Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಂಬೆ ಹೈ ಕೋರ್ಟ್ನಲ್ಲಿ ಕಂಗನಾ ರಣಾವತ್ ಅರ್ಜಿ ವಿಚಾರಣೆ
ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ನೆಲೆಸಮ ಮಾಡಲು ಮುಂದಾಗಿತ್ತು. ಕಟ್ಟಡ ನೆಲಕ್ಕೆ ಉರುಳಿಸುವ ಕಾರ್ಯಕ್ಕೂ ಚಾಲನೆ ನೀಡಿ ಅರ್ಧ ಕಟ್ಟಡ ನೆಲಸಮ ಸಹ ಮಾಡಲಾಗಿತ್ತು.
ಮುಂಬೈ ಮಹಾನಗರ ಪಾಲಿಕೆ ದ್ವೇಷದಿಂದ ನನ್ನ ಕಚೇರಿ ಉರುಳಿಸಿದೆ, ನಾನು ಸೂಕ್ತ ದಾಖಲೆ ಹಾಗೂ ಪರವಾನಗಿ ಪಡೆದು ಕಟ್ಟಡ ನಿರ್ಮಿಸಿದ್ದೇನೆ. ನನಗೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿ ಬಾಂಬೆ ಹೈ ಕೋರ್ಟ್ನಲ್ಲಿ ನಟಿ ಕಂಗನಾ ಅರ್ಜಿ ಹಾಕಿದ್ದರು.
ಎರಡು ಕೋಟಿ ಕೇಳಿದ ಕಂಗನಾ ವಿರುದ್ಧ ಹರಿಹಾಯ್ದ ಬಿಎಂಸಿ
ಈ ಸಂಬಂಧ ಇಂದು ಮಧ್ಯಾಹ್ನ ಮೂರು ಗಂಟೆಗೆ ಹೈ ಕೋರ್ಟ್ನಲ್ಲಿ ಕಂಗನಾ ಅವರ ಅರ್ಜಿ ವಿಚಾರಣೆಗೆ ಬರಲಿದೆ. ಆಸ್ತಿಪಾಸ್ತಿ ನಾಶ ಮಾಡಿದ್ದಕ್ಕೆ 2 ಕೋಟಿ ಪರಿಹಾರ ಕೇಳಿರುವ ಕಂಗನಾ ವಿರುದ್ಧ ಮುಂಬೈ ಪಾಲಿಕೆ ಆಕ್ರೋಶಗೊಂಡಿದೆ.
ಸುಶಾಂತ್ ರಜಪೂತ್ ಪ್ರಕರಣದಲ್ಲಿ ಮುಂಬೈ ಸರ್ಕಾರ ಹಾಗೂ ಮುಂಬೈ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದ ಕಂಗನಾ, 'ಪಾಕ್ ಆಕ್ರಮಿತ ಮುಂಬೈ' ಎಂದು ಉಲ್ಲೇಖಿಸಿದ್ದರು. ಕಂಗನಾ ಅವರ ಈ ಹೇಳಿಕೆಗೆ ಶಿವಸೇನಾ ಸಂಸದ ಸಂಜಯ್ ರಾವತ್ ಖಂಡಿಸಿ, 'ಮುಂಬೈ ಬರಬೇಡಿ' ಎಂದು ಕಂಗನಾಗೆ ಸವಾಲ್ ಎಸೆದರು.
ಸಂಜಯ್ ರಾವತ್ ಅವರ ಸವಾಲ್ಗೆ ಪ್ರತಿ ಸವಾಲ್ ಹಾಕಿದ ಕಂಗನಾ, ಹರಿಯಾಣ ಸರ್ಕಾರದಿಂದ 'ವೈ' ಶ್ರೇಣಿಯ ಭದ್ರತೆ ಪಡೆದುಕೊಂಡು, ಮುಂಬೈಗೆ ಬಂದಿದ್ದರು. ಕಂಗನಾ ಮುಂಬೈಗೆ ಬರುವ ದಿನವೇ ಪಾಲಿಕೆಯಿಂದ ಅವರ ಕಚೇರಿ ಕಟ್ಟಡ ನೆಲಕ್ಕೆ ಉರುಳಿಸುವ ಕಾರ್ಯ ಆರಂಭ ಮಾಡಲಾಗಿತ್ತು.