Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾರುಖ್ ಖಾನ್ ಸಿನಿಮಾ ನಿರ್ದೇಶಕನಿಗೆ ಸೆಟ್ನಲ್ಲೇ ಕಪಾಳಮೋಕ್ಷ!
ಶಾರುಖ್ ಖಾನ್ ಅಭಿನಯದ ಬಿಗ್ ಬಜೆಟ್ ಸಿನಿಮಾ ನಿರ್ದೇಶಿಸುತ್ತಿರುವ ಹಿಟ್ ನಿರ್ದೇಶಕನಿಗೆ ಸೆಟ್ನಲ್ಲಿಯೇ ಸಹಾಯಕನೊಬ್ಬ ಕಪಾಳಕ್ಕೆ ಹೊಡೆದಿದ್ದಾನೆ.
ಶಾರುಖ್ ಖಾನ್ ಅಭಿನಯದ 'ಪಠಾಣ್' ಸಿನಿಮಾದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಗೆ ಸಹಾಯಕ ನಿರ್ದೇಶಕನೊಬ್ಬ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಬಾಲಿವುಡ್ ಹಂಗಾಮ ಹಾಗೂ ಇನ್ನೂ ಕೆಲವು ಬಾಲಿವುಡ್ ಪತ್ರಿಕೆಗಳು ವರದಿ ಮಾಡಿವೆ.
ಸಿದ್ಧಾರ್ಥ್ ಆನಂದ್ ತುಸು ಸಿಟ್ಟಿನ ವ್ಯಕ್ತಿಯಾಗಿದ್ದು, ಸೆಟ್ನಲ್ಲಿ ತಮ್ಮ ಸಹಾಯಕನೊಬ್ಬ ಸೂಕ್ತವಾಗಿ ಕೆಲಸ ಮಾಡಿಲ್ಲವೆಂಬ ಕಾರಣಕ್ಕೆ ಸಹಾಯಕನ ಕಪಾಳಕ್ಕೆ ಹೊಡೆದಿದ್ದದಾರೆ. ಕೂಡಲೇ ಸಿಟ್ಟಿಗೆದ್ದ ಸಹಾಯಕ ತಿರುಗಿಸಿ ಸಿದ್ಧಾರ್ಥ್ ಆನಂದ್ ರ ಕಪಾಳಕ್ಕೆ ಹೊಡೆದಿದ್ದಾನೆ.
ಘಟನೆ ನಡೆದಾಗ ಶಾರುಖ್ ಖಾನ್ ಸಹ ಸೆಟ್ ನಲ್ಲಿ ಇದ್ದರು ಎನ್ನಲಾಗುತ್ತಿದೆ. ಸೆಟ್ನಲ್ಲಿ ಎಲ್ಲರ ಮುಂದೆಯೇ ಘಟನೆ ನಡೆದಿದೆ.
ಸ್ಥಳದಲ್ಲಿದ್ದವರು ಹೇಳಿರುವಂತೆ ಸಹಾಯಕನು ಸೂಕ್ತವಾಗಿ ಕೆಲಸ ಮಾಡದೇ ಇದ್ದ ಕಾರಣ ಸಿದ್ಧಾರ್ಥ್ ಆತನನ್ನು ಹೊಡೆದರು. ಕೂಡಲೇ ಆ ಸಹಾಯಕ ತಿರುಗಿಬಿದ್ದು ಸಿದ್ಧಾರ್ಥ್ ಕಪಾಳಕ್ಕೆ ಭಾರಿಸಿದ. ಅಷ್ಟೇ ಅಲ್ಲದೆ ಜೋರು ಜೋರಾಗಿ ಎಲ್ಲರ ಮುಂದೆ ಅವಾಚ್ಯ ಶಬ್ದಗಳಿಂದ ಸಿದ್ಧಾರ್ಥ್ ಆನಂದ್ ಅನ್ನು ಬೈದನಂತೆ.
Recommended Video
2005 ರಿಂದಲೂ ಬಾಲಿವುಡ್ ಸಿನಿಮಾಗಳ ನಿರ್ದೇಶನ ಮಾಡುತ್ತಿದ್ದಾರೆ ಸಿದ್ಧಾರ್ಥ್ ಆನಂದ್. ಸಲಾಂ ನಮಸ್ತೆ, ಬಚ್ನಾ ಹೇ ಹಸೀನೋ, ಅಂಜಾನಾ-ಅಂಜಾನಿ, ತಾ ರಾ ರಂ ಪಂ, ಹೃತಿಕ್ ನಟನೆಯ ಬ್ಯಾಂಗ್-ಬ್ಯಾಂಗ್, ವಾರ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಶಾರುಖ್ ನಟನೆಯ ಪಠಾಣ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ.