Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿನಿಮಾ ಬಗ್ಗೆ ಸ್ಪಷ್ಟನೆ ಕೇಳಿದ ದೆಹಲಿ ನ್ಯಾಯಾಲಯ
ತನ್ನ ಮಗನ ಜೀವನ ಆಧರಿತ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಸುಶಾಂತ್ ತಂದೆ ಕೆಕೆ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು (ಜೂನ್ 23) ನಡೆಯಿತು. ಸಿನಿಮಾ ರಿಲೀಸ್ ಆಗಿದ್ಯಾ ಅಥವಾ ಆಗಿಲ್ವಾ ಎಂದು ಮೊದಲು ಸ್ಪಷ್ಟನೆ ಕೊಡಿ ಎಂದು ಕೇಳಿರುವ ದೆಹಲಿ ಹೈ ಕೋರ್ಟ್, ಈ ಪ್ರಕರಣವನ್ನು ಜೂನ್ 25ಕ್ಕೆ ಮುಂದೂಡಿದೆ.
ಸುಶಾಂತ್ ಸಿನಿಮಾ ವಿಚಾರದಲ್ಲಿ ಏಕ ಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಸುಶಾಂತ್ ತಂದೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಒಳಗೊಂಡ ಪೀಠ ಮತ್ತೆ ವಿಚಾರಣೆ ಮಾಡಿದೆ.
'ಆ ನಿರ್ದೇಶಕನ ಜೊತೆ ಫಿಲಂ ಮಾಡಬೇಕಿತ್ತು': ನೆರವೇರದ ಸುಶಾಂತ್ ಆಸೆ
ಸುಶಾಂತ್ ಸಿಂಗ್ ತಂದೆ ಪರವಾಗಿ ಹಿರಿಯ ವಕೀಲರಾದ ಹರೀಶ್ ಸಾಲ್ವೆ ಮತ್ತು ಜಯಂತ್ ಕೆ ಮೆಹ್ತಾ ಮೇಲ್ಮನವಿ ಸಲ್ಲಿಸಿದ್ದರು. ಸಿನಿಮಾ ರಿಲೀಸ್ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ವಕೀಲರು ''ಸಿನಿಮಾ ಇನ್ನು ಬಿಡುಗಡೆಯಾಗಿಲ್ಲ'' ಎಂದು ತಿಳಿಸಿದರು.
ಆದರೆ, ಜೂನ್ 11 ರಂದು ಓವರ್ ದಿ ಟಾಪ್ (ಒಟಿಟಿ) ಪ್ಲಾಟ್ಫಾರ್ಮ್ನಲ್ಲಿ ಸಿನಿಮಾ ಬಿಡುಗಡೆಯಾಗಿದೆ ಎಂದು ಪ್ರತಿವಾದಿಗಳ ಪರ ಹಾಜರಾದ ವಕೀಲ ಚಂದರ್ ಲಾಲ್ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ.
ಈ ಹಿಂದೆ ಕೆಕೆ ಸಿಂಗ್ ತನ್ನ ಮಗನ ಹೆಸರಿನಲ್ಲಿ ಹಾಗೂ ಆತನಿಗೆ ಸಂಬಂಧಿತ ವಿಷಯವನ್ನು ಸಿನಿಮಾ ಮಾಡಲು ಅವಕಾಶ ಕೊಡಬಾರದು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಏಕ ಸದಸ್ಯ ಪೀಠ ಈ ಅರ್ಜಿ ವಜಾ ಮಾಡಿತ್ತು. ಬಳಿಕ, ಸುಶಾಂತ್ ತಂದೆ ಮೇಲ್ಮನವಿ ಸಲ್ಲಿಸಿದ್ದಾರೆ.
Recommended Video
'ನ್ಯಾಯ್: ದಿ ಜಸ್ಟೀಸ್' ಎಂಬ ಸಿನಿಮಾ ತಯಾರಾಗಿದ್ದು, ಇದು ಸುಶಾಂತ್ ಜೀವನದ ಕುರಿತಾದ ಸಿನಿಮಾ ಎಂದು ಕೆಕೆ ಸಿಂಗ್ ಆರೋಪಿಸಿದ್ದರು.