Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣದಲ್ಲಿ ದೀಪಿಕಾ, ಸಾರಾ, ಶ್ರದ್ಧ ಕಪೂರ್ಗೆ ಕ್ಲೀನ್ ಚಿಟ್?
ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟಿಯರ ಹೆಸರು ತಳುಕು ಹಾಕಿಕೊಂಡಿದೆ. ಈಗಾಗಲೇ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧ ಕಪೂರ್ ಸೇರಿದಂತೆ ಹಲವರು ನಟಿಯರಿಗೆ ನೋಟಿಸ್ ನೀಡಿ ವಿಚಾರಣೆ ಸಹ ಮಾಡಲಾಗಿದೆ.
ಎನ್ಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದ ನಟಿಯರಿಗೆ ಡ್ರಗ್ಸ್ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ ಎಂಬ ವಿಷಯ ಚರ್ಚೆಯಾಗುತ್ತಿದೆ. ನಟಿಯರ ವಿಚಾರದಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ, ಹಾಗು ನಟಿಯರು ಸಿಗರೇಟ್ ಸಹ ಸೇವಿಸಿಲ್ಲ ಎಂಬ ಅಚ್ಚರಿ ಹೇಳಿಕೆಗಳು ಇದಕ್ಕೆ ಪೂರಕವಾಗಿದೆ. ಆದ್ರೆ, ಎನ್ಸಿಬಿ ಅಧಿಕಾರಿಗಳು ತನಿಖೆಯಲ್ಲಿ ಬಹಿರಂಗವಾಗಿರುವ ವಿಚಾರಗಳೇ ಬೇರೆ ಇದೆ. ಮುಂದೆ ಓದಿ....
ನಟಿಯರ ಮೊಬೈಲ್ ಎನ್ಸಿಬಿ ಕೈಯಲ್ಲಿ, ಹೆಚ್ಚಾದ ಆತಂಕ
ಡ್ರಗ್ಸ್ ಚಾಟ್ ಕಥೆ ಏನು?
ದೀಪಿಕಾ ಪಡುಕೋಣೆ ಮತ್ತು ಮ್ಯಾನೇಜರ್ ಕರೀಶ್ಮಾ ಪ್ರಕಾಶ್ ಅವರ ನಡುವಿನ ಡ್ರಗ್ಸ್ ಚಾಟ್ ಕುರಿತಂತೆ ಸ್ಪಷ್ಟನೆ ನೀಡಿರುವ ಇಬ್ಬರು, ಸಿಗರೇಟ್ ಬದಲು ವೀಡ್, ಮಾಲ್, ಹ್ಯಾಶ್ ಎಂಬ ಪದಗಳನ್ನು ಬಳಸುತ್ತಿದ್ದೆವು ಎಂದು ಹೇಳಿದ್ದಾರೆ ಎನ್ನಲಾಗಿದೆ. ಕಡಿಮೆ ಗುಣಮಟ್ಟದ ಸಿಗರೆಟ್ಗೆ ಮಾಲ್, ಉತ್ತಮ ಗುಣಮಟ್ಟದ ಸಿಗರೇಟ್ಗೆ ಹ್ಯಾಶ್ ಮತ್ತು ದಪ್ಪ ಸಿಗರೇಟ್ಗೆ ಡೂಬ್ ಎಂದು ಕರೆಯುತ್ತಿದ್ದವು. ಇದೆಲ್ಲವೂ ತಮಾಷೆಗಾಗಿ ಚಾಟ್ ಮಾಡುತ್ತಿದ್ದೆವು ಎಂದು ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಪ್ರತ್ಯೇಕವಾಗಿ ವಿಚಾರಣೆ
ದೀಪಿಕಾ ಪಡುಕೋಣೆ ಮತ್ತು ಕರೀಶ್ಮಾ ಪ್ರಕಾಶ್ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಇಬ್ಬರು ಬೇರೆ ಬೇರೆಯಾಗಿ ವಿಚಾರಣೆ ಎದುರಿಸಿದರೂ ಉತ್ತರ ಒಂದೇ ರೀತಿ ನೀಡಿದ್ದಾರೆ ಎನ್ನಲಾಗಿದೆ. ಆದ್ರೆ, ದೀಪಿಕಾ ವಾಟ್ಸಾಪ್ ಚಾಟ್ನ್ನು ಗಂಭೀರವಾಗಿ ಪರಿಗಣಿಸಿರುವ ಎನ್ಸಿಬಿ ಮತ್ತಷ್ಟು ಮಂದಿಗೆ ನೋಟಿಸ್ ನೀಡುವ ತಯಾರಿಲ್ಲಿದೆಯಂತೆ.
ಡ್ರಗ್ಸ್ ಪ್ರಕರಣ: NCB ವಿಚಾರಣೆಯಲ್ಲಿ ದೀಪಿಕಾ, ಶ್ರದ್ಧಾ, ಸಾರಾ ಹೇಳಿದ್ದೇನು?
ಸುಶಾಂತ್ ಸಾವಿನ ಬಗ್ಗೆ ಮಾಹಿತಿ ಇಲ್ಲ
ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಹಾಗು ಡ್ರಗ್ಸ್ ಸೇವಿಸುತ್ತಿದ್ದಾರಾ ಎನ್ನುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ನಟಿಯರು, ಆ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ನಿರಾಕರಿಸಿದ್ದಾರಂತೆ. ರಿಯಾ ಚಕ್ರವರ್ತಿ ಬಂಧನ ಆಗಿದೆ. ರಿಯಾ ಹೇಳಿಕೆಯ ನಂತರವೇ ಈ ನಟಿಯರಿಗೆ ನೋಟಿಸ್ ನೀಡಲಾಗಿದೆ ಎನ್ನುವುದು ಗಮನಿಸಬೇಕು.
Recommended Video
ಮತ್ತೊಮ್ಮೆ ವಿಚಾರಣೆ ಕರೆಯಬಹುದು
ಡ್ರಗ್ಸ್ ಪ್ರಕರಣದಲ್ಲಿ ದೀಪಿಕಾ, ಸಾರಾ, ಶ್ರದ್ಧಾ ಹಾಗೂ ರಕುಲ್ ವಿಚಾರಣೆ ಒಂದು ಹಂತದಲ್ಲಿ ಮುಗಿದಿದೆ. ಸದ್ಯಕ್ಕೆ ಅವರ ಮೊಬೈಲ್ ಹಾಗೂ ವಾಟ್ಸಾಪ್ ಚಾಟ್ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಅದರ ಮೇಲೆ ತನಿಖೆ ಮಾಡಲಾಗುತ್ತಿದೆ. ಸದ್ಯಕ್ಕೆ ನಟಿಯರಿಗೆ ರಿಲೀಫ್ ಸಿಕ್ಕಿದೆ, ಆದ್ರೆ, ಇನ್ನೊಂದು ಹಂತದಲ್ಲಿ ವಿಚಾರಣೆಗೆ ಕರೆದರೂ ಅಚ್ಚರಿ ಇಲ್ಲ.