Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀದೇವಿ ಪಾರ್ಥೀವ ಶರೀರ ಕುಟುಂಬಕ್ಕೆ ಹಸ್ತಾಂತರ: ಇಂದು ಮಧ್ಯರಾತ್ರಿ ಭಾರತಕ್ಕೆ ಆಗಮನ.?
ಕಡೆಗೂ ಶ್ರೀದೇವಿ ಪಾರ್ಥೀವ ಶರೀರ ಕುಟುಂಬದ ಕೈಸೇರಿದೆ. ಶ್ರೀದೇವಿ ಪಾರ್ಥೀವ ಶರೀರವನ್ನ ಭಾರತಕ್ಕೆ ರವಾನೆ ಮಾಡಲು ದುಬೈ ಪಬ್ಲಿಕ್ ಪ್ರಾಸಿಕ್ಯೂಷನ್ ಒಪ್ಪಿಗೆ ನೀಡಿದೆ.
ವೈದ್ಯಕೀಯ ವರದಿಗಳು, ಮರಣ ಪ್ರಮಾಣ ಪತ್ರ ಹಾಗೂ ಭಾರತಕ್ಕೆ ಮೃತದೇಹ ಸಾಗಿಸಲು ಕ್ಲಿಯರೆನ್ಸ್ ಸರ್ಟಿಫಿಕೇಟ್ ಸೇರಿದಂತೆ ಎಲ್ಲ ದಾಖಲೆಗಳನ್ನ ದುಬೈ ಪೊಲೀಸರು ಶ್ರೀದೇವಿ ಕುಟುಂಬಕ್ಕೆ ನೀಡಿದ್ದಾರೆ.
ಸದ್ಯ ಶ್ರೀದೇವಿ ಮೃತದೇಹವನ್ನ ಎಂಬ್ಲೇಮಿಂಗ್ (ಪಾರ್ಥೀವ ಶರೀರವನ್ನ ಸಂರಕ್ಷಿಸುವ ಪ್ರಕ್ರಿಯೆ)ಗೆ ಒಳಪಡಿಸಲಾಗಿದೆ. ಅದು ಮುಗಿದ ಮೇಲೆ ಶ್ರೀದೇವಿ ಮೃತದೇಹವನ್ನ ಭಾರತಕ್ಕೆ ತರಲಾಗುತ್ತದೆ. ಮುಂದೆ ಓದಿರಿ...
|
ಕ್ಲಿಯರೆನ್ಸ್ ಸರ್ಟಿಫಿಕೇಟ್ ಸಿಕ್ಕಿದೆ
ಕಾನೂನು ಪ್ರಕ್ರಿಯೆ ಮುಗಿದು, ಸಂಪೂರ್ಣ ತನಿಖೆ ಕೈಗೊಂಡ ಬಳಿಕ ದುಬೈ ಪಬ್ಲಿಕ್ ಪ್ರಾಸಿಕ್ಯೂಷನ್ ಶ್ರೀದೇವಿ ಅವರ ಮೃತದೇಹವನ್ನ ಭಾರತಕ್ಕೆ ರವಾನೆ ಮಾಡಲು ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದೆ ಎಂದು ಕಾಲೀಜ್ ಟೈಮ್ಸ್ ವರದಿ ಮಾಡಿದೆ.
ನಟಿ ಶ್ರೀದೇವಿ ಪೋಸ್ಟ್ ಮಾರ್ಟಂ ರಿಪೋರ್ಟ್ ಸುತ್ತ ಅನುಮಾನದ ಹುತ್ತ.!
|
ಇದು ಖಚಿತ ಮಾಹಿತಿ
ಶ್ರೀದೇವಿ ಮೃತದೇಹವನ್ನ ಕುಟುಂಬಕ್ಕೆ ಹಸ್ತಾಂತರಿಸಲು ದುಬೈ ಪೊಲೀಸರು ಹಸಿರು ನಿಶಾನೆ ನೀಡಿರುವ ಬಗ್ಗೆ ದುಬೈನಲ್ಲಿರುವ ಭಾರತೀಯ ರಾಯಭಾರ ಕಛೇರಿ ಟ್ವೀಟ್ ಮಾಡಿದೆ.
ಶ್ರೀದೇವಿ ಪಾರ್ಥೀವ ಶರೀರ ರವಾನೆಗೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ!
ಪಾರ್ಥೀವ ಶರೀರವನ್ನ ಸಂರಕ್ಷಿಸುವ ಪ್ರಕ್ರಿಯೆಗೆ ಚಾಲನೆ
ದುಬೈ ಪಬ್ಲಿಕ್ ಪ್ರಾಸಿಕ್ಯೂಷನ್ ನಿಂದ ಕ್ಲಿಯರೆನ್ಸ್ ಲೆಟರ್ ಬಂದ ಕೂಡಲೆ, ಪಾರ್ಥೀವ ಶರೀರವನ್ನ ಸಂರಕ್ಷಿಸುವ ಪ್ರಕ್ರಿಯೆ (ಎಂಬ್ಲೇಮಿಂಗ್)ಗೆ ಚಾಲನೆ ನೀಡಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಭಾರತಕ್ಕೆ ಶ್ರೀದೇವಿ ಮೃತದೇಹ ರವಾನೆ ಆಗಲಿದೆ.
ಶ್ರೀದೇವಿ ಬದುಕಿನ ಕಹಿ ಸತ್ಯ ಅನಾವರಣ ಮಾಡಿದ ರಾಮ್ ಗೋಪಾಲ್ ವರ್ಮಾ
ಇನ್ನೂ ನಾಲ್ಕೈದು-ಗಂಟೆ ಬೇಕು
ಎಂಬ್ಲೇಮಿಂಗ್ ಪ್ರಕ್ರಿಯೆ ಮುಗಿದು, ದುಬೈ ನಿಂದ ಶ್ರೀದೇವಿ ಕುಟುಂಬ ಹೊರಡಲು ಕನಿಷ್ಟ ಅಂದ್ರೂ ಇನ್ನೂ ನಾಲ್ಕೈದು ಗಂಟೆ ಬೇಕು. ಹೀಗಾಗಿ, ಶ್ರೀದೇವಿ ಪಾರ್ಥೀವ ಶರೀರ ಇಂದು ಮಧ್ಯರಾತ್ರಿ ಅಥವಾ ನಾಳೆ ಮುಂಜಾನೆ ವೇಳೆಗೆ ಭಾರತಕ್ಕೆ ತಲುಪುವ ಸಾಧ್ಯತೆ ಇದೆ