಕಾಶ್ಮೀರದಲ್ಲಿ ನಡೆದ ಒಂದು ಘಟನೆ ಇಡೀ ಮನುಕುಲವನ್ನು ತಲೆ ತಗ್ಗಿಸುವಂತೆ ಮಾಡಿದೆ. ಎಂಟು ವರ್ಷದ ಬಾಲಕಿಗೆ ಡ್ರಗ್ಸ್ ನೀಡಿ ಆರು ಮಂದಿ ಕೀಚಕರು ಸೇರಿ ಮೂರು ದಿನಗಳ ಕಾಲ ಲೈಂಗಿಕವಾಗಿ ಕಿರುಕುಳ ನೀಡಿ, ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ್ದರು. ಇಂತಹ ಅಮಾನವಿಯ ಘಟನೆಗೆ ಈಗ ಇಡೀ ದೇಶವೇ ನ್ಯಾಯ ಕೇಳುತ್ತಿದೆ.
8 ವರ್ಷದ ಬಾಲಕಿಯ ಸಾವಿಗೆ ನ್ಯಾಯ ಕೇಳುತ್ತಿದೆ ಕನ್ನಡ ಚಿತ್ರರಂಗ
ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಈಗ ಚಿತ್ರರಂಗದ ನಟ ನಟಿಯರು ಸಹ ನ್ಯಾಯಕ್ಕಾಗಿ ಹೋರಾಟಕ್ಕೆ ನಿಂತಿದ್ದಾರೆ. #justiceforasifa ಮತ್ತು #SpeakUpIndia ಎಂಬ ಹ್ಯಾಶ್ ಟ್ಯಾಗ್ ಬಳಸಿ ಅನೇಕ ಕಲಾವಿದರು ಟ್ವೀಟ್ ಮಾಡುತ್ತಿದ್ದಾರೆ. ಈ ಮೂಲಕ ಘಟನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಬಾಲಿವುಡ್ ನಟಿಯರಾದ ಜೂಹಿ ಚಾವ್ಲಾ, ರವಿನಾ ಟಂಡನ್, ಪ್ರಿಯಾಂಕ ಚೋಪ್ರಾ, ಕರೀನಾ ಕಪೂರ್, ಸೋನಮ್ ಕಪೂರ್, ಕಲ್ಕಿ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ನ್ಯಾಯ ಕೇಳುತ್ತಿದ್ದಾರೆ.
ಪ್ಲೇ ಕಾರ್ಡ್ ಪ್ರದರ್ಶಿಸುವ ಮೂಲಕ ಕರೀನಾ ಕಪೂರ್, ಸೋನಮ್ ಕಪೂರ್, ಕಲ್ಕಿ ಎಂಟು ವರ್ಷವ ಕಂದನಿಗೆ ಆಗಿರುವ ಅತ್ಯಾಚಾರವನ್ನು ವಿರೋಧಿಸಿದ್ದಾರೆ. ಬಾಲಿವುಡ್ ಮಾತ್ರವಲ್ಲದೆ ಕನ್ನಡದ ನಟಿಯರಾದ ಅಮೂಲ್ಯ, ನಭಾ ನಟೇಶ್, ಶಾನ್ವಿ ಶ್ರೀವಾಸ್ತವ್, ರಾಗಿಣಿ ದ್ವಿವೇದಿ, ಶರ್ಮಿಳಾ ಮಾಂಡ್ರೆ ಮತ್ತು ಗಾಯಕ ರಘು ದೀಕ್ಷಿತ್ ಈಗಾಗಲೇ ಈ ಬಗ್ಗೆ ಮಾತನಾಡಿದ್ದಾರೆ. ನಟ, ನಟಿಯರು, ಚಿತ್ರರಂಗದ ಗಣ್ಯರು ಮಾತ್ರವಲ್ಲದೆ ಲಕ್ಷಾಂತರ ಜನರು ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ.
ಘಟನೆಯ
ವಿವರ
ಜಮ್ಮು
ಕಾಶ್ಮೀರದಲ್ಲಿ
ಎಂಟು
ವರ್ಷದ
ಬಾಲಕಿಯ
ಮೇಲೆ
ಆರು
ಮಂದಿ
ಕೀಚಕರು
ಸೇರಿ
ಡ್ರಗ್ಸ್
ನೀಡಿ
ಮೂರು
ದಿನಗಳ
ಕಾಲ
ಲೈಂಗಿಕವಾಗಿ
ಕಿರುಕುಳ
ನೀಡಿದ್ದರು.
ಬಾಲಕಿಯನ್ನು
ಕಿಡ್ನಾಪ್
ಮಾಡಿ
ದೇವಿಸ್ಥಾನ್
ಎಂಬ
ದೇವಾಲಯದಲ್ಲಿಟ್ಟು
ಅತ್ಯಾಚಾರವೆಸಗಿ
ಬಳಿಕ
ಹತ್ಯೆ
ಮಾಡಿದ್ದರು.
ಸದ್ಯ
ಸಾಮಾಜಿಕ
ಜಾಲತಾಣದಲ್ಲಿ
ಮಗುವಿಗೆ
ನ್ಯಾಯ
ಸಿಗಬೇಕು
ಎಂದು
ಹೋರಾಟ
ಹೆಚ್ಚಾಗಿದೆ.