Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾರುಖ್ ಖಾನ್ ಸಿನಿಮಾ ನಿರ್ದೇಶಕನಿಗೆ ಸೆಟ್ನಲ್ಲೇ ಕಪಾಳಮೋಕ್ಷ!
ಶಾರುಖ್ ಖಾನ್ ಅಭಿನಯದ ಬಿಗ್ ಬಜೆಟ್ ಸಿನಿಮಾ ನಿರ್ದೇಶಿಸುತ್ತಿರುವ ಹಿಟ್ ನಿರ್ದೇಶಕನಿಗೆ ಸೆಟ್ನಲ್ಲಿಯೇ ಸಹಾಯಕನೊಬ್ಬ ಕಪಾಳಕ್ಕೆ ಹೊಡೆದಿದ್ದಾನೆ.
ಶಾರುಖ್ ಖಾನ್ ಅಭಿನಯದ 'ಪಠಾಣ್' ಸಿನಿಮಾದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಗೆ ಸಹಾಯಕ ನಿರ್ದೇಶಕನೊಬ್ಬ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಬಾಲಿವುಡ್ ಹಂಗಾಮ ಹಾಗೂ ಇನ್ನೂ ಕೆಲವು ಬಾಲಿವುಡ್ ಪತ್ರಿಕೆಗಳು ವರದಿ ಮಾಡಿವೆ.
ಸಿದ್ಧಾರ್ಥ್ ಆನಂದ್ ತುಸು ಸಿಟ್ಟಿನ ವ್ಯಕ್ತಿಯಾಗಿದ್ದು, ಸೆಟ್ನಲ್ಲಿ ತಮ್ಮ ಸಹಾಯಕನೊಬ್ಬ ಸೂಕ್ತವಾಗಿ ಕೆಲಸ ಮಾಡಿಲ್ಲವೆಂಬ ಕಾರಣಕ್ಕೆ ಸಹಾಯಕನ ಕಪಾಳಕ್ಕೆ ಹೊಡೆದಿದ್ದದಾರೆ. ಕೂಡಲೇ ಸಿಟ್ಟಿಗೆದ್ದ ಸಹಾಯಕ ತಿರುಗಿಸಿ ಸಿದ್ಧಾರ್ಥ್ ಆನಂದ್ ರ ಕಪಾಳಕ್ಕೆ ಹೊಡೆದಿದ್ದಾನೆ.
ಘಟನೆ ನಡೆದಾಗ ಶಾರುಖ್ ಖಾನ್ ಸಹ ಸೆಟ್ ನಲ್ಲಿ ಇದ್ದರು ಎನ್ನಲಾಗುತ್ತಿದೆ. ಸೆಟ್ನಲ್ಲಿ ಎಲ್ಲರ ಮುಂದೆಯೇ ಘಟನೆ ನಡೆದಿದೆ.
ಸ್ಥಳದಲ್ಲಿದ್ದವರು ಹೇಳಿರುವಂತೆ ಸಹಾಯಕನು ಸೂಕ್ತವಾಗಿ ಕೆಲಸ ಮಾಡದೇ ಇದ್ದ ಕಾರಣ ಸಿದ್ಧಾರ್ಥ್ ಆತನನ್ನು ಹೊಡೆದರು. ಕೂಡಲೇ ಆ ಸಹಾಯಕ ತಿರುಗಿಬಿದ್ದು ಸಿದ್ಧಾರ್ಥ್ ಕಪಾಳಕ್ಕೆ ಭಾರಿಸಿದ. ಅಷ್ಟೇ ಅಲ್ಲದೆ ಜೋರು ಜೋರಾಗಿ ಎಲ್ಲರ ಮುಂದೆ ಅವಾಚ್ಯ ಶಬ್ದಗಳಿಂದ ಸಿದ್ಧಾರ್ಥ್ ಆನಂದ್ ಅನ್ನು ಬೈದನಂತೆ.
Recommended Video
2005 ರಿಂದಲೂ ಬಾಲಿವುಡ್ ಸಿನಿಮಾಗಳ ನಿರ್ದೇಶನ ಮಾಡುತ್ತಿದ್ದಾರೆ ಸಿದ್ಧಾರ್ಥ್ ಆನಂದ್. ಸಲಾಂ ನಮಸ್ತೆ, ಬಚ್ನಾ ಹೇ ಹಸೀನೋ, ಅಂಜಾನಾ-ಅಂಜಾನಿ, ತಾ ರಾ ರಂ ಪಂ, ಹೃತಿಕ್ ನಟನೆಯ ಬ್ಯಾಂಗ್-ಬ್ಯಾಂಗ್, ವಾರ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಶಾರುಖ್ ನಟನೆಯ ಪಠಾಣ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ.