twitter
    For Quick Alerts
    ALLOW NOTIFICATIONS  
    For Daily Alerts

    ಕಂಗನಾ ರಣೌತ್ ವಿರುದ್ಧ ತುಮಕೂರು ನ್ಯಾಯಾಲಯದಲ್ಲಿ ದೂರು

    |

    ನಟಿ ಕಂಗನಾ ರಣೌತ್ ವಿರುದ್ಧ ತುಮಕೂರಿನ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

    ನಟಿ ಕಂಗನಾ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದನ್ನು ವಿರೋಧಿಸಿ ಎಲ್.ರಮೇಶ್ ನಾಯಕ್ ಎಂಬ ವಕೀಲರು ದೂರು ದಾಖಲಿದ್ದಾರೆ.

    ರೈತರ ಕುರಿತು ಕೇಂದ್ರ ಸರ್ಕಾರದ ಮಸೂದೆಗಳನ್ನು ವಿರೋಧಿಸಿ ದೇಶದ ಹಲವೆಡೆ ರೈತರು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು, ಈ ಬಗ್ಗೆ ಟ್ವೀಟ್ ಮಾಡಿದ್ದ ಕಂಗನಾ, ಪ್ರತಿಭಟನೆ ನಡೆಸಿದ್ದವರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು.

    Complaint Against Kangana Ranut At Tumakuru Court

    ಕಂಗನಾ ಟ್ವೀಟ್‌ ಸಂಬಧಿಸಿ ವಕೀಲ ರಮೇಶ್ ನಾಯಕ್ ಅವರು, ಸೆಪ್ಟೆಂಬರ್ 22 ರಂದೇ ತುಮಕೂರು ಜಿಲ್ಲಾ ಎಸ್‌ಪಿಗೆ ಇ-ಮೇಲ್ ಮೂಲಕ ದೂರು ದಾಖಲಿಸಿದ್ದರು. ಆದರೆ ಅವರಿಂದ ಪ್ರತಿಕ್ರಿಯೆ ಬಾರದ ಕಾರಣ, ತುಮಕೂರು ಜಿಲ್ಲಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದಾರೆ.

    Recommended Video

    ಅನುಶ್ರೀ ಹುಡುಕಿಕೊಂಡು ಮಂಗಳೂರಿನಿಂದ ಬೆಂಗಳೂರಿಗೆ ಬಂದ CCB ಪೊಲೀಸ್ | Filmibeat Kannada

    ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ ಕಂಗನಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಬೇಕು ಅಥವಾ ನ್ಯಾಯಾಲವೇ ನೇರವಾಗಿ ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ರಮೇಶ್ ನಾಯಕ್ ಒತ್ತಾಯಿಸಿದ್ದಾರೆ.

    English summary
    Complaint against Kangana Ranut at Tumakuru district court for comparing farmers to terrorists.
    Saturday, September 26, 2020, 9:52
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X