Just In
Don't Miss!
- Finance
ಸೆನ್ಸೆಕ್ಸ್ 400 ಪಾಯಿಂಟ್ಸ್ ಜಿಗಿತ: ನಿಫ್ಟಿ 108 ಪಾಯಿಂಟ್ಸ್ ಏರಿಕೆ
- News
ಸಿಂಧಗಿ; ಉಪ ಚನಾವಣೆಗೆ ಮುನ್ನ ಆಪರೇಷನ್ ಜೆಡಿಎಸ್!
- Sports
ತೆಂಡೂಲ್ಕರ್, ಯುವರಾಜ್ಗೆ ತರಲೆ ಮಾಡಿದ ವೀರೇಂದ್ರ ಸೆಹ್ವಾಗ್: ವಿಡಿಯೋ
- Automobiles
ರಾಷ್ಟ್ರ ರಾಜಧಾನಿಯಲ್ಲಿ ಕುಸಿದ ರಸ್ತೆ ಅಪಘಾತಗಳ ಸಂಖ್ಯೆ
- Education
Bangalore University Recruitment 2021: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಬಿಯರ್ ಸೇವನೆ ಅರೋಗ್ಯಕರವೇ? ತಜ್ಞರು ಏನೆನ್ನುತ್ತಾರೆ ಗೊತ್ತಾ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶಾರುಖ್ ಖಾನ್ ಸಿನಿಮಾ ನಿರ್ದೇಶಕನಿಗೆ ಸೆಟ್ನಲ್ಲೇ ಕಪಾಳಮೋಕ್ಷ!
ಶಾರುಖ್ ಖಾನ್ ಅಭಿನಯದ ಬಿಗ್ ಬಜೆಟ್ ಸಿನಿಮಾ ನಿರ್ದೇಶಿಸುತ್ತಿರುವ ಹಿಟ್ ನಿರ್ದೇಶಕನಿಗೆ ಸೆಟ್ನಲ್ಲಿಯೇ ಸಹಾಯಕನೊಬ್ಬ ಕಪಾಳಕ್ಕೆ ಹೊಡೆದಿದ್ದಾನೆ.
ಶಾರುಖ್ ಖಾನ್ ಅಭಿನಯದ 'ಪಠಾಣ್' ಸಿನಿಮಾದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಗೆ ಸಹಾಯಕ ನಿರ್ದೇಶಕನೊಬ್ಬ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಬಾಲಿವುಡ್ ಹಂಗಾಮ ಹಾಗೂ ಇನ್ನೂ ಕೆಲವು ಬಾಲಿವುಡ್ ಪತ್ರಿಕೆಗಳು ವರದಿ ಮಾಡಿವೆ.
ಸಿದ್ಧಾರ್ಥ್ ಆನಂದ್ ತುಸು ಸಿಟ್ಟಿನ ವ್ಯಕ್ತಿಯಾಗಿದ್ದು, ಸೆಟ್ನಲ್ಲಿ ತಮ್ಮ ಸಹಾಯಕನೊಬ್ಬ ಸೂಕ್ತವಾಗಿ ಕೆಲಸ ಮಾಡಿಲ್ಲವೆಂಬ ಕಾರಣಕ್ಕೆ ಸಹಾಯಕನ ಕಪಾಳಕ್ಕೆ ಹೊಡೆದಿದ್ದದಾರೆ. ಕೂಡಲೇ ಸಿಟ್ಟಿಗೆದ್ದ ಸಹಾಯಕ ತಿರುಗಿಸಿ ಸಿದ್ಧಾರ್ಥ್ ಆನಂದ್ ರ ಕಪಾಳಕ್ಕೆ ಹೊಡೆದಿದ್ದಾನೆ.
ಘಟನೆ ನಡೆದಾಗ ಶಾರುಖ್ ಖಾನ್ ಸಹ ಸೆಟ್ ನಲ್ಲಿ ಇದ್ದರು ಎನ್ನಲಾಗುತ್ತಿದೆ. ಸೆಟ್ನಲ್ಲಿ ಎಲ್ಲರ ಮುಂದೆಯೇ ಘಟನೆ ನಡೆದಿದೆ.
ಸ್ಥಳದಲ್ಲಿದ್ದವರು ಹೇಳಿರುವಂತೆ ಸಹಾಯಕನು ಸೂಕ್ತವಾಗಿ ಕೆಲಸ ಮಾಡದೇ ಇದ್ದ ಕಾರಣ ಸಿದ್ಧಾರ್ಥ್ ಆತನನ್ನು ಹೊಡೆದರು. ಕೂಡಲೇ ಆ ಸಹಾಯಕ ತಿರುಗಿಬಿದ್ದು ಸಿದ್ಧಾರ್ಥ್ ಕಪಾಳಕ್ಕೆ ಭಾರಿಸಿದ. ಅಷ್ಟೇ ಅಲ್ಲದೆ ಜೋರು ಜೋರಾಗಿ ಎಲ್ಲರ ಮುಂದೆ ಅವಾಚ್ಯ ಶಬ್ದಗಳಿಂದ ಸಿದ್ಧಾರ್ಥ್ ಆನಂದ್ ಅನ್ನು ಬೈದನಂತೆ.
2005 ರಿಂದಲೂ ಬಾಲಿವುಡ್ ಸಿನಿಮಾಗಳ ನಿರ್ದೇಶನ ಮಾಡುತ್ತಿದ್ದಾರೆ ಸಿದ್ಧಾರ್ಥ್ ಆನಂದ್. ಸಲಾಂ ನಮಸ್ತೆ, ಬಚ್ನಾ ಹೇ ಹಸೀನೋ, ಅಂಜಾನಾ-ಅಂಜಾನಿ, ತಾ ರಾ ರಂ ಪಂ, ಹೃತಿಕ್ ನಟನೆಯ ಬ್ಯಾಂಗ್-ಬ್ಯಾಂಗ್, ವಾರ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಶಾರುಖ್ ನಟನೆಯ ಪಠಾಣ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ.