Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪದ್ಮಾವತ್' ವಿರುದ್ಧ ಪ್ರತಿಭಟನೆ : ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ
'ಪದ್ಮಾವತ್' ಸಿನಿಮಾದ ವಿರುದ್ಧ ಈಗಾಗಲೇ ಅನೇಕ ಪ್ರತಿಭಟನೆಗಳು ನಡೆದಿದೆ. ಶಾಲಾ ವಾಹನದ ಮೇಲೆ ಕಲ್ಲು ತೂರಾಟದಿಂದ ಹಿಡಿದು ಚಿತ್ರದ ವಿರುದ್ಧ ಹಿಂಸಾತ್ಮಕವಾಗಿ ಪ್ರತಿಭಟನೆ ಮಾಡಿದ್ದರು. ಈ ರೀತಿ ಮಾಡಿದವರ ವಿರುದ್ಧ ಈಗ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಸಿನಿಮಾದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಕರ್ಣಿ ಸೇನೆಯ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚಿಸುವಂತೆ ಅರ್ಜಿ ಹಾಕಲಾಗಿದೆ. ಕರ್ಣಿ ಸೇನೆ ಚಿತ್ರದ ವಿರುದ್ಧ ಹರ್ಯಾಣ, ರಾಜಸ್ತಾನ, ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ದೊಡ್ಡ ಪ್ರತಿಭಟನೆಗಳನ್ನು ಮಾಡಿತ್ತು. ಜೊತೆಗೆ ಎಲ್ಲಿಯೂ 'ಪದ್ಮಾವತ್' ಚಿತ್ರ ಬಿಡುಗಡೆ ಆಗದಂತೆ ತಡೆ ಹಿಡಿಯಲಾಗಿತ್ತು.
ಫೇಸ್ ಬುಕ್ ಲೈವ್ ಮೂಲಕ 'ಪದ್ಮಾವತ್' ಪುಕ್ಕಟೆ ಪ್ರಸಾರ.!
ಪ್ರಾರಂಭದಲ್ಲಿ ಸಿನಿಮಾಗೆ ವ್ಯಕ್ತವಾದ ವಿರೋಧದ ಹಿನ್ನಲೆಯಲ್ಲಿ ಹರಿಯಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಸಿನಿಮಾ ಪ್ರದರ್ಶನವನ್ನು ರದ್ದು ಮಾಡದಂತೆ ತೀರ್ಪು ನೀಡಿತ್ತು. ಅದರಂತೆ ಈಗಾಗಲೇ 'ಪದ್ಮಾವತ್' ಚಿತ್ರ ಪ್ರದರ್ಶನ ಅನೇಕ ಕಡೆ ಶುರುವಾಗಿದೆ. ಬೆಂಗಳೂರಿನಲ್ಲಿಯೂ ನಿನ್ನೆ ಸಂಜೆಯಿಂದ ಚಿತ್ರಪ್ರದರ್ಶನ ಪ್ರಾರಂಭವಾಗಿತ್ತು.
ನಿನ್ನೆ ದೆಹಲಿಯ ಶಾಲಾ ವಾಹನಕ್ಕೆ ಪ್ರತಿಭಟನೆ ಮಾಡುವವರು ಕಲ್ಲು ತೂರಿದ್ದರು. 'GD Goenka world' ಎಂಬ ಶಾಲಾ ವಾಹನ ಗಾಜು ಚೂರು ಚೂರಾಗಿತ್ತು. ಆದರೆ ಅದರಲ್ಲಿ ಇದ್ದ ಮಕ್ಕಳಿಗೆ ಯಾವುದೇ ಅಪಾಯ ಆಗಿರಲ್ಲ.