Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೆಹಲಿ ಪ್ರತಿಭಟನೆ: ಪ್ರಿಯಾಂಕಾ, ದಿಲ್ಜಿತ್ಗೆ ಕಂಗನಾ ಪ್ರಶ್ನೆ
ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಇಂದು ತೀವ್ರ ಸ್ವರೂಪಕ್ಕೆ ತಲುಪಿದೆ. ದೆಹಲಿಯ ಹೊರವಲಯದ ಬಿಡಾರ ಹೂಡಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ದೆಹಲಿಗೆ ನುಗ್ಗಿದ್ದಾರೆ. ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಭಾರತದ ಧ್ವಜದ ಪಕ್ಕ ಗುರುನಾನಕರ ಪೀತಾಂಭರ ಧ್ವಜ ಹಾರಿಸಿದ್ದಾರೆ.
ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿರುವುದು ದೇಶದಾದ್ಯಂತ ಭಾರಿ ಚರ್ಚೆ ಎಬ್ಬಿಸಿದ್ದು, ನಟಿ ಕಂಗನಾ ಸಹ ಈ ಬಗ್ಗೆ ಆಕ್ರೋಶದ ಟ್ವೀಟ್ ಮಾಡಿದ್ದಾರೆ.
ಪ್ರತಿಭಟನಾಕಾರರೊಬ್ಬರು ಧ್ವಜ ಹಾರಿಸುತ್ತಿರುವ ಚಿತ್ರ ಪ್ರಕಟಿಸಿರುವ ಕಂಗನಾ, ದಿಲ್ಜಿತ್ ದುಸ್ಸಾಂಜ್, ಪ್ರಿಯಾಂಕಾ ಚೋಪ್ರಾ ಇದರ ಬಗ್ಗೆ ವಿಶ್ಲೇಷಣೆ ಕೊಡಬೇಕು ಎಂದು ಕೇಳಿದ್ದಾರೆ.
'ಇಡೀಯ ವಿಶ್ವವೇ ನಮ್ಮನ್ನು (ಭಾರತ) ನೋಡಿ ನಗುತ್ತಿದೆ, ಇದೇ ಬೇಕಿತ್ತು ಅಲ್ಲವೇ ನಿಮಗೆ, ಧನ್ಯವಾದಗಳು' ಎಂದಿದ್ದಾರೆ ನಟಿ ಕಂಗನಾ.
ನಟ ದಿಲ್ಜೀತ್ ದುಸ್ಸಾಂಜ್ ಮತ್ತು ನಟಿ ಪ್ರಿಯಾಂಕಾ ಚೋಪ್ರಾ ಅವರುಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಪ್ರತಿಭಟನೆ ಕುರಿತಾಗಿ ನಟ ದಿಲ್ಜೀತ್ ದುಸ್ಸಾಂಜ್ ಹಾಗೂ ಕಂಗನಾ ರಣೌತ್ ನಡುವೆ ಟ್ವಿಟ್ಟರ್ ನಲ್ಲಿ ಜಗಳ ನಡೆದಿತ್ತು.
Recommended Video
ಕಂಗನಾ ಹಾಕಿರುವ ಚಿತ್ರಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕಂಗನಾ ರಣೌತ್ ಎಡಿಟ್ ಮಾಡಿರುವ ಚಿತ್ರ ಹಂಚಿಕೊಂಡಿದ್ದಾರೆ. ಭಾರತ ಧ್ವಜವನ್ನು ರೈತರು ಕೆಳಗೆ ಇಳಿಸಿಲ್ಲ ಎಂದು ಹಲವರು ಹೇಳಿದ್ದಾರೆ. ಸಾಕ್ಷ್ಯವೆಂಬಂತೆ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ.