Don't Miss!
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- News Dr.Rajkumar: ಹುಟ್ಟೂರಲ್ಲಿ ಮುತ್ತುರಾಜಣ್ಣನ ನೆನಪುಗಳು ನೂರಾರು.. ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಎಫ್ಐಆರ್, ಇಡಿ ಇಂದ ನೋಟಿಸ್
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ಕುಣಿಕೆ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಕೊರಳಿಗೆ ಸ್ವಲ್ಪ-ಸ್ವಲ್ಪವಾಗಿ ಬಿಗಿಯಾಗುತ್ತಿರುವಂತೆ ತೋರುತ್ತಿದೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ ಮೊದಲನೇಯದಾಗಿ ರಿಯಾ ಚಕ್ರವರ್ತಿ ವಿರುದ್ಧ ಪ್ರಕರಣ ದಾಖಲಿಸಿದೆ. ರಿಯಾ ಚಕ್ರವರ್ತಿಯೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದ್ದರು, ಇದೀಗ ಸಿಬಿಐ ರಿಯಾ ವಿರುದ್ಧವೇ ಎಫ್ಐಆರ್ ದಾಖಲಿಸಿದೆ.
ರಿಯಾ ಚಕ್ರವರ್ತಿಗೆ ಅಂಡರ್ವರ್ಲ್ಡ್ ಸಂಪರ್ಕವಿದೆ ಎಂದ ಬಿಹಾರದ ಮಾಜಿ ಮುಖ್ಯಮಂತ್ರಿ
ಮತ್ತೊಂದು ಕಡೆಯಿಂದ ಜಾರಿ ನಿರ್ದೇಶನಾಲಯ (ಇಡಿ) ಸಹ ರಿಯಾ ಗೆ ನೋಟಿಸ್ ಕಳುಹಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಬಿಹಾರ ಪೊಲೀಸರ ದೂರು ಆಧರಿಸಿ ಎಫ್ಐಆರ್
ಬಿಹಾರ ಪೊಲೀಸರ ಮನವಿ ಆಧರಿಸಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು. ಬಿಹಾರ ಪೊಲೀಸರ ದೂರನ್ನು ಆಧರಿಸಿಯೇ ರಿಯಾ ಚಕ್ರವರ್ತಿ ಹಾಗೂ ಅವರ ಕುಟುಂಬದವರ ವಿರುದ್ಧ ದೂರು ಸಿಬಿಐ ಎಫ್ಐಆರ್ ದಾಖಲಿಸಿದೆ.
ಸಿಬಿಐನ ವಿಶೇಷ ತಂಡದಿಂದ ತನಿಖೆ
ವಿಜಯ್ ಮಲ್ಯ ಪ್ರಕರಣ, ಆಗಸ್ಟಾ ವೆಸ್ಟ್ಲ್ಯಾಂಡ್ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐನ ವಿಶೇಷ ತನಿಖಾ ತಂಡ (ಎಸ್ಐಟಿ) ವೇ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನೂ ಸಹ ತನಿಖೆ ಮಾಡಲಿದೆ.
ದಿಶಾ ಸಾಲಿಯಾನ್ ಆತ್ಮಹತ್ಯೆ: ಆಘಾತಕಾರಿ ಸಂಗತಿಗಳನ್ನು ತೆರೆದಿಟ್ಟ ಪೋಸ್ಟ್ ಮಾರ್ಟಂ ವರದಿ
ಇಡಿ ಸಹ ಸಮನ್ಸ್ ನೀಡಿದೆ
ಸುಶಾಂತ್ ಖಾತೆಯಿಂದ ಕೋಟ್ಯಂತರ ಮೊತ್ತದ ಹಣ ರಿಯಾ ಖಾತೆಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಆಧರಿಸಿ ಪ್ರಕರಣದಲ್ಲಿ ಆಸಕ್ತಿ ತೋರಿರುವ ಜಾರಿ ನಿರ್ದೇಶನಾಲಯ ಸಹ ರಿಯಾ ಗೆ ನೊಟೀಸ್ ಜಾರಿ ಮಾಡಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
ಸುಶಾಂತ್- ರಿಯಾ ಮೊದಲ ಭೇಟಿಯಾಗಿದ್ದು ಎಲ್ಲಿ?: ನಂತರ ನಡೆದಿದ್ದು ಆಘಾತ ಮೂಡಿಸುವ ಘಟನೆಗಳು
ತನಿಖಾಧಿಕಾರಿಗೆ ಕ್ವಾರಂಟೈನ್
ಸುಶಾಂತ್ ಪ್ರಕರಣದ ವಿಚಾರಣೆಗೆಂದು ಮುಂಬೈಗೆ ಬಂದ ಐಪಿಎಸ್ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆಯವರು ಹೋಂ ಕ್ವಾರಂಟೈನ್ಗೆ ಹಾಕಿದ್ದಾರೆ. ಇದನ್ನು ವಿನಯ್ತಿವಾರಿ ತೀವ್ರವಾಗಿ ಖಂಡಿಸಿದ್ದಾರೆ. ಉದ್ದೇಶಪೂರ್ವಕವಾಗಿ ನನ್ನನ್ನು ಕ್ವಾರಂಟೈನ್ಗೆ ಹಾಕಲಾಗಿದೆ ಎಂದಿದ್ದಾರೆ.