twitter
    For Quick Alerts
    ALLOW NOTIFICATIONS  
    For Daily Alerts

    ಹಾದಿ ತಪ್ಪಿದ ಮಾಧ್ಯಮಗಳಿಗೆ ನಟ-ನಟಿಯರ ಬಹಿರಂಗ ಪತ್ರ

    |

    ಭಾರತೀಯ ಮಾಧ್ಯಮಗಳು ಹಾದಿ ತಪ್ಪಿವೆ ಎಂಬುದು ಈಗಿನ ದೂರಲ್ಲ. 24/7 ನ್ಯೂಸ್ ಚಾನೆಲ್‌ಗಳು ಆರಂಭವಾದಾಗಿನಿಂದಲೂ ಈ ದೂರು ಇದ್ದೇ ಇದೆ. ಆದರೆ ಮಾಧ್ಯಮಗಳ ವರ್ತನೆ ದಿನಗಳೆದಂತೆ ಜವಾಬ್ದಾರಿಹೀನವಾಗುತ್ತಾ ಸಾಗುತ್ತಿದೆ ಎಂಬುದು ಜನರ ಅಭಿಪ್ರಾಯ.

    ಇದೀಗ ಬಾಲಿವುಡ್‌ ನಟ-ನಟಿಯರು ಸೇರಿ, ಹಲವಾರು ಉದ್ಯಮಗಳು, ಖ್ಯಾತ ಸಂಸ್ಥೆಗಳು ಹೀಗೆ ಸಾವಿರಾರು ಮಂದಿ ಒಟ್ಟಾಗಿ ಭಾರತೀಯ ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ.

    ವಿಶೇಷವಾಗಿ ರಿಯಾ ಚಕ್ರವರ್ತಿ ಪ್ರಕರಣದಲ್ಲಿ ಮಾಧ್ಯಮಗಳು ನಡೆದುಕೊಂಡ ರೀತಿಯನ್ನು ಖಂಡಿಸಿ ಈ ಪತ್ರ ಬರೆಯಲಾಗಿದೆ. ರಿಯಾ ಚಕ್ರವರ್ತಿ ವಿರುದ್ಧ ದುರುದ್ದೇಶಪೂರ್ವಕ ದಾಳಿಯನ್ನು ಮಾಧ್ಯಮಗಳು ನಡೆಸುತ್ತಿವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

    ರಿಯಾ ಮೇಲೆ ಮಾಧ್ಯಮಗಳ ದಾಳಿಗೆ ಖಂಡನೆ

    ರಿಯಾ ಮೇಲೆ ಮಾಧ್ಯಮಗಳ ದಾಳಿಗೆ ಖಂಡನೆ

    ನಟಿ ಸೋನಂ ಕಪೂರ್, ಜೋಯಾ ಅಖ್ತರ್, ಅನುರಾಗ್ ಕಶ್ಯಪ್, ಅದಿತಿ ಮಿತ್ತಲ್ ಸೇರಿ ಇನ್ನು ಹಲವು ಬಾಲಿವುಡ್ ಪ್ರಮುಖರು ಈ ಬಹಿರಂಗ ಪತ್ರವನ್ನು ಶೇರ್ ಮಾಡಿದ್ದಾರೆ. ಪತ್ರವು ರಿಯಾ ವಿರುದ್ಧ ನಡೆಸಲಾಗುತ್ತಿದ 'ಮಾಧ್ಯಮ ದಾಳಿ' ಕುರಿತಾಗಿದೆ.

    'ಭಾರತೀಯ ಮಾಧ್ಯಮಗಳ ಬಗ್ಗೆ ಆತಂಕವಾಗುತ್ತಿದೆ'

    'ಭಾರತೀಯ ಮಾಧ್ಯಮಗಳ ಬಗ್ಗೆ ಆತಂಕವಾಗುತ್ತಿದೆ'

    ಭಾರತೀಯ ಮಾಧ್ಯಮಗಳೇ ನೀವು ಚೆನ್ನಾಗಿದ್ದೀರಾ? ನಿಮ್ಮ 'ಆರೋಗ್ಯ'ದ ಬಗ್ಗೆ ನಮಗೆ ಆತಂಕವಾಗುತ್ತಿದೆ. ಇತ್ತೀಚೆಗೆ ನಿಮ್ಮಲ್ಲಿ ಏನೋ ಸಮಸ್ಯೆ ಆಗಿದೆ. ಈ ಹಿಂದೆ ನೀವು ಚೆನ್ನಾಗಿದ್ದಿದ್ದನ್ನು, ಕೆಲವರೊಟ್ಟಿಗೆ ಚೆನ್ನಾಗಿ ನಡೆದುಕೊಂಡಿದ್ದನ್ನು ನೋಡಿದ್ದೇವೆ, ಹಾಗಾಗಿ ನಮಗೆ ಆತಂಕವಾಗುತ್ತಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

    ಸಲ್ಮಾನ್ ಖಾನ್, ಸಂಜಯ್ ದತ್ ಪ್ರಕರಣದಲ್ಲಿ ಹೀಗೆ ವರ್ತಿಸಲಿಲ್ಲ

    ಸಲ್ಮಾನ್ ಖಾನ್, ಸಂಜಯ್ ದತ್ ಪ್ರಕರಣದಲ್ಲಿ ಹೀಗೆ ವರ್ತಿಸಲಿಲ್ಲ

    'ಸಲ್ಮಾನ್ ಖಾನ್, ಸಂಜಯ್ ದತ್‌ ಬಗೆಗೆಲ್ಲಾ ನೀವು ಗೌರವದಿಂದ ನಡೆದುಕೊಂಡಿದ್ದೀರಿ. ಅವರ ವೃತ್ತಿ, ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ವರದಿಗಳನ್ನು ಮಾಡಿದ್ದಿರಿ, ಆದರೆ ಅಪರಾಧಿ ಎಂದು ಸಾಬೀತೇ ಆಗದ ಒಬ್ಬ ಯುವತಿಯ ವಿರುದ್ಧ ನೀವು ದಾಳಿ ಮಾಡುತ್ತಿದ್ದೀರಿ. ಆಕೆಯ ಮಾನ ಹರಣ ಮಾಡುತ್ತಿದ್ದೀರಿ. ಆಕೆಯ ಬಂಧನವನ್ನು ನಿಮ್ಮ ಗೆಲುವು ಎಂದು ಕುಣಿದಾಡಿದ್ದೀರಿ'.

    Recommended Video

    ಕೊನೆಗೂ ಅಪ್ಪಾಜಿ ಜೊತೆ ಆಕ್ಟ್ ಮಾಡೋ ಆಸೆ ಈಡೇರಲಿಲ್ಲ | Shruthi Krishna | Filmibeat Kannada
    ಖಾಸಗಿತನದ ಹಕ್ಕು ಪದೇ-ಪದೇ ಉಲ್ಲಂಘನೆ

    ಖಾಸಗಿತನದ ಹಕ್ಕು ಪದೇ-ಪದೇ ಉಲ್ಲಂಘನೆ

    ಆಕೆಯ ಖಾಸಗಿತನದ ಹಕ್ಕನ್ನು ಪದೇ-ಪದೇ ಉಲ್ಲಂಘನೆ ಮಾಡಿದ್ದೀರಿ. ಆಕೆಯನ್ನು ಪ್ರಕರಣದಲ್ಲಿ ಸಿಕ್ಕಿ ಹಾಕಿಸಲೆಂದು ಪುಂಖಾನುಪುಂಖವಾಗಿ ಸುಳ್ಳು ಸುದ್ದಿಗಳನ್ನು ಬಿತ್ತರಿಸಿದ್ದೀರಿ. ಸತತವಾಗಿ ನಿಯಮಗಳನ್ನು ಮುರಿದಿರಿ ಆ ಯುವತಿಯನ್ನು ಏಕೆ ಗುರಿ ಮಾಡಿಕೊಂಡಿದ್ದೀರಿ? ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

    English summary
    Bollywood Actors and Actresses writes open letter to Indian media for witch hunt of Rhea Chakraborty.
    Wednesday, September 16, 2020, 14:58
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X