Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬ್ರೇಕಿಂಗ್: ಶ್ರೀದೇವಿ ಸಾವಿನ ಹಿಂದೆ ದಾವೂದ್ ಇಬ್ರಾಹಿಂ ಕೈವಾಡ.!
Recommended Video
ಬಾಲಿವುಡ್ ಎವರ್ ಗ್ರೀನ್ ನಟಿ ಶ್ರೀದೇವಿ ಸಾವಿನ ರಹಸ್ಯ ದಿನದಿಂದ ದಿನಕ್ಕೆ ಬೇರೆ ಬೇರೆ ರೂಪ ಪಡೆದುಕೊಳ್ಳುತ್ತಿದೆ. ಕುಟುಂಬದವರೇ ಶ್ರೀದೇವಿ ಸಾವಿನ ಪ್ರಕರಣವನ್ನ ಕೈಬಿಟ್ಟಿದ್ದರೂ, ಕೆಲವರು ಈ ನಿಗೂಢ ಸಾವನ್ನ ಭೇದಿಸಲು ಹೊರಟಿದ್ದಾರೆ ತನಿಖೆಯ ಮಧ್ಯೆ ಸ್ಫೋಟಕ ಮಾಹಿತಿಗಳನ್ನ ಹೊರಹಾಕುತ್ತಿರುವುದು ತೀರಾ ಕುತೂಹಲ ಮೂಡಿಸಿದೆ.
ಫೆಬ್ರವರಿ 24 ರಂದು ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕಾಗಿ ದುಬೈಗೆ ತೆರೆಳಿದ್ದ ಶ್ರೀದೇವಿ ಖಾಸಗಿ ಹೋಟೆಲ್ ನಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದರು. ಆಕಸ್ಮಿಕವಾಗಿ ಬಾತ್ ಟಬ್ ನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದರು.
ಶ್ರೀದೇವಿ ಸಾವಿಗೆ ಟ್ವಿಸ್ಟ್: ಪ್ಯ್ಲಾನ್ ಮಾಡಿ ಕೊಲ್ಲಲಾಗಿದೆಯಂತೆ.!
ತನಿಖೆ ನಡೆಸಿದ್ದ ದುಬೈ ಪೊಲೀಸರು ಇದು ಆಕಸ್ಮಿಕ ಸಾವು ಎಂದು ಪ್ರಕರಣ ಕ್ಲೋಸ್ ಮಾಡಿದ್ದರು. ನಂತರ ಶ್ರೀದೇವಿ ಪಾರ್ಥೀವ ಶರೀರವನ್ನ ಭಾರತಕ್ಕೆ ತಂದು ಸಂಪ್ರದಾಯವಾಗಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಈ ನಡುವೆ ಶ್ರೀದೇವಿ ಸಾವಿನ ಬಗ್ಗೆ ಅನುಮಾನಗಳು ಕಾಡುತ್ತಿದ್ದು, ಖಾಸಗಿ ತನಿಖಾಧಿಕಾರಿಯೊಬ್ಬರು ದುಬೈನಲ್ಲಿ ತನಿಖೆ ಮಾಡುತ್ತಿದ್ದು, ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.
ಶ್ರೀದೇವಿ ಸಾವಿನ ಹಿಂದೆ ದಾವೂದ್.!
ಲೆಜೆಂಡ್ ನಟಿ ಶ್ರೀದೇವಿ ಸಾವಿನ ಹಿಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೈವಾಡ ಇದೆ ಎಂಬ ಅನುಮಾನವನ್ನ ಖಾಸಗಿ ತನಿಖಾಧಿಕಾರಿ ವೇದ್ ಭೂಷಣ್ ಬಹಿರಂಗಪಡಿಸಿದ್ದಾರೆ. ದುಬೈನಲ್ಲಿ ಶ್ರೀದೇವಿ ತಂಗಿದ್ದ ಹೋಟೆಲ್ ಮಾಲೀಕತ್ವದಲ್ಲಿ ದಾವೂದ್ ಪಾಲಿದೆ ಎಂಬ ಅಂಶವನ್ನ ದೆಹಲಿಯ ಮಾಜಿ ಎಸಿಪಿ ತಿಳಿಸಿದ್ದಾರೆ.
ಶ್ರೀದೇವಿ ಸಾವಿನ ಪ್ರಕರಣಕ್ಕೆ ಮರುಜೀವ: ಸುಪ್ರೀಂ ಅಂಗಳದಲ್ಲಿ ಡೆತ್ ಮಿಸ್ಟರಿ.!
ದಾವೂದ್ ಗೂ ಶ್ರೀದೇವಿಗೂ ಏನ್ ಸಂಬಂಧ.?
ಬಾಲಿವುಡ್ ನ ಅನೇಕ ನಟ-ನಟಿಯರ ಜೊತೆ ದಾವೂದ್ ಇಬ್ರಾಹಿಂ ಸಂಬಂಧ ಹೊಂದಿದ್ದಾರೆ ಎಂಬುದು ಮುಚ್ಚಿಡುವಂತಿಲ್ಲ. ಬಾಲಿವುಡ್ ಕಲಾವಿದರಿಂದ ದಾವೂದ್ ಹಫ್ತಾ ವಸೂಲಿ ಮಾಡ್ತಿದ್ದರು ಎಂಬ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ಹೀಗಿರುವಾಗ, ಶ್ರೀದೇವಿ ಮತ್ತು ದಾವೂದ್ ಮಧ್ಯೆ ಯಾವ ರೀತಿಯ ಸಂಬಂಧ ಇತ್ತು ಎಂಬ ಅನುಮಾನ ಈಗ ಕಾಡುತ್ತಿದೆ.
'ದಾವೂದ್' ವಿರುದ್ಧ ಸಿಡಿದೆದ್ದ ನಟಿ ಶ್ರುತಿ ಹಾಸನ್
ಶ್ರೀದೇವಿ ಹೆಸರಿನಲ್ಲಿ 240 ಕೋಟಿ ವಿಮೆ
ಶ್ರೀದೇವಿ ಸಾವಿನ ಬಗ್ಗೆ ಅನುಮಾನ ಹೆಚ್ಚಾಗಲು ಕಾರಣ ಅವರ ಹೆಸರಿನಲ್ಲಿದ್ದ ಜೀವ ವಿಮೆಯ ಹಣ ಎಂಬುದು ಬಲವಾದ ನಂಬಿಕೆ. ಶ್ರೀದೇವಿ ಹೆಸರಿನಲ್ಲಿ ಸುಮಾರು 240 ಕೋಟಿ ವಿಮೆ ಹಣ ಇತ್ತು. ಅವರ ಸಾವಿನ ಬಳಿಕವೇ ಅದು ಕುಟುಂಬದವರು ಕೈ ಸೇರುತ್ತಿತ್ತು. ಈ ಉದ್ದೇಶದಿಂದ ಯಾರಾದರೂ ಕೊಲೆ ಮಾಡಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ದುಬೈನಲ್ಲಿ ತನಿಖೆ ಮಾಡುತ್ತಿರುವ ಭೂಷಣ್
ಇನ್ನು ಶ್ರೀದೇವಿ ಸಾವಿನ ಬಗ್ಗೆ ಇಷ್ಟೆಲ್ಲ ಅನುಮಾನ ವ್ಯಕ್ತಪಡಿಸಿರುವ ದೆಹಲಿ ಮಾಜಿ ಎಸಿಪಿ, ಖಾಸಗಿ ತನಿಖಾಧಿಕಾರಿ ವೇದ್ ಭೂಷಣ್, ಈಗಾಗಲೇ ದುಬೈನಲ್ಲಿ ತನಿಖೆ ಮಾಡುತ್ತಿದ್ದಾರಂತೆ. ಶ್ರೀದೇವಿ ತಂಗಿದ್ದ ರೂಂ ಪಕ್ಕದಲ್ಲೇ ರೂಂ ಬುಕ್ ಮಾಡಿ ಮಾಹಿತಿ ಕಲೆ ಹಾಕುತ್ತಿದ್ದಾರಂತೆ. ಕೆಲವು ಪ್ರಾಥಮಿಕ ಅಂಶಗಳ ಬಗ್ಗೆ ತನಿಖೆ ನಡೆಸಿ, ಸುಪ್ರೀಂ ಕೋರ್ಟ್ ಗೆ ದೂರು ನೀಡಲಿದ್ದಾರಂತೆ.
'ಬಾಹುಬಲಿ' ಚಿತ್ರವನ್ನ ಕೈಬಿಟ್ಟ ಶ್ರೀದೇವಿಯ ಅಸಲಿ ಕಾರಣ ಬಿಚ್ಚಿಟ್ಟ ವರ್ಮಾ
ಯಾರು ಈ ವೇದ್ ಭೂಷಣ್.?
ಅಂದ್ಹಾಗೆ, ಮಾಜಿ ಎಸಿಪಿ ವೇದ್ ಭೂಷಣ್ ಅವರು ಈಗ ಖಾಸಗಿಯಾಗಿ ತನಿಖೆ ಸಂಸ್ಥೆಯನ್ನ ನಡೆಸುತ್ತಿದ್ದಾರೆ. ದುಬೈ ಪೊಲೀಸರು ನೀಡಿರುವ ಮರಣೋತ್ತರ ಪರೀಕ್ಷೆಯ ವರದಿ ಬಗ್ಗೆ ನನಗೆ ಅನುಮಾನವಿದೆ. ಬಾತ್ ಟಾಬ್ ನಲ್ಲಿ ಬಲವಂತವಾಗಿ ಮುಳುಗಿಸಿ ಸಾಯಿಸಬಹುದು. ನಂತರ ಸಹಜವಾಗಿ ಬಿದ್ದರು ಎಂದು ತಪ್ಪಿಸಿಕೊಳ್ಳಬಹುದು. ಶ್ರೀದೇವಿ ಅವರ ವಿಚಾರದಲ್ಲೂ ಅಷ್ಟೇ. ಅವರು ದುರದೃಷ್ಟವಶಾತ್ ಸಾಯಲಿಲ್ಲ. ಯಾರೋ ಪ್ಲ್ಯಾನ್ ಮಾಡಿ ಕೊಂದಿದ್ದಾರೆ'' ಎಂದಿದ್ದರು. ಈಗ ತನಿಖೆ ಕೂಡ ಆರಂಭಿಸಿದ್ದಾರೆ.