Don't Miss!
- News ಬಿಜೆಪಿಗೆ ಮತ್ತೊಂದು ಆಘಾತ, ಮತ್ತೋರ್ವ ವಿಧಾನ ಪರಿಷತ್ ಸದಸ್ಯ ರಾಜೀನಾಮೆ: ಮಾಜಿ ಸಿಎಂ ಏನಂದ್ರು?
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಅಪಘಾತದಲ್ಲಿ ಮೊನ್ನೆ ಸಿರೀಯಲ್ ನಟಿ, ನಿನ್ನೆ ಬಾಲ ನಟ ಸಾವು
ಇತ್ತೀಚಿಗಷ್ಟೆ ಕನ್ನಡ ಧಾರಾವಾಹಿ ನಟಿ ಶೋಭ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಶೋಭ ಸೇರಿದಂತೆ ಐವರು ಮೃತಪಟ್ಟಿದ್ದರು.
ಈ ಘಟನೆ ನಡೆದ ಒಂದು ದಿನದ ಅಂತರದಲ್ಲಿ ಮತ್ತೊಂದು ರಸ್ತೆ ಅಪಘಾತ ನಡೆದಿದ್ದು, ಹಿಂದಿ ಚಿತ್ರರಂಗದ ಬಾಲನಟ ಶಿವಲೇಖ್ ಸಿಂಗ್ ನಿಧನ ಹೊಂದಿದ್ದಾರೆ.
ಗುರುವಾರ ಛತ್ತೀಸ್ಘಡ್ ದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 14 ವರ್ಷದ ಬಾಲನಟ ಶಿವಲೇಖ್ ಸಿಂಗ್ ದುರ್ಮಣ ಹೊಂದಿದ್ದಾರೆ. ರಾಯ್ಪುರದಿಂದ ಬಿಲಾಸ್ಪುರಕ್ಕೆ ಪ್ರಯಾಣ ಮಾಡುತ್ತಿದ್ದ ವೇಳೆ ತಾವು ಚಲಿಸುತ್ತಿದ್ದ ಕಾರಿಗೆ ಎದುರುಗಡೆಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಸಾವನಪ್ಪಿದ 'ಮಗಳು ಜಾನಕಿ' ಖ್ಯಾತಿಯ ನಟಿ ಶೋಭಾ
ಈ ಘಟನೆಯಲ್ಲಿ ಬಾಲನಟ ಮೃತಪಟ್ಟಿದ್ದರೆ, ಆತನ ತಾಯಿ ಮತ್ತು ತಂದೆ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಸದ್ಯ ಶಿವಲೇಖ್ ಸಿಂಗ್ ಅವರ ತಾಯಿ ಸ್ಥಿತಿ ಬಹಳ ಗಂಭೀರವಾಗಿದೆ ಎನ್ನಲಾಗಿದೆ.
ಶಿವಲೇಖ್ ತಂದೆ-ತಾಯಿ ಬಹಳ ವರ್ಷಗಳಿಂದ ಮುಂಬೈನಲ್ಲಿ ನೆಲೆಸಿದ್ದಾರೆ. ಸಂಕಟಮೋಚಕ ಹನುಮಾನ್, ಬಾಲ್ ವೀರ್, ಸಸುರಾಲ್ ಸಿಮರ್ ಕಾ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಕೆಲವು ರಿಯಾಲಟಿ ಶೋಗಳಲ್ಲೂ ಈ ಬಾಲನಟ ಅಭಿನಯಿಸಿದ್ದರು.