Don't Miss!
- News ಚಾಮರಾಜನಗರ: 12 ವರ್ಷಗೊಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಎಲ್ಲರನ್ನೂ ಬಯ್ಯೋದೇ ವಿಶೇಷ.!-ಬೈಗಳು ಹೇಗಿರುತ್ತವೆ ಗೊತ್ತಾ?
- Automobiles ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- Finance ಸಾಂಬಾರು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ, ಇಂದು 276ಕ್ಕೂ ಹೆಚ್ಚು ಚಿನ್ನಾಭರಣ ಮಳಿಗೆಗಳ ಒಡೆಯ!
- Lifestyle ಹಸುವಿನ ಹಾಲಿನಿಂದ ಇಡೀ ವಿಶ್ವಕ್ಕೆ ಇನ್ಸುಲಿನ್..! ಹೊಸ ಅಧ್ಯಯನದಲ್ಲಿ ಬಹಿರಂಗ.!
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Technology Samsung: ಸ್ಯಾಮ್ಸಂಗ್ನ ಮುಂಬರುವ ಫೋಲ್ಡಬಲ್ ಫೋನ್ ನೀವು ಊಹಿಸಲಾಗದ ಅಗ್ಗದ ಬೆಲೆಗೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದಕ್ಕೆ ಕಾರಣವಾಯ್ತು ದೀಪಿಕಾ-ರಣ್ವೀರ್ ಮದ್ವೆ.!
Recommended Video
ಬಾಲಿವುಡ್ ನಟ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜೋಡಿ ನವೆಂಬರ್ 14 ಮತ್ತು 15 ರಂದು ಇಟಲಿಯ ಲೇಕ್ ಕೊಮೊದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.
ಕೊಂಕಣಿ ಮತ್ತು ಸಿಂಧಿ ಸಂಪ್ರದಾಯದಂತೆ ದೀಪ್-ವೀರ್ ಜೋಡಿ ಮದುವೆಯಾಗಿದ್ದು, ಈಗ ಆ ವಿವಾಹ ವಿವಾದಕ್ಕೆ ಕಾರಣವಾಗಿದೆ. ಹೌದು, ಸಿಂಧಿ ಸಂಪ್ರದಾಯದಲ್ಲಿ ನಡೆದ ಮದುವೆ ಈಗ ಸಿಖ್ಖರ ಕೆಂಗಣ್ಣಿಗೆ ಗುರಿಯಾಗಿದೆ.
ಸಿಂಧಿ ಸಂಪ್ರದಾಯದಂತೆ ಇಂದು ಮದುವೆ ಆದ ದೀಪಿಕಾ-ರಣ್ವೀರ್
ಆನಂದ್ ಕಾರಂಜ್ ಸಂಪ್ರದಾಯ ಎಂದು ಕರೆಯುವ ಇದರಲ್ಲಿ ಗುರು ಗ್ರಂಥ ಸಾಹೀಬ್ ನ್ನು ಗುರುದ್ವಾರ ಹೊರತುಪಡಿಸಿ ಬೇರೆಲ್ಲೂ ಕೊಂಡೊಯ್ದು ಆಚರಿಸುವಂತಿಲ್ಲ ಎಂದು ಸಿಖ್ಖರ ಪರಮೋಚ್ಚ ಧರ್ಮಪೀಠ ಅಕಾಲ್ ತಖ್ತ್ ಹೇಳುತ್ತದೆ. ಅಕಾಲ್ ತಖ್ತ್ ನಿಯಮಗಳನ್ನು ಉಲ್ಲಂಘಿಸಿ ದೀಪಿಕಾ ಮತ್ತು ರಣವೀರ್ ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿರುವುದು ಸಿಖ್ ಧಾರ್ಮಿಕ ನಾಯಕರ ಕೋಪಕ್ಕೆ ಕಾರಣವಾಗಿದೆ.
ಚಿತ್ರಪಟ: ದೀಪಿಕಾ ಪಡುಕೋಣೆ-ರಣ್ವೀರ್ ಸಿಂಗ್ ಕೊಂಕಣಿ ವಿವಾಹ
ಹೀಗಾಗಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಖ್ ಮುಖಂಡರು ಒತ್ತಾಯಿಸಿದ್ದಾರೆ. ದೀಪಿಕಾ ಪಡುಕೋಣೆ ಕೊಂಕಣಿ ಸಮುದಾಯದವರಾಗಿದ್ದು, ರಣ್ವೀರ್ ಸಿಂಗ್ ಸಿಖ್ ಸಮುದಾಯಕ್ಕೆ ಸೇರಿದ್ದಾರೆ.
ದೀಪ್ವೀರ್ ಮದುವೆ: ಪ್ಲೇನ್ ಮೂಲಕ ಗ್ರ್ಯಾಂಡ್ ಎಂಟ್ರಿಕೊಟ್ಟ ವರ ರಣ್ವೀರ್
ಇಟಲಿಯಲ್ಲಿ ಮದುವೆ ಆದ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ನವೆಂಬರ್ 18 ರಂದು ಭಾರತಕ್ಕೆ ಬಂದರು. ನವೆಂಬರ್ 21 ರಂದು ಬೆಂಗಳೂರಿನಲ್ಲಿ ಆರತಕ್ಷತೆ ನಡೆಯಲಿದ್ದು, ನವೆಂಬರ್ 28 ರಂದು ಮುಂಬೈನಲ್ಲಿ ಆರತಕ್ಷತೆ ನಡೆಯಲಿದೆ.