Don't Miss!
- News Bengaluru Heat Wave: ಮುಂದಿನ ಒಂದು ವಾರ 'ರಣಬಿಸಿಲು': ಏ.2 ತನಕ 'ಶಾಖ'ದ ಅಲೆ ಮುನ್ಸೂಚನೆ
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಂಬೆ ಹೈಕೋರ್ಟ್ ನಲ್ಲಿ ಹಿನ್ನಡೆ: ಸಂಕಷ್ಟದಲ್ಲಿ ಸೋನು ಸೂದ್
ಕೊರೊನಾ ಲಾಕ್ಡೌನ್ ಕಾಲದಲ್ಲಿ ಸಹಸ್ರಾರು ಜನರಿಗೆ ಸಹಾಯ ಮಾಡಿ 'ಮಸ್ಸೀಹಾ' (ದೇವರು) ಎನಿಸಿಕೊಂಡಿದ್ದ ನಟ ಸೋನು ಸೂದ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಟ ಸೋನು ಸೂದ್ ಗೆ ಸೇರಿದ ಮುಂಬೈನಲ್ಲಿನ ಸ್ಟಾರ್ ಹೋಟೆಲ್ಗೆ ಮುಂಬೈ ಮಹಾನಗರ ಪಾಲಿಕೆಯು ನೊಟೀಸ್ ಜಾರಿ ಮಾಡಿದ್ದು. ಸೋನು ಸೂದ್ ಅವರ ಹೋಟೆಲ್ ಕಟ್ಟಡವು ಅಕ್ರಮವಾಗಿ ಕಟ್ಟಲ್ಪಟ್ಟಲಾಗಿದೆ ಎಂದು ಬಿಎಂಸಿ ಆರೋಪಿಸಿದೆ.
ಬಿಎಂಸಿಯ ನೊಟೀಸ್ ಅನ್ನು ಪ್ರಶ್ನಿಸಿ, ಬಿಎಂಸಿ ನೊಟೀಸ್ ಗೆ ತಡೆ ನೀಡಬೇಕು ಎಂದು ಕೋರಿ ನಟ ಸೂನು ಸೂದ್ ಬಾಂಬೆ ಹೈಕೋರ್ಟ್ ಮೆಟ್ಟಲೇರಿದ್ದರು. ಆದರೆ ಬಾಂಬೆ ಹೈಕೋರ್ಟ್ ನಲ್ಲಿ ಸೋನು ಸೂದ್ ಗೆ ಹಿನ್ನಡೆ ಆಗಿದೆ.
ಬಿಎಂಸಿ ಯ ನೊಟೀಸ್ ಗೆ ಉತ್ತರ ನೀಡಲು 10 ವಾರಗಳ ಗಡುವನ್ನು ಸೋನು ಸೂದ್ ಪರ ವಕೀಲರು ಕೇಳಿದ್ದರು. ಆದರೆ ಅದನ್ನು ನಿರಾಕರಿಸಿದ ನ್ಯಾಯಾಲಯವು 'ಕಾನೂನು ಪರಿಶ್ರಮ ಪಡುವವರಿಗೆ ಸಹಾಯ ಮಾಡುತ್ತದೆ' ಎಂದು ಹೇಳಿದ್ದಾರೆ.
'ನೀವು ತಡವಾಗಿದ್ದೀರಿ. ಈಗ ಚೆಂಡು ಬಿಎಂಸಿ ಕಚೇರಿಯಲ್ಲಿದೆ. ಅವರೊಂದಿಗೆ ಮಾತನಾಡಿಕೊಳ್ಳಿ. ನೀವು ಸಾಕಷ್ಟು ತಡವಾಗಿದ್ದೀರಿ. ತಪ್ಪನ್ನು ಸರಿಮಾಡಿಕೊಳ್ಳುವ ಅವಕಾಶ ನಿಮಗೆ ಸಾಕಷ್ಟು ಇತ್ತು ಆದರೆ ಅದನ್ನು ನೀವು ಕೈಚೆಲ್ಲಿದ್ದೀರಿ' ಎಂದಿದ್ದಾರೆ ನ್ಯಾಯಮೂರ್ತಿ ಪೃಥ್ವಿರಾಜ್ ಚವಾಣ್.
ಸೋನು ಸೂದ್ ಅವರು ವಾಸತಿಗೃಹವನ್ನು ಹೋಟೆಲ್ ಆಗಿ ಬದಲಾಯಿಸಿದ್ದಾರೆ. ಈ ಬದಲಾವಣೆಗಾಗಿ ನಿಯಮಬಾಹಿರವಾಗಿ ಮನೆಯ ಕೆಲವು ಭಾಗಗಳನ್ನು ಒಡೆದಿದ್ದಾರೆ ಎಂದು ಬಿಎಂಸಿ ಆರೋಪಿಸಿದೆ.
Recommended Video
ಈ ಹಿಂದೆ ಕಂಗನಾ ರಣೌತ್ ಅವರ ಕಚೇರಿಯನ್ನು ಸಹ ಅಕ್ರಮ ನಿರ್ಮಾಣ ಎಂದು ಆರೋಪಿಸಿ ಕೆಡವಿತ್ತು ಬಿಎಂಸಿ. ಆದರೆ ಬಿಎಂಸಿಯ ವರ್ತನೆಯನ್ನು ಸುಪ್ರೀಂಕೋರ್ಟ್ ಟೀಸಿತ್ತು.