Don't Miss!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- News Realme: ಅಗ್ಗದ 5G ಸ್ಮಾರ್ಟ್ಫೋನ್ ಬಿಡುಗಡೆ ರೆಡಿ; ಇದರ ಬೆಲೆ ಎಷ್ಟು ಗೊತ್ತಾ?
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಮೌಳಿಯ ವಿರುದ್ಧ ಬೆದರಿಕೆ ಆರೋಪ ಹೊರಿಸಿದ ನಿರ್ಮಾಪಕ ಬೋನಿ ಕಪೂರ್
ಭಾರತದ ಬಹುನಿರೀಕ್ಷಿತ ಸಿನಿಮಾ 'RRR'. ತೆಲುಗು ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಸಿನಿಮಾಕ್ಕಾಗಿ ಬಾಲಿವುಡ್ನ ಮಂದಿ ಸಹ ಕುತೂಹಲದಿಂದ ಕಾಯುತ್ತಿದ್ದಾರೆ.
RRR ಸಿನಿಮಾ ಅಕ್ಟೋಬರ್ 13 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದ ಬಳಿಕ ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ನಿದ್ದೆಗೆಡಿಸಿದೆ. ಯಾಕೆಂದರೆ ಆರ್ ಆರ್ ಆರ್ ಸಿನಿಮಾ ಬಿಡುಗಡೆ ಆದ ಎರಡೇ ದಿನಕ್ಕೆ ಅಂದರೆ ಅಕ್ಟೋಬರ್ 15 ಕ್ಕೆ ಬೋನಿ ಕಪೂರ್ ನಿರ್ಮಾಣದ 'ಮೈದಾನ್' ಸಿನಿಮಾ ಬಿಡುಗಡೆ ಆಗಿತ್ತಿದೆ. ಆರ್ ಆರ್ ಆರ್ ಅಲೆಯಲ್ಲಿ ತಮ್ಮ ನಿರ್ಮಾಣದ ಸಿನಿಮಾ 'ಮೈದಾನ್' ಕೊಚ್ಚಿಹೋಗುತ್ತದೆ ಎಂಬ ಭಯ ಬೋನಿ ಕಪೂರ್ ಅನ್ನು ಕಾಡುತ್ತಿದೆ.
ದಟ್ಟ ಅರಣ್ಯಕ್ಕೆ ನುಗ್ಗಲಿದ್ದಾರೆ ರಾಜಮೌಳಿ-ಮಹೇಶ್ ಬಾಬು
ವಿಶೇಷ ಎಂದರೆ ಎರಡು ಸಿನಿಮಾದಲ್ಲೂ ನಟ ಅಜಯ್ ದೇವಗನ್ ಕಾಣಿಸಿಕಂಡಿದ್ದಾರೆ. ಮೈದಾನ್ ನಲ್ಲಿ ನಾಯಕನಾಗಿ ಮಿಂಚಿದರೆ, ಆರ್ ಆರ್ ಆರ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಕ್ಸ್ ಆಫೀಸ್ ಕ್ಲ್ಯಾಶ್ ಬಗ್ಗೆ ಬೋನಿ ಕಪೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಮೌಳಿ ವಿರುದ್ಧ ಗುಡುಗಿರುವ ಬೋನಿ ಕಪೂರ್ ಇದು ರಾಜಮೌಳಿಯ ಬೆದರಿಕೆ ಮತ್ತು ಅನೈತಿಕ ಎಂದು ಹೇಳಿದ್ದಾರೆ.
ಇತ್ತೀಚಿಗೆ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಬೋನಿ ಕಪೂರ್, 'ಆರ್ ಆರ್ ಆರ್ ಮತ್ತು ಮೈದಾನ್ ನಡುವಿನ ಘರ್ಷಣೆ ಬಹಳ ದುರದೃಷ್ಟಕರ ಮತ್ತು ಅನೈತಿಕವಾಗಿದೆ' ಎಂದು ಹೇಳಿದ್ದಾರೆ. ಈ ಬಗ್ಗೆ ಅಜಯ್ ದೇವಗನ್ ಅವರಿಗೆ ತಿಳಿದಿಲ್ಲ. ಇದು ರಾಜಮೌಳಿಯ ಬಲವಾದ ತಂತ್ರಗಾರಿಕೆ ಮತ್ತು ಬೆದರಿಸುವಿಕೆ ಎಂದು ಆರೋಪಿಸಿದ್ದಾರೆ.
ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ಮನರಂಜನಾ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ಸಮಯದಲ್ಲಿ ಬಹುನಿರೀಕ್ಷೆಯ ಚಿತ್ರಗಳ ಘರ್ಷಣೆ ದುರದೃಷ್ಟಕರ ಎಂದು ಹೇಳಿದ್ದಾರೆ.
Recommended Video
ಮೂಲಗಳ ಪ್ರಕಾರ ಅಜಯ್ ದೇವಗನ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿದರು ಪ್ರಯೋಜನವಾಗಿಲ್ಲ ಎನ್ನಲಾಗುತ್ತಿದೆ. ಆರ್ ಆರ್ ಆರ್ ಸಿನಿಮಾವನ್ನು ಮುಂದೂವಂತೆ ಅಜಯ್ ದೇವಗನ್ ಮನವಿ ಮಾಡಿಕೊಂಡರು ರಾಜಮೌಳಿ ಒಪ್ಪಿಲ್ಲ ಎನ್ನಲಾಗುತ್ತಿದೆ. ಹಾಗಾಗಿ ಬೋನಿ ಕಪೂರ್ ಅವರೇ ತನ್ನ ಸಿನಿಮಾದ ರಿಲೀಸ್ ಡೇಟ್ ಅನ್ನು ಮುಂದಕ್ಕೆ ಹಾಕುತ್ತಾರಾ ಅಥವಾ ಆರ್ ಆರ್ ಆರ್ ವಿರುದ್ಧ ತೊಡೆತಟ್ಟಿ ನಿಲ್ಲುತ್ತಾರಾ ಎನ್ನುವುದನ್ನು ಕಾದು ನೋಡಬೇಕು.