Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: 'ರಕ್ತ ಚರಿತ್ರೆ' ನಿರ್ಮಾಪಕನಿಗೆ ಎನ್ಸಿಬಿ ಸಮನ್ಸ್
ಡ್ರಗ್ಸ್ ಪ್ರಕರಣ ಬಾಲಿವುಡ್ನ ಹಲವು ನಟ-ನಟಿಯರು ಹಾಗೂ ನಿರ್ದೇಶಕ, ನಿರ್ಮಾಪಕರಿಗೆ ಉರುಳಾಗುವ ಸಾಧ್ಯತೆ ಹೆಚ್ಚಿದೆ. ರಿಯಾ ಚಕ್ರವರ್ತಿ ಬಂಧನದ ಬಳಿಕ ಕೆಲವು ಸ್ಟಾರ್ ನಟಿಯರಿಗೆ ಎನ್ಸಿಬಿ ಅಧಿಕಾರಿಗಳು ಸಮನ್ಸ್ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಖ್ಯಾತ ನಿರ್ಮಾಪಕರಿಗೆ ಎನ್ಸಿಬಿಯಿಂದ ಬುಲಾವ್ ಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. ಹಿಂದಿ ಹಾಗೂ ತೆಲುಗಿನಲ್ಲಿ ಗುರುತಿಸಿಕೊಂಡಿರುವ ಮಧು ಮಂತೇನಾ ಅವರಿಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಡ್ರಗ್ಸ್ ದಂಧೆ: ದೀಪಿಕಾ ಪಡುಕೋಣೆಗೆ NCB ನೋಟಿಸ್ ನೀಡುವ ಸಾಧ್ಯತೆ
ಟ್ಯಾಲೆಂಟ್ ಮ್ಯಾನೇಜರ್ ಜಯ ಶಾ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಮಧು ಮಂತೇನಾ ಅವರ ಹೆಸರು ಚರ್ಚೆಯಾಗಿದೆ. ಹೀಗಾಗಿ, ಈ ಕುರಿತು ಸ್ಪಷ್ಟನೆ ಕೇಳಲು ನಾರ್ಕೋಟಿಕ್ಸ್ ಇಲಾಖೆ ಸೂಚಿಸಿದೆ.
ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರೀಶ್ಮಾ ಪ್ರಕಾಶ್ಗೆ ಸಮನ್ಸ್ ಜಾರಿ ಮಾಡಲಾಗಿದೆ. ಏಕಂದ್ರೆ, ಜಯ ಶಾ ಅವರ ಜೊತೆ ಕರೀಶ್ಮಾ ಪ್ರಕಾಶ್ ಸಂಪರ್ಕದಲ್ಲಿದ್ದರು ಹಾಗೂ ವಾಟ್ಸಾಪ್ ಚಾಟ್ನಲ್ಲಿ ಡ್ರಗ್ಸ್ ಕುರಿತು ಚರ್ಚೆಯಾಗಿದೆ ಎಂಬ ಎಂದು ಹೇಳಲಾಗಿದೆ. ಈ ಹಿನ್ನೆಲೆ ದೀಪಿಕಾಗೂ ಸಹ ಸಮನ್ಸ್ ಬಂದರೂ ಬರಬಹುದು.
ಇನ್ನು ಡ್ರಗ್ಸ್ ಜಾಲದಲ್ಲಿ ಖ್ಯಾತ ನಟಿಯರಾದ ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಹಾಗೂ ತೆಲುಗಿನ ಖ್ಯಾತ ನಟಿಗೂ ಸಮನ್ಸ್ ನೀಡುವ ಸಾಧ್ಯತೆ ದಟ್ಟವಾಗಿದೆ.
Recommended Video
ಅಂದ್ಹಾಗೆ, ಮಧು ಮಂತೇನಾ ಅವರು ತೆಲುಗಿನಲ್ಲಿ 'ಕಾರ್ತಿಕ್' ಎಂಬ ಚಿತ್ರವನ್ನು ಚೊಚ್ಚಲ ಬಾರಿಗೆ ನಿರ್ಮಿಸಿದ್ದರು. ಅದಾದ ಬಳಿಕ ಹಿಂದಿಯಲ್ಲಿ ಗಜಿನಿ, ರಣ್, ಬೆಂಗಾಳಿಯಲ್ಲಿ ಆಟೋಗ್ರಾಫ್, ಹಾಗೂ ರಕ್ತಚರಿತ್ರೆ ಚಿತ್ರವನ್ನು ಸಹ ನಿರ್ಮಿಸಿದ್ದಾರೆ.