Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೆ ಎನ್ ಯು ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ದೀಪಿಕಾ ಪಡುಕೋಣೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ದೆಹಲಿ ಜೆ ಎನ್ ಯುಗೆ (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ರಾತ್ರಿ 7.30ರ ಸಮಯಕ್ಕೆ ಜೆ ಎನ್ ಯು ಕ್ಯಾಂಪಸ್ ಒಳಗೆ ಪ್ರವೇಶಿಸಿದ ನಟಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಪ್ರತಿಭಟನೆಯಲ್ಲಿ
ಭಾಗಿಯಾಗಿದ್ದ
ದೀಪಿಕಾ
ಪಡುಕೋಣೆ
ಭಾಷಣ
ಮಾಡಿಲ್ಲ.
ಘಟನೆ
ಕುರಿತು
ಏನೂ
ಮಾತನಾಡಿಲ್ಲ.
15
ನಿಮಿಷ
ಅಲ್ಲೇ
ಇದ್ದ
ದೀಪಿಕಾ
ಇಬ್ಬರು
ವಿದ್ಯಾರ್ಥಿಗಳು
ಮಾತನಾಡಿದ
ಬಳಿಕ
ಅಲ್ಲಿಂದ
ತೆರಳಿದರು.
ಈ
ವೇಳೆ
ಜೆ
ಎನ್
ಯು
ವಿದ್ಯಾರ್ಥಿ
ಸಂಘದ
ಅಧ್ಯಕ್ಷೆ
ಐಶೆ
ಘೋಷ್
ಇದ್ದರು.
ಜೆಎನ್ಯು ಹಿಂಸಾಚಾರ: ಭಯದಲ್ಲಿ ಕ್ಯಾಂಪಸ್ ತೊರೆದ ವಿದ್ಯಾರ್ಥಿನಿಯರು
ದೀಪಿಕಾ ಪಡುಕೋಣೆ ಅವರು ಆಪ್ತರು ತಿಳಿಸಿರುವ ಪ್ರಕಾರ, ದೀಪಿಕಾ ವಿದ್ಯಾರ್ಥಿಗಳ ಜೊತೆ ಒಗ್ಗಟ್ಟು ಪ್ರದರ್ಶಿಸಲು ಜೆ ಎನ್ ಯುಗೆ ಹೋಗಿದ್ದರು ಎಂದು ಹೇಳಲಾಗಿದೆ.
ಇತ್ತೀಚಿಗಷ್ಟೆ ಜೆ ಎನ್ ಯು ಕ್ಯಾಂಪಸ್ ನಲ್ಲಿ ಮುಸುಕುದಾರಿಗಳು ವಿದ್ಯಾರ್ಥಿ ಹಾಗು ಶಿಕ್ಷಕರ ಮೇಲೆ ದಾಳಿ ಮಾಡಿದ್ದರು. ಈ ಘಟನೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಕೂಡ ಹಲ್ಲೆಗೆ ಒಳಗಾಗಿದ್ದರು. ಈ ಘಟನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿತ್ತು. ವಿದ್ಯಾರ್ಥಿಗಳ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕೆಂದು ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ.
ಬಿಜೆಪಿಯೇ ಹಿಂದೆ ನಿಂತು ಜೆಎನ್ ಯುನಲ್ಲಿ ಹಿಂಸಾಚಾರ ಮಾಡಿಸಿತಾ?
ಇನ್ನು ದೀಪಿಕಾ ಪಡುಕೋಣೆ ಅವರು ಜೆ ಎನ್ ಯು ಕ್ಯಾಂಪಸ್ ಗೆ ಭೇಟಿ ನೀಡಿದ ಕಾರಣ, ಆಕೆಯ ಚಿತ್ರಗಳನ್ನು ನಿಷೇದ ಮಾಡಿ ಎಂದು ಕೆಲವರು ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನವರಿ 10 ರಂದು ದೀಪಿಕಾ ಪಡುಕೋಣೆ ಅಭಿನಯದ ಚಪಾಕ್ ಸಿನಿಮಾ ಬಿಡುಗಡೆಯಾಗುತ್ತಿದೆ. ಆಸಿಡ್ ದಾಳಿಗೆ ಒಳಗಾಗಿದ್ದ ಲಕ್ಷ್ಮಿ ಅಗರ್ ವಾಲ್ ಅವರ ಜೀವನ ಆಧಾರಿತ ಚಿತ್ರದಲ್ಲಿ ದೀಪಿಕಾ ನಟಿಸಿದ್ದಾರೆ. ಮೇಘನಾ ಗುಲ್ಜಾರ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ.