Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಗ್ರರೂಪ ತಾಳಿದ 'ಪದ್ಮಾವತಿ' ಚಿತ್ರದ ವಿರುದ್ಧ ಪ್ರತಿಭಟನೆ
'ಪದ್ಮಾವತಿ' ಚಿತ್ರದ ದರ್ಶನ ಭಾಗ್ಯ ಪ್ರೇಕ್ಷಕರಿಗೆ ಸಿಗೋದಿಲ್ಲ ಅನ್ನೋದು ಕನ್ಫರ್ಮ್ ಆಗಿದೆ. 'ಪದ್ಮಾವತಿ' ಸಿನಿಮಾ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳು ನಿಲ್ಲುತ್ತಿಲ್ಲ. ದಿನ ಕಳೆದಂತೆ ಹೋರಾಟ ಹಿಂಸಾಚಾರಕ್ಕೆ ತಿರುಗುತ್ತಿದೆ. ರಾಜಸ್ಥಾನದ ನಹರ್ಘಡ್ ಕೋಟೆಯಲ್ಲಿ 'ಮೃತದೇಹ'ವೊಂದು ನೇಣುಬಿಗಿದ ಪರಿಸ್ಥಿತಿಯಲ್ಲಿ ಕಂಡಿಬಂದಿದ್ದು, ಪ್ರತಿಭಟನೆಗಳು ಮತ್ತಷ್ಟು ಉಗ್ರರೂಪ ತಾಳುವ ಲಕ್ಷಣ ಕಾಣುತ್ತಿದೆ.
ಹೆಣದ ಸಮೀಪ "ನಾವು ತಲೆ ಕತ್ತರಿಸುವುದಿಲ್ಲ. ಬದಲಾಗಿ ನೇಣು ಹಾಕುತ್ತೇವೆ" ಎಂದು ಕಲ್ಲಿನ ಮೇಲೆ ಬರೆಯಲಾಗಿದೆ. ಅದಷ್ಟೇ ಅಲ್ಲದೆ ಮತ್ತೊಂದು ಕಲ್ಲಿನ ಮೇಲೆ 'ಪದ್ಮಾವತಿ' ಎಂದು ಬರೆಯಲಾಗಿದೆ. ದೂರನ್ನ ದಾಖಲಿಸಿರುವ ಪೊಲೀಸರು ಇದನ್ನ ಸಿನಿಮಾ ಜೊತೆಯಲ್ಲಿ ತಳುಕು ಹಾಕಬೇಡಿ ಎಂದಿದ್ದಾರೆ.
190 ಕೋಟಿ ಬಂಡವಾಳ ಹೂಡಿ 'ಪದ್ಮಾವತಿ' ಸಿನಿಮಾವನ್ನ ನಿರ್ಮಾಣ ಮಾಡಿರುವ ಚಿತ್ರತಂಡ, ಪ್ರತಿಭಟನೆ ನೋಡಿ ತಲೆ ಮೇಲೆ ಕೈಹೊತ್ತು ಕೂತಿದೆ. ಪ್ರತಿಭಟನೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 'ಪದ್ಮಾವತಿ' ಸಿನಿಮಾ ತಂಡ ಮೌನಕ್ಕೆ ಶರಣಾಗಿದೆ. ಡಿಸೆಂಬರ್ 1 ರಂದು ತೆರೆಕಾಣಬೇಕಿದ್ದ 'ಪದ್ಮಾವತಿ' ಚಿತ್ರಕ್ಕೆ ಇನ್ನೂ ಸೆನ್ಸಾರ್ ಸರ್ಟಿಫಿಕೆಟ್ ಸಿಕ್ಕಿಲ್ಲ. ಉಗ್ರರೂಪಕ್ಕೆ ತಿರುಗಿರುವ ಪ್ರತಿಭಟನೆ ಇನ್ಯಾವ ಪರಿಸ್ಥಿತಿಗೆ ತಲುಪುತ್ತೋ ಅನ್ನೋದೇ ಜನರ ಆತಂಕ.