Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: 'ರಕ್ತ ಚರಿತ್ರೆ' ನಿರ್ಮಾಪಕನಿಗೆ ಎನ್ಸಿಬಿ ಸಮನ್ಸ್
ಡ್ರಗ್ಸ್ ಪ್ರಕರಣ ಬಾಲಿವುಡ್ನ ಹಲವು ನಟ-ನಟಿಯರು ಹಾಗೂ ನಿರ್ದೇಶಕ, ನಿರ್ಮಾಪಕರಿಗೆ ಉರುಳಾಗುವ ಸಾಧ್ಯತೆ ಹೆಚ್ಚಿದೆ. ರಿಯಾ ಚಕ್ರವರ್ತಿ ಬಂಧನದ ಬಳಿಕ ಕೆಲವು ಸ್ಟಾರ್ ನಟಿಯರಿಗೆ ಎನ್ಸಿಬಿ ಅಧಿಕಾರಿಗಳು ಸಮನ್ಸ್ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಖ್ಯಾತ ನಿರ್ಮಾಪಕರಿಗೆ ಎನ್ಸಿಬಿಯಿಂದ ಬುಲಾವ್ ಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. ಹಿಂದಿ ಹಾಗೂ ತೆಲುಗಿನಲ್ಲಿ ಗುರುತಿಸಿಕೊಂಡಿರುವ ಮಧು ಮಂತೇನಾ ಅವರಿಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಡ್ರಗ್ಸ್ ದಂಧೆ: ದೀಪಿಕಾ ಪಡುಕೋಣೆಗೆ NCB ನೋಟಿಸ್ ನೀಡುವ ಸಾಧ್ಯತೆ
ಟ್ಯಾಲೆಂಟ್ ಮ್ಯಾನೇಜರ್ ಜಯ ಶಾ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಮಧು ಮಂತೇನಾ ಅವರ ಹೆಸರು ಚರ್ಚೆಯಾಗಿದೆ. ಹೀಗಾಗಿ, ಈ ಕುರಿತು ಸ್ಪಷ್ಟನೆ ಕೇಳಲು ನಾರ್ಕೋಟಿಕ್ಸ್ ಇಲಾಖೆ ಸೂಚಿಸಿದೆ.
ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರೀಶ್ಮಾ ಪ್ರಕಾಶ್ಗೆ ಸಮನ್ಸ್ ಜಾರಿ ಮಾಡಲಾಗಿದೆ. ಏಕಂದ್ರೆ, ಜಯ ಶಾ ಅವರ ಜೊತೆ ಕರೀಶ್ಮಾ ಪ್ರಕಾಶ್ ಸಂಪರ್ಕದಲ್ಲಿದ್ದರು ಹಾಗೂ ವಾಟ್ಸಾಪ್ ಚಾಟ್ನಲ್ಲಿ ಡ್ರಗ್ಸ್ ಕುರಿತು ಚರ್ಚೆಯಾಗಿದೆ ಎಂಬ ಎಂದು ಹೇಳಲಾಗಿದೆ. ಈ ಹಿನ್ನೆಲೆ ದೀಪಿಕಾಗೂ ಸಹ ಸಮನ್ಸ್ ಬಂದರೂ ಬರಬಹುದು.
ಇನ್ನು ಡ್ರಗ್ಸ್ ಜಾಲದಲ್ಲಿ ಖ್ಯಾತ ನಟಿಯರಾದ ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಹಾಗೂ ತೆಲುಗಿನ ಖ್ಯಾತ ನಟಿಗೂ ಸಮನ್ಸ್ ನೀಡುವ ಸಾಧ್ಯತೆ ದಟ್ಟವಾಗಿದೆ.
Recommended Video
ಅಂದ್ಹಾಗೆ, ಮಧು ಮಂತೇನಾ ಅವರು ತೆಲುಗಿನಲ್ಲಿ 'ಕಾರ್ತಿಕ್' ಎಂಬ ಚಿತ್ರವನ್ನು ಚೊಚ್ಚಲ ಬಾರಿಗೆ ನಿರ್ಮಿಸಿದ್ದರು. ಅದಾದ ಬಳಿಕ ಹಿಂದಿಯಲ್ಲಿ ಗಜಿನಿ, ರಣ್, ಬೆಂಗಾಳಿಯಲ್ಲಿ ಆಟೋಗ್ರಾಫ್, ಹಾಗೂ ರಕ್ತಚರಿತ್ರೆ ಚಿತ್ರವನ್ನು ಸಹ ನಿರ್ಮಿಸಿದ್ದಾರೆ.