Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಗನಾ ಕಚೇರಿ ನೆಲಸಮ ಕಾರ್ಯಕ್ಕೆ ಬಾಂಬೆ ಹೈಕೋರ್ಟ್ ತಡೆ
ನಟಿ ಕಂಗನಾ ರಣಾವತ್ ಅಕ್ರಮವಾಗಿ ಕಚೇರಿ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಬಾಂದ್ರಾದಲ್ಲಿರುವ ನಟಿಯ ಕಚೇರಿಯನ್ನು ನೆಲಸಮ ಮಾಡುವ ಕಾರ್ಯಕ್ಕೆ ಮುಂಬೈ ಮಹಾನಗರ ಪಾಲಿಕೆ ಚಾಲನೆ ನೀಡಿತ್ತು.
ಜೆಸಿಬಿ ಯಂತ್ರ ಬಳಸಿ ಪಾಲಿಕೆ ಸಿಬ್ಬಂದಿ ಕಂಗನಾ ರಣಾವತ್ ಅವರ ಕಚೇರಿಯನ್ನು ಉರುಳಿಸುವ ಕಾರ್ಯವನ್ನು ಸಹ ಆರಂಭಿಸಿದ್ದರು. ಕಚೇರಿಯ ಪೀಠೋಪಕರಣ ಹಾಗೂ ಆಸ್ತಿಪಾಸ್ತಿಯನ್ನು ನಾಶ ಮಾಡಲಾಗಿತ್ತು.
ಇದೀಗ, ಮುಂಬೈ ಹೈ ಕೋರ್ಟ್ ಕಂಗನಾ ಅವರ ಕಚೇರಿ ನೆಲಸಮ ಮಾಡದಿರಲು ಸೂಚಿಸಿದೆ. ಮುಂಬೈ ಪಾಲಿಕೆಯ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಕಂಗನಾಗೆ ನ್ಯಾಯಾಲಯ ರಿಲೀಫ್ ನೀಡಿದೆ.
ಕಂಗನಾ ರಣಾವತ್ ಅವರ ಆಸ್ತಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಮತ್ತು ವಿವರಗಳನ್ನು ಮುಂಬೈ ಪಾಲಿಕೆ ಗುರುವಾರ ಮಧ್ಯಾಹ್ನ 3 ಗಂಟೆಗೆ ನ್ಯಾಯಾಧೀಶ ಜೆಸಿ ಕಥಾವಲ್ಲಾ ಅವರ ಮುಂದೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಕಂಗನಾ ಕಚೇರಿ ನೆಲಸಮ ಕಾರ್ಯಕ್ಕೆ ಚಾಲನೆ: 'ಇದು ಪ್ರಜಾಪ್ರಭುತ್ವದ ಸಾವು' ಎಂದ ನಟಿ
ಈ ಕುರಿತು ಕಂಗನಾ ರಣಾವತ್ ಅವರ ವಕೀಲ ರಿಜ್ವಾನ್ ಸಿದ್ದಿಕಿ ಪ್ರತಿಕ್ರಿಯೆ ನೀಡಿದ್ದು, ''ಬಿಎಂಸಿ ನೀಡಿರುವ ನೋಟಿಸ್ ಕಾನೂನುಬಾಹಿರ ಮತ್ತು ಅವರು ಅಕ್ರಮವಾಗಿ ಕಂಗನಾ ಕಚೇರಿಯ ಆವರಣಕ್ಕೆ ಪ್ರವೇಶಿಸಿದರು. ಸದ್ಯಕ್ಕೆ ಆವರಣದಲ್ಲಿ ಯಾವುದೇ ಕೆಲಸ ನಡೆಯುತ್ತಿಲ್ಲ'' ಎಂದು ಮಾಹಿತಿ ನೀಡಿದ್ದಾರೆ.
Recommended Video
ಇನ್ನು ಹಿಮಾಚಲ ಪ್ರದೇಶದಿಂದ ಇಂದು ಮುಂಬೈಗೆ ಆಗಮಿಸುತ್ತಿರುವ ಕಂಗನಾ ಅವರಿಗೂ ಶಿವಸೇನಾ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಿಂತೆ ಹಿಮಾಚಲ ಸರ್ಕಾರ ಕಂಗನಾ ಅವರಿಗೆ 'ವೈ' ಶ್ರೇಣಿಯ ಭದ್ರತೆ ನೀಡಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಅನ್ವಯ ಕಂಗನಾ ಮುಂಬೈಯ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.