Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿನಿಮಾ ಬಗ್ಗೆ ಸ್ಪಷ್ಟನೆ ಕೇಳಿದ ದೆಹಲಿ ನ್ಯಾಯಾಲಯ
ತನ್ನ ಮಗನ ಜೀವನ ಆಧರಿತ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಸುಶಾಂತ್ ತಂದೆ ಕೆಕೆ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು (ಜೂನ್ 23) ನಡೆಯಿತು. ಸಿನಿಮಾ ರಿಲೀಸ್ ಆಗಿದ್ಯಾ ಅಥವಾ ಆಗಿಲ್ವಾ ಎಂದು ಮೊದಲು ಸ್ಪಷ್ಟನೆ ಕೊಡಿ ಎಂದು ಕೇಳಿರುವ ದೆಹಲಿ ಹೈ ಕೋರ್ಟ್, ಈ ಪ್ರಕರಣವನ್ನು ಜೂನ್ 25ಕ್ಕೆ ಮುಂದೂಡಿದೆ.
ಸುಶಾಂತ್ ಸಿನಿಮಾ ವಿಚಾರದಲ್ಲಿ ಏಕ ಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಸುಶಾಂತ್ ತಂದೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಒಳಗೊಂಡ ಪೀಠ ಮತ್ತೆ ವಿಚಾರಣೆ ಮಾಡಿದೆ.
'ಆ ನಿರ್ದೇಶಕನ ಜೊತೆ ಫಿಲಂ ಮಾಡಬೇಕಿತ್ತು': ನೆರವೇರದ ಸುಶಾಂತ್ ಆಸೆ
ಸುಶಾಂತ್ ಸಿಂಗ್ ತಂದೆ ಪರವಾಗಿ ಹಿರಿಯ ವಕೀಲರಾದ ಹರೀಶ್ ಸಾಲ್ವೆ ಮತ್ತು ಜಯಂತ್ ಕೆ ಮೆಹ್ತಾ ಮೇಲ್ಮನವಿ ಸಲ್ಲಿಸಿದ್ದರು. ಸಿನಿಮಾ ರಿಲೀಸ್ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ವಕೀಲರು ''ಸಿನಿಮಾ ಇನ್ನು ಬಿಡುಗಡೆಯಾಗಿಲ್ಲ'' ಎಂದು ತಿಳಿಸಿದರು.
ಆದರೆ, ಜೂನ್ 11 ರಂದು ಓವರ್ ದಿ ಟಾಪ್ (ಒಟಿಟಿ) ಪ್ಲಾಟ್ಫಾರ್ಮ್ನಲ್ಲಿ ಸಿನಿಮಾ ಬಿಡುಗಡೆಯಾಗಿದೆ ಎಂದು ಪ್ರತಿವಾದಿಗಳ ಪರ ಹಾಜರಾದ ವಕೀಲ ಚಂದರ್ ಲಾಲ್ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ.
ಈ ಹಿಂದೆ ಕೆಕೆ ಸಿಂಗ್ ತನ್ನ ಮಗನ ಹೆಸರಿನಲ್ಲಿ ಹಾಗೂ ಆತನಿಗೆ ಸಂಬಂಧಿತ ವಿಷಯವನ್ನು ಸಿನಿಮಾ ಮಾಡಲು ಅವಕಾಶ ಕೊಡಬಾರದು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಏಕ ಸದಸ್ಯ ಪೀಠ ಈ ಅರ್ಜಿ ವಜಾ ಮಾಡಿತ್ತು. ಬಳಿಕ, ಸುಶಾಂತ್ ತಂದೆ ಮೇಲ್ಮನವಿ ಸಲ್ಲಿಸಿದ್ದಾರೆ.
Recommended Video
'ನ್ಯಾಯ್: ದಿ ಜಸ್ಟೀಸ್' ಎಂಬ ಸಿನಿಮಾ ತಯಾರಾಗಿದ್ದು, ಇದು ಸುಶಾಂತ್ ಜೀವನದ ಕುರಿತಾದ ಸಿನಿಮಾ ಎಂದು ಕೆಕೆ ಸಿಂಗ್ ಆರೋಪಿಸಿದ್ದರು.