Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಪ್ರತಿಭಟನೆ: ಅಜಯ್ ದೇವಗನ್ ಕಾರು ಅಡ್ಡಗಟ್ಟಿದ ವ್ಯಕ್ತಿ ಬಂಧನ
ರೈತರ ಪ್ರತಿಭಟನೆ ಕುರಿತು ತಮ್ಮ ನಿರ್ಧಾರ ತಿಳಿಸಿ ಎಂದು ಆಗ್ರಹಿಸಿ ಬಾಲಿವುಡ್ ನಟ ಅಜಯ್ ದೇವಗನ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಚಿತ್ರೀಕರಣ ಕಾರಣದಿಂದ ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಮುಂಬೈನ ಫಿಲಂ ಸಿಟಿ ಕಡೆ ಹೋಗುತ್ತಿದ್ದ ಅಜಯ್ ದೇವಗನ್ ಕಾರನ್ನು ನಿಲ್ಲಿಸಿ ರೈತರ ಪ್ರತಿಭಟನೆ ಬಗ್ಗೆ ಮಾತಾಡಿ ಎಂದು ವ್ಯಕ್ತಿಯೊಬ್ಬ ಒತ್ತಡ ಹೇರಿದ ಎಂದು ತಿಳಿದು ಬಂದಿದೆ.
ಕಾಮಾಟಿಪುರದ ನಿಜ ಕತೆಗೆ ಅಜಯ್ ದೇವಗನ್ ಎಂಟ್ರಿ
ರಾಷ್ಟ್ರ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಓರ್ವ ಪಂಜಾಬಿಯಾಗಿ ರೈತರ ಕುರಿತು ಹೇಳಿಕೆ ಕೊಟ್ಟಿಲ್ಲ. ನೀನು ಪಂಜಾಬಿ ಶತ್ರು ಎಂದು ಅಜಯ್ ದೇವಗನ್ ಅವರನ್ನು ನಿಂದಿಸಲಾಗಿದೆಯಂತೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಜಯ್ ದೇವಗನ್ ಅವರನ್ನು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಂತರ ಅಜಯ್ ದೇವಗನ್ ಅವರನ್ನು ಮುಂಬೈ ಫಿಲಂ ಸಿಟಿವರೆಗೂ ಸುರಕ್ಷಿತವಾಗಿ ಕರೆದುಕೊಂಡು ಬಿಡಲಾಗಿದೆ.
ಅಜಯ್ ದೇವಗನ್ ಕಾರನ್ನು ನಿಲ್ಲಿಸಿದ ವ್ಯಕ್ತಿಯನ್ನು ರಾಜದೀಪ್ ಸಿಂಗ್ ಎಂದು ಗುರುತಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಐಪಿಸಿ ಸೆಕ್ಷನ್ 341, 504, 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಸೆಲೆಬ್ರಿಟಿ ರಿಹಾನ್ನಾ ಟ್ವೀಟ್ ಮಾಡಿದ ವೇಳೆ ಅಜಯ್ ದೇವಗನ್ ಟ್ವಿಟ್ಟರ್ನಲ್ಲಿ ರಿಹಾನ್ನಾ ಟ್ವೀಟ್ ಖಂಡಿಸಿದ್ದರು. ಇದು ಸಹಜವಾಗಿ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು.
Recommended Video