Just In
Don't Miss!
- News
ಜಾರಕಿಹೊಳಿ ವಿರುದ್ದ ಕೇಸ್ ಏನೋ ವಾಪಸ್ ಪಡೆಯಲಾಯಿತು: ಆದರೆ..?
- Sports
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಲಾರ್ಡ್ಸ್ ಅಂಗಳದಿಂದ ಸ್ಥಳಾಂತರ ಸಂಭವ: ವರದಿ
- Finance
ಎಸ್ಬಿಐನಿಂದ ಚಿನ್ನದ ಮೇಲಿನ ಸಾಲ, ಬಡ್ಡಿದರ, ಆಫರ್ ಏನಿದೆ?
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದೆಹಲಿ ಪ್ರತಿಭಟನೆ: ಪ್ರಿಯಾಂಕಾ, ದಿಲ್ಜಿತ್ಗೆ ಕಂಗನಾ ಪ್ರಶ್ನೆ
ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಇಂದು ತೀವ್ರ ಸ್ವರೂಪಕ್ಕೆ ತಲುಪಿದೆ. ದೆಹಲಿಯ ಹೊರವಲಯದ ಬಿಡಾರ ಹೂಡಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ದೆಹಲಿಗೆ ನುಗ್ಗಿದ್ದಾರೆ. ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಭಾರತದ ಧ್ವಜದ ಪಕ್ಕ ಗುರುನಾನಕರ ಪೀತಾಂಭರ ಧ್ವಜ ಹಾರಿಸಿದ್ದಾರೆ.
ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿರುವುದು ದೇಶದಾದ್ಯಂತ ಭಾರಿ ಚರ್ಚೆ ಎಬ್ಬಿಸಿದ್ದು, ನಟಿ ಕಂಗನಾ ಸಹ ಈ ಬಗ್ಗೆ ಆಕ್ರೋಶದ ಟ್ವೀಟ್ ಮಾಡಿದ್ದಾರೆ.
ಪ್ರತಿಭಟನಾಕಾರರೊಬ್ಬರು ಧ್ವಜ ಹಾರಿಸುತ್ತಿರುವ ಚಿತ್ರ ಪ್ರಕಟಿಸಿರುವ ಕಂಗನಾ, ದಿಲ್ಜಿತ್ ದುಸ್ಸಾಂಜ್, ಪ್ರಿಯಾಂಕಾ ಚೋಪ್ರಾ ಇದರ ಬಗ್ಗೆ ವಿಶ್ಲೇಷಣೆ ಕೊಡಬೇಕು ಎಂದು ಕೇಳಿದ್ದಾರೆ.
'ಇಡೀಯ ವಿಶ್ವವೇ ನಮ್ಮನ್ನು (ಭಾರತ) ನೋಡಿ ನಗುತ್ತಿದೆ, ಇದೇ ಬೇಕಿತ್ತು ಅಲ್ಲವೇ ನಿಮಗೆ, ಧನ್ಯವಾದಗಳು' ಎಂದಿದ್ದಾರೆ ನಟಿ ಕಂಗನಾ.
ನಟ ದಿಲ್ಜೀತ್ ದುಸ್ಸಾಂಜ್ ಮತ್ತು ನಟಿ ಪ್ರಿಯಾಂಕಾ ಚೋಪ್ರಾ ಅವರುಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಪ್ರತಿಭಟನೆ ಕುರಿತಾಗಿ ನಟ ದಿಲ್ಜೀತ್ ದುಸ್ಸಾಂಜ್ ಹಾಗೂ ಕಂಗನಾ ರಣೌತ್ ನಡುವೆ ಟ್ವಿಟ್ಟರ್ ನಲ್ಲಿ ಜಗಳ ನಡೆದಿತ್ತು.
ಕಂಗನಾ ಹಾಕಿರುವ ಚಿತ್ರಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕಂಗನಾ ರಣೌತ್ ಎಡಿಟ್ ಮಾಡಿರುವ ಚಿತ್ರ ಹಂಚಿಕೊಂಡಿದ್ದಾರೆ. ಭಾರತ ಧ್ವಜವನ್ನು ರೈತರು ಕೆಳಗೆ ಇಳಿಸಿಲ್ಲ ಎಂದು ಹಲವರು ಹೇಳಿದ್ದಾರೆ. ಸಾಕ್ಷ್ಯವೆಂಬಂತೆ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ.