Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಕೇಸ್: ಹೋಟೆಲ್ ಉದ್ಯಮಿ ಗೌರವ್ ಆರ್ಯಗೆ ED ಇಲಾಖೆ ಸಮನ್ಸ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೋವಾ ಹೋಟೆಲ್ ಉದ್ಯಮಿ ಗೌರವ್ ಆರ್ಯಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
Recommended Video
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಆರೋಪವಿದ್ದು, ನಟಿ ರಿಯಾ ಚಕ್ರವರ್ತಿ ಸೇರಿದಂತೆ ಏಳು ಜನರ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಾಗಿದೆ. ಈ ಕೇಸ್ಗೆ ಸಂಬಂಧಿಸಿದಂತೆ ಗೌರವ್ ಆರ್ಯಗೆ ಇಡಿ ಇಲಾಖೆ ನೋಟಿಸ್ ಜಾರಿ ಮಾಡಿದೆ. ಅಷ್ಟಕ್ಕೂ, ಗೌರವ್ ಆರ್ಯಗೂ ಈ ಕೇಸ್ಗೂ ಏನು ಸಂಬಂಧ? ಮುಂದೆ ಓದಿ...
ಗೋವಾ ಹೋಟೆಲ್ ಉದ್ಯಮಿಗೆ ಇಡಿ ಸಮನ್ಸ್
ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂಬೈನ ಇಡಿ ಕಚೇರಿಗೆ ಭೇಟಿ ನೀಡಬೇಕು ಎಂದು ಜಾರಿ ನಿರ್ದೇಶನಾಲಯ ಗೋವಾದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಗೌರವ್ ಆರ್ಯಗೆ ಸಮನ್ಸ್ ನೀಡಿದೆ. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಿವರಣೆ ಪಡೆಯಲಿದ್ದಾರೆ.
ತಾಳ್ಮೆ ಕಳೆದುಕೊಂಡ ರಿಯಾ ಚಕ್ರವರ್ತಿ: ಕಾರಿನ ಗ್ಲಾಸ್ ಗೆ ಗುದ್ದಿ ಮಾಧ್ಯಮದ ವಿರುದ್ಧ ಆಕ್ರೋಶ
ಡ್ರಗ್ಸ್ ಪ್ರಕರಣದಲ್ಲೂ ಗೌರವ್ ಲಿಂಕ್ ಇದೆ
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಸಹ ಪ್ರಮುಖ ವಿಷಯವಾಗಿ ಚರ್ಚೆಯಾಗ್ತಿದೆ. ಡ್ರಗ್ಸ್ ಡೀಲರ್ಗಳ ಜೊತೆ ರಿಯಾ ಚಕ್ರವರ್ತಿ ಸಂಪರ್ಕ ಹೊಂದಿದ್ದರು. ಮತ್ತು ಸುಶಾಂತ್ಗೂ ಡ್ರಗ್ಸ್ ನೀಡುತ್ತಿದ್ದರು ಎಂಬ ಆರೋಪ ಇದೆ. ಡ್ರಗ್ಸ್ ಡೀಲರ್ ಜೊತೆ ರಿಯಾ ವಾಟ್ಸಾಪ್ ಸಂಭಾಷಣೆ ಬಹಿರಂಗವಾಗಿದೆ. ಈ ವೇಳೆ ಗೌರವ್ ಆರ್ಯ ಹೆಸರು ಸಹ ಚರ್ಚೆಯಾಗ್ತಿದೆ. ಈ ಹಿನ್ನೆಲೆಯಲ್ಲೂ ಗೌರವ್ ಈ ಕೇಸ್ಗೆ ಸಂಬಂಧಪಟ್ಟಿದ್ದಾರೆ.
ಸಮನ್ಸ್ ಬಗ್ಗೆ ಗೌರವ್ ಹೇಳಿದ್ದೇನು?
ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಇಲಾಖೆ ಸಮನ್ಸ್ ನೀಡಿರುವ ಬಗ್ಗೆ ಎಎನ್ಐಗೆ ಪ್ರತಿಕ್ರಿಯೆ ನೀಡಿರುವ ಗೌರವ್ ಆರ್ಯ ''ಈ ಪ್ರಕರಣದೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ. ನಾನು ಸುಶಾಂತ್ ಸಿಂಗ್ ರಜಪೂತ್ ಅವರನ್ನು ಭೇಟಿಯಾಗಲಿಲ್ಲ. ನಾನು ಅವಳನ್ನು (ರಿಯಾ) 2017 ರಲ್ಲಿ ಭೇಟಿಯಾಗಿದ್ದೆ'' ಎಂದು ತಿಳಿಸಿದ್ದಾರೆ.
ಸುಶಾಂತ್ ಶವದ ಮುಂದೆ ಕ್ಷಮೆ ಕೇಳಿ, ಪಾದ ಮುಟ್ಟಿ ನಮಸ್ಕರಿಸಿದ್ದೆ: ರಿಯಾ ಚಕ್ರವರ್ತಿ
ಎಫ್ ಐ ಆರ್ ದಾಖಲು
ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಕಾಯ್ದೆ, 1985ರ ಅಡಿಯಲ್ಲಿ ಗೌರವ್ ಆರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕೇಸ್ನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ತನಿಖೆ ನಡೆಸುತ್ತಿದೆ. ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 20, 22, 27 ಮತ್ತು 29ರ ಅಡಿಯಲ್ಲಿ ರಿಯಾ ಚಕ್ರವರ್ತಿ, ಸಹೋದರ ಶೋಯಿಕ್, ಜಯ ಸಹಾ, ರಜಪೂತ್ ಮಾಜಿ ವ್ಯವಸ್ಥಾಪಕ ಶ್ರುತಿ ಮೋದಿ ಮತ್ತು ಆರ್ಯ ವಿರುದ್ಧ ಬುಧವಾರ ಎಫ್ಐಆರ್ ದಾಖಲಿಸಿತ್ತು.